<p><strong>ಹಾಸನ</strong>: ಕಾರು ಮತ್ತು ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದು ಮೂರು ಮಂದಿ ಮೃತಪಟ್ಟು ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಗಾಯಗೊಂಡಿರುವ ಘಟನೆ ಹಾಸನ-ಬೇಲೂರು ರಸ್ತೆಯ ಕಲ್ಕೆರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.<br /> <br /> ಅಫ್ರೋಜ್ (35), ರುಬೀನಾ (27) ಹಾಗೂ ಫಕ್ರುದ್ದೀನ್ (35), ಮೇಹಕ್ (3) ಮೃತಪಟ್ಟ ದುರ್ದೈವಿಗಳು. <br /> ಘಟನೆಯಲ್ಲಿ ರೇಶ್ಮಾ (27) ಮೆಹೆಕ್ (3), ತಮನ್ನಾ (6), ಫರ್ದೀನ್ (8) ಹಾಗೂ ಇಮ್ತಿಯಾಜ್ (25) ಎಂಬುವವರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮೂರು ವರ್ಷದ ಬಾಲಕಿ ಮೆಹೆಕ್ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.<br /> <br /> ಚಿಕ್ಕಮಗಳೂರಿನ ಶಂಕರಿಪುರಂ ಬಡಾವಣೆಯ ನಿವಾಸಿಗಳಾದ ಅಫ್ರೋಜ್, ಅವರ ಪತ್ನಿ ರುಬೀನಾ, ಜೆ.ಪಿ ನಗರದ ಫಕ್ರುದ್ದೀನ್ ಮತ್ತಿತರರು ಮಾರುತಿ ಓಮ್ನಿ ಕಾರಿನಲ್ಲಿ ಮೈಸೂರಿನತ್ತ ಹೋಗುತ್ತಿದ್ದರು. ಸಂಜೆ 6.30ರ ಸುಮಾರಿಗೆ ಕಲ್ಕೆರೆ ಬಳಿ ಮೈಸೂರು ಕಡೆಯಿಂದ ಬರುತ್ತಿರುವ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.<br /> <br /> ಅಪಘಾತದ ರಭಸಕ್ಕೆ ಮಾರುತಿ ಕಾರಿನ ಛಾವಣಿಯೇ ಕಿತ್ತು ಹೊರಗೆ ಬಂದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ ಮಗು ಮೆಹೆಕ್ಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.<br /> ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕಾರು ಮತ್ತು ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದು ಮೂರು ಮಂದಿ ಮೃತಪಟ್ಟು ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಗಾಯಗೊಂಡಿರುವ ಘಟನೆ ಹಾಸನ-ಬೇಲೂರು ರಸ್ತೆಯ ಕಲ್ಕೆರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.<br /> <br /> ಅಫ್ರೋಜ್ (35), ರುಬೀನಾ (27) ಹಾಗೂ ಫಕ್ರುದ್ದೀನ್ (35), ಮೇಹಕ್ (3) ಮೃತಪಟ್ಟ ದುರ್ದೈವಿಗಳು. <br /> ಘಟನೆಯಲ್ಲಿ ರೇಶ್ಮಾ (27) ಮೆಹೆಕ್ (3), ತಮನ್ನಾ (6), ಫರ್ದೀನ್ (8) ಹಾಗೂ ಇಮ್ತಿಯಾಜ್ (25) ಎಂಬುವವರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮೂರು ವರ್ಷದ ಬಾಲಕಿ ಮೆಹೆಕ್ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.<br /> <br /> ಚಿಕ್ಕಮಗಳೂರಿನ ಶಂಕರಿಪುರಂ ಬಡಾವಣೆಯ ನಿವಾಸಿಗಳಾದ ಅಫ್ರೋಜ್, ಅವರ ಪತ್ನಿ ರುಬೀನಾ, ಜೆ.ಪಿ ನಗರದ ಫಕ್ರುದ್ದೀನ್ ಮತ್ತಿತರರು ಮಾರುತಿ ಓಮ್ನಿ ಕಾರಿನಲ್ಲಿ ಮೈಸೂರಿನತ್ತ ಹೋಗುತ್ತಿದ್ದರು. ಸಂಜೆ 6.30ರ ಸುಮಾರಿಗೆ ಕಲ್ಕೆರೆ ಬಳಿ ಮೈಸೂರು ಕಡೆಯಿಂದ ಬರುತ್ತಿರುವ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.<br /> <br /> ಅಪಘಾತದ ರಭಸಕ್ಕೆ ಮಾರುತಿ ಕಾರಿನ ಛಾವಣಿಯೇ ಕಿತ್ತು ಹೊರಗೆ ಬಂದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ ಮಗು ಮೆಹೆಕ್ಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.<br /> ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>