<p><strong>ಬೆಂಗಳೂರು:</strong> ಹಂಗಾಮಿ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವೊ ಅವರನ್ನೇ ರಾಜ್ಯ ಸರ್ಕಾರ ಕಾಯಂ ಡಿಜಿ ಮತ್ತು ಐಜಿಪಿ ಆಗಿ ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ.<br /> <br /> ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯದಲ್ಲಿಯೂ ಪೊಲೀಸ್ ಸಿಬ್ಬಂದಿ ಮಂಡಳಿ ರಚಿಸಲಾಗಿದೆ. ಇದಕ್ಕೆ ಪೂರಕವಾಗಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಕೂಡ ಮಾಡಿರುವ ಕಾರಣ ಡಿಜಿ ಮತ್ತು ಐಜಿಪಿ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎನ್ನುವ ಅಧಿಕಾರ ಈಗ ರಾಜ್ಯ ಸರ್ಕಾರಕ್ಕೆ ಇದೆ.<br /> <br /> ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕಾನೂನು ಸಚಿವ ಎಸ್.ಸುರೇಶಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ ಮತ್ತು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಉಮೇಶ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.<br /> <br /> ಸೋಮವಾರ ಜಿಲ್ಲಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಅಶೋಕ ಅವರು, `ಹಂಗಾಮಿ ಡಿಜಿಪಿಗೆ ಹೆಚ್ಚಿನ ಅಧಿಕಾರ ಇಲ್ಲ. ಹೀಗಾಗಿ ಕಾಯಂ ಡಿಜಿಪಿ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಅತ್ಯಂತ ಹಿರಿಯ ಅಧಿಕಾರಿಯನ್ನು ಈ ಹುದ್ದೆಗೆ ನೇಮಕ ಮಾಡಿ, ಬಳಿಕ ಅದನ್ನು ಮುಖ್ಯಮಂತ್ರಿಯವರ ಅವಗಾಹನೆಗೆ ಕಳುಹಿಸಲಾಗುವುದು~ ಎಂದು ಹೇಳಿದರು.<br /> <br /> ಪಚಾವೊ ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿ. ಹೀಗಾಗಿ ಅವರ ಹೆಸರನ್ನೇ ಡಿಜಿಪಿ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಂಗಾಮಿ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವೊ ಅವರನ್ನೇ ರಾಜ್ಯ ಸರ್ಕಾರ ಕಾಯಂ ಡಿಜಿ ಮತ್ತು ಐಜಿಪಿ ಆಗಿ ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ.<br /> <br /> ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯದಲ್ಲಿಯೂ ಪೊಲೀಸ್ ಸಿಬ್ಬಂದಿ ಮಂಡಳಿ ರಚಿಸಲಾಗಿದೆ. ಇದಕ್ಕೆ ಪೂರಕವಾಗಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಕೂಡ ಮಾಡಿರುವ ಕಾರಣ ಡಿಜಿ ಮತ್ತು ಐಜಿಪಿ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎನ್ನುವ ಅಧಿಕಾರ ಈಗ ರಾಜ್ಯ ಸರ್ಕಾರಕ್ಕೆ ಇದೆ.<br /> <br /> ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕಾನೂನು ಸಚಿವ ಎಸ್.ಸುರೇಶಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ ಮತ್ತು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಉಮೇಶ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.<br /> <br /> ಸೋಮವಾರ ಜಿಲ್ಲಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಅಶೋಕ ಅವರು, `ಹಂಗಾಮಿ ಡಿಜಿಪಿಗೆ ಹೆಚ್ಚಿನ ಅಧಿಕಾರ ಇಲ್ಲ. ಹೀಗಾಗಿ ಕಾಯಂ ಡಿಜಿಪಿ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಅತ್ಯಂತ ಹಿರಿಯ ಅಧಿಕಾರಿಯನ್ನು ಈ ಹುದ್ದೆಗೆ ನೇಮಕ ಮಾಡಿ, ಬಳಿಕ ಅದನ್ನು ಮುಖ್ಯಮಂತ್ರಿಯವರ ಅವಗಾಹನೆಗೆ ಕಳುಹಿಸಲಾಗುವುದು~ ಎಂದು ಹೇಳಿದರು.<br /> <br /> ಪಚಾವೊ ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿ. ಹೀಗಾಗಿ ಅವರ ಹೆಸರನ್ನೇ ಡಿಜಿಪಿ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>