<p><strong>ಕಾರ್ಕಳ</strong>: ತಾಲ್ಲೂಕಿನ ಮುಡಾರು ಗ್ರಾಮದ ಬಜಗೋಳಿ ಪೇಟೆಯಲ್ಲಿರುವ ಹೋಟೆಲ್ಗಳ ತ್ಯಾಜ್ಯವು ಪಟ್ಟಣದ ಜನವಸತಿ ಪ್ರದೇಶದಲ್ಲಿ ಹರಿಯುತ್ತಿದ್ದು, ಇದರಿಂದ ದುರ್ನಾತ ಹಾಗೂ ಸೊಳ್ಳೆಗಳ ಕಾಟದಿಂದ ಪರಿಸರದಲ್ಲಿ ಸಾಂಕ್ರಾಮಿಕ ರೋಗಭೀತಿ ಉಂಟಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯರಾಮ ಸಾಲ್ಯಾನ್ ಹೇಳಿದರು.<br /> <br /> ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು. <br /> ಈ ವಿಷಯಕ್ಕೆ ದನಿಗೂಡಿಸಿದ ಕೆಲವರು ಬಜಗೋಳಿಯಲ್ಲಿ ಒಳಚರಂಡಿ ಕಾಮಗಾರಿ ಅಪೂರ್ಣವಾಗಿದೆ ಎಂದರು. ಶಾಸಕ ಗೋಪಾಲ ಭಂಡಾರಿ ಇದಕ್ಕೆ ಪ್ರತಿಕ್ರಿಯಿಸಿ ಡ್ರೈನೇಜ್ ವ್ಯವಸ್ಥೆಯಿಲ್ಲದ ಎಷ್ಟೋ ಊರುಗಳಲ್ಲಿ ತ್ಯಾಜ್ಯವನ್ನು ಹರಿಯಬಿಡುವುದಿಲ್ಲ ಬಜಗೋಳಿಯಲ್ಲಿ ಮಾತ್ರ ಏಕೆ ಹೀಗಾಗುತ್ತಿದೆ ಎಂದು ಪ್ರಶ್ನಿಸಿದರು.<br /> <br /> ಆಹಾರ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ನಿರ್ವಹಿಸ ಲಾಗದ ಹೋಟೆಲ್ಗಳ ಪರವಾನಗಿ ರದ್ದು ಪಡಿಸಿ ಸಾರ್ವಜನಿಕರ ಹಿತದೃಷ್ಟಿ ಯನ್ನು ಕಾಪಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.<br /> <br /> ವರಂಗ ಗ್ರಾಮದ ತಲೆಮನೆಯಲ್ಲಿ ವೆಂಟೆಂಡ್ ಡ್ಯಾಂನ ಹಲಗೆಯನ್ನು ತೆಗೆಯದಿರುವುದರಿಂದ ಅಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅದನ್ನು ಸರಿಪಡಿಸಲು ತಹಶೀಲ್ದಾರರ ಮೂಲಕ ಸಂಬಂಧಪಟ್ಟ ಇಲಾಖೆಗೆ ತಿಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. <br /> <br /> ತಾಲ್ಲೂಕಿನಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಿರುವ ಏಳು ಶಾಲೆಗಳನ್ನು ಮುಚ್ಚಲಾಗುತ್ತಿದೆ ಆದರೆ ಶಾಲಾ ಕಟ್ಟಡಗಳನ್ನು ಉಳಿಸಿಕೊಳ್ಳಬೇಕಾಗಿದೆ. ಚೆನ್ನಾಗಿ ನಿರ್ವಹಿಸದಿದ್ದರೆ ಅವು ಹಾಳು ಬೀಳುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.<br /> <br /> ಇದಕ್ಕೆ ಪ್ರತಿಕ್ರಿಯೆಸಿದ ಶಿಕ್ಷಣಾಧಿಕಾರಿ ರವಿಶಂಕರ್ರಾವ್ ಇಲಾಖೆ ಅವುಗಳನ್ನು ಉಳಿಸಿಕೊಳ್ಳುವ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. <br /> <br /> ಪಶುವೈದ್ಯಕೀಯ ಆಸ್ಪತ್ರೆಯಲ್ಲಿ 88 ಮಂದಿ ಸಿಬ್ಬಂದಿ ಅವಶ್ಯಕತೆಯಿದೆ. ಆದರೆ ಅಲ್ಲಿ ಕೇವಲ 21 ಮಂದಿ ಮಾತ್ರ ಇದ್ದು, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲು ನಿರ್ಣಯಿಸಲಾಯಿತು. <br /> <br /> ತಾಲ್ಲೂಕಿನಲ್ಲಿ ಒಟ್ಟು 86 ಮಲೇರಿಯ ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಪುರಸಭಾ ವ್ಯಾಪ್ತಿಯಲ್ಲಿ 23 ಪ್ರಕರಣಗಳು ಕಂಡು ಬಂದಿವೆ. <br /> <br /> ಇದು ದೂರದ ಊರಿನಿಂದ ಪಟ್ಟಣಕ್ಕೆ ಬಂದವರಿಂದ ಹರಡುತ್ತಿದೆ ಎಂದು ತಾಲ್ಲೂಕು ಆರೋಗ್ಯ ಇಲಾಖೆಯವರು ಮಾಹಿತಿ ನೀಡಿದರು. <br /> <br /> ಬೆಳ್ಮಣ್ -ಕಾರ್ಕಳ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆದು ತುಂಬಾ ಸಮಯವಾಗಿದೆ. ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕನಿಷ್ಠ ರಸ್ತೆ ಹೊಂಡಗಳನ್ನು ಮುಚ್ಚುವ ಕೆಲಸ ಆರಂಭಿಸಬೇಕು ಎಂದು ಶಾಸಕ ಗೋಪಾಲ ಭಂಡಾರಿ ತಿಳಿಸಿದರು. <br /> <br /> ನಂತರ ತಾಲ್ಲೂಕಿನ ನಿರ್ಮಿತಿ ಕೇಂದ್ರಗಳ ಕಾರ್ಯ ನಿರ್ವಹಣೆ, ಕೃಷಿ ನಷ್ಟ, ಮೆಸ್ಕಾಂ ಬಗ್ಗೆ, ದಾರಿ ದೀಪ, ಪಡಿತರ ಚೀಟಿ ಬಗ್ಗೆ ಅಸಮಾಧಾನಗಳು ಸಭೆಯಲ್ಲಿ ಕೇಳಿ ಬಂದವು. <br /> <br /> ಉಪಾಧ್ಯಕ್ಷ ರವೀಂದ್ರ ಕುಮಾರ್ ಕುಕ್ಕುಂದೂರು, ಪುರಸಭಾಧ್ಯಕ್ಷೆ ಪ್ರತಿಮಾ ಮೋಹನ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಬೇಕಲ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ತಾಲ್ಲೂಕಿನ ಮುಡಾರು ಗ್ರಾಮದ ಬಜಗೋಳಿ ಪೇಟೆಯಲ್ಲಿರುವ ಹೋಟೆಲ್ಗಳ ತ್ಯಾಜ್ಯವು ಪಟ್ಟಣದ ಜನವಸತಿ ಪ್ರದೇಶದಲ್ಲಿ ಹರಿಯುತ್ತಿದ್ದು, ಇದರಿಂದ ದುರ್ನಾತ ಹಾಗೂ ಸೊಳ್ಳೆಗಳ ಕಾಟದಿಂದ ಪರಿಸರದಲ್ಲಿ ಸಾಂಕ್ರಾಮಿಕ ರೋಗಭೀತಿ ಉಂಟಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯರಾಮ ಸಾಲ್ಯಾನ್ ಹೇಳಿದರು.<br /> <br /> ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು. <br /> ಈ ವಿಷಯಕ್ಕೆ ದನಿಗೂಡಿಸಿದ ಕೆಲವರು ಬಜಗೋಳಿಯಲ್ಲಿ ಒಳಚರಂಡಿ ಕಾಮಗಾರಿ ಅಪೂರ್ಣವಾಗಿದೆ ಎಂದರು. ಶಾಸಕ ಗೋಪಾಲ ಭಂಡಾರಿ ಇದಕ್ಕೆ ಪ್ರತಿಕ್ರಿಯಿಸಿ ಡ್ರೈನೇಜ್ ವ್ಯವಸ್ಥೆಯಿಲ್ಲದ ಎಷ್ಟೋ ಊರುಗಳಲ್ಲಿ ತ್ಯಾಜ್ಯವನ್ನು ಹರಿಯಬಿಡುವುದಿಲ್ಲ ಬಜಗೋಳಿಯಲ್ಲಿ ಮಾತ್ರ ಏಕೆ ಹೀಗಾಗುತ್ತಿದೆ ಎಂದು ಪ್ರಶ್ನಿಸಿದರು.<br /> <br /> ಆಹಾರ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ನಿರ್ವಹಿಸ ಲಾಗದ ಹೋಟೆಲ್ಗಳ ಪರವಾನಗಿ ರದ್ದು ಪಡಿಸಿ ಸಾರ್ವಜನಿಕರ ಹಿತದೃಷ್ಟಿ ಯನ್ನು ಕಾಪಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.<br /> <br /> ವರಂಗ ಗ್ರಾಮದ ತಲೆಮನೆಯಲ್ಲಿ ವೆಂಟೆಂಡ್ ಡ್ಯಾಂನ ಹಲಗೆಯನ್ನು ತೆಗೆಯದಿರುವುದರಿಂದ ಅಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅದನ್ನು ಸರಿಪಡಿಸಲು ತಹಶೀಲ್ದಾರರ ಮೂಲಕ ಸಂಬಂಧಪಟ್ಟ ಇಲಾಖೆಗೆ ತಿಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. <br /> <br /> ತಾಲ್ಲೂಕಿನಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಿರುವ ಏಳು ಶಾಲೆಗಳನ್ನು ಮುಚ್ಚಲಾಗುತ್ತಿದೆ ಆದರೆ ಶಾಲಾ ಕಟ್ಟಡಗಳನ್ನು ಉಳಿಸಿಕೊಳ್ಳಬೇಕಾಗಿದೆ. ಚೆನ್ನಾಗಿ ನಿರ್ವಹಿಸದಿದ್ದರೆ ಅವು ಹಾಳು ಬೀಳುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.<br /> <br /> ಇದಕ್ಕೆ ಪ್ರತಿಕ್ರಿಯೆಸಿದ ಶಿಕ್ಷಣಾಧಿಕಾರಿ ರವಿಶಂಕರ್ರಾವ್ ಇಲಾಖೆ ಅವುಗಳನ್ನು ಉಳಿಸಿಕೊಳ್ಳುವ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. <br /> <br /> ಪಶುವೈದ್ಯಕೀಯ ಆಸ್ಪತ್ರೆಯಲ್ಲಿ 88 ಮಂದಿ ಸಿಬ್ಬಂದಿ ಅವಶ್ಯಕತೆಯಿದೆ. ಆದರೆ ಅಲ್ಲಿ ಕೇವಲ 21 ಮಂದಿ ಮಾತ್ರ ಇದ್ದು, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲು ನಿರ್ಣಯಿಸಲಾಯಿತು. <br /> <br /> ತಾಲ್ಲೂಕಿನಲ್ಲಿ ಒಟ್ಟು 86 ಮಲೇರಿಯ ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಪುರಸಭಾ ವ್ಯಾಪ್ತಿಯಲ್ಲಿ 23 ಪ್ರಕರಣಗಳು ಕಂಡು ಬಂದಿವೆ. <br /> <br /> ಇದು ದೂರದ ಊರಿನಿಂದ ಪಟ್ಟಣಕ್ಕೆ ಬಂದವರಿಂದ ಹರಡುತ್ತಿದೆ ಎಂದು ತಾಲ್ಲೂಕು ಆರೋಗ್ಯ ಇಲಾಖೆಯವರು ಮಾಹಿತಿ ನೀಡಿದರು. <br /> <br /> ಬೆಳ್ಮಣ್ -ಕಾರ್ಕಳ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆದು ತುಂಬಾ ಸಮಯವಾಗಿದೆ. ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕನಿಷ್ಠ ರಸ್ತೆ ಹೊಂಡಗಳನ್ನು ಮುಚ್ಚುವ ಕೆಲಸ ಆರಂಭಿಸಬೇಕು ಎಂದು ಶಾಸಕ ಗೋಪಾಲ ಭಂಡಾರಿ ತಿಳಿಸಿದರು. <br /> <br /> ನಂತರ ತಾಲ್ಲೂಕಿನ ನಿರ್ಮಿತಿ ಕೇಂದ್ರಗಳ ಕಾರ್ಯ ನಿರ್ವಹಣೆ, ಕೃಷಿ ನಷ್ಟ, ಮೆಸ್ಕಾಂ ಬಗ್ಗೆ, ದಾರಿ ದೀಪ, ಪಡಿತರ ಚೀಟಿ ಬಗ್ಗೆ ಅಸಮಾಧಾನಗಳು ಸಭೆಯಲ್ಲಿ ಕೇಳಿ ಬಂದವು. <br /> <br /> ಉಪಾಧ್ಯಕ್ಷ ರವೀಂದ್ರ ಕುಮಾರ್ ಕುಕ್ಕುಂದೂರು, ಪುರಸಭಾಧ್ಯಕ್ಷೆ ಪ್ರತಿಮಾ ಮೋಹನ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಬೇಕಲ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>