<p>ಕೃಷ್ಣರಾಜಪುರ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಕ್ಕೂ ಹೆಚ್ಚು ದಿನಗೂಲಿ ಕಾರ್ಮಿಕರು ಭಾರತ ಆಹಾರ ನಿಗಮದ ಎದುರು ಎರಡು ವಾರಗಳಿಂದ ಧರಣಿ ನಡೆಸುತ್ತಿದ್ದು, ಸಂಸದರು ಮತ್ತು ಶಾಸಕರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.<br /> <br /> ಸಂಸದ ಡಿ.ಬಿ.ಚಂದ್ರೇಗೌಡ ಮಾತನಾಡಿ, `ಇದೇ 24ರಂದು ಸಂಸತ್ತಿನ ಅಧಿವೇಶನದಲ್ಲಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಗಮನ ಸೆಳೆದು ಚರ್ಚಿಸಲಾಗುವುದು. ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಇತರ ಸಂಸದರ ಸಹಕಾರ ಪಡೆದು ಕೇಂದ್ರವನ್ನು ಒತ್ತಾಯಿಸಲಾಗುವುದು~ ಎಂದರು.<br /> <br /> ಸಂಸದ ಪಿ.ಸಿ.ಮೋಹನ್, `ರಾಜ್ಯವ್ಯಾಪಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ. 18- 20ವರ್ಷಗಳಿಗಿಂತಲೂ ದಿನಗೂಲಿಯಾಗಿಯೇ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಇತರರಿಗೆ ನೀಡುತ್ತಿರುವ ಸೌಲಭ್ಯಗಳನ್ನು ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು~ ಎಂದರು.<br /> <br /> ಶಾಸಕ ಎನ್.ಎಸ್.ನಂದೀಶ ರೆಡ್ಡಿ ಮಾತನಾಡಿ, `ದಿನಗೂಲಿ ನೌಕರರಿಗೆ ವಾಜಪೇಯಿ `ಆರೋಗ್ಯಶ್ರೆ~ ಕಾರ್ಡುಗಳು ಮತ್ತು ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಆಶ್ವಾಸನೆ ನೀಡಿದರು.<br /> ಪಾಲಿಕೆ ಸದಸ್ಯ ಸುಕುಮಾರ್, ಎಸ್.ಎಸ್.ಪ್ರಸಾದ್, ನಗರಸಭೆ ಮಾಜಿ ಸದಸ್ಯ ಬಾಕ್ಸರ್ ನಾಗರಾಜ್, ವಾಸುದೇವ ರೆಡ್ಡಿ, ಗೌರಮ್ಮ ಮತ್ತಿತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಕ್ಕೂ ಹೆಚ್ಚು ದಿನಗೂಲಿ ಕಾರ್ಮಿಕರು ಭಾರತ ಆಹಾರ ನಿಗಮದ ಎದುರು ಎರಡು ವಾರಗಳಿಂದ ಧರಣಿ ನಡೆಸುತ್ತಿದ್ದು, ಸಂಸದರು ಮತ್ತು ಶಾಸಕರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.<br /> <br /> ಸಂಸದ ಡಿ.ಬಿ.ಚಂದ್ರೇಗೌಡ ಮಾತನಾಡಿ, `ಇದೇ 24ರಂದು ಸಂಸತ್ತಿನ ಅಧಿವೇಶನದಲ್ಲಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಗಮನ ಸೆಳೆದು ಚರ್ಚಿಸಲಾಗುವುದು. ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಇತರ ಸಂಸದರ ಸಹಕಾರ ಪಡೆದು ಕೇಂದ್ರವನ್ನು ಒತ್ತಾಯಿಸಲಾಗುವುದು~ ಎಂದರು.<br /> <br /> ಸಂಸದ ಪಿ.ಸಿ.ಮೋಹನ್, `ರಾಜ್ಯವ್ಯಾಪಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ. 18- 20ವರ್ಷಗಳಿಗಿಂತಲೂ ದಿನಗೂಲಿಯಾಗಿಯೇ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಇತರರಿಗೆ ನೀಡುತ್ತಿರುವ ಸೌಲಭ್ಯಗಳನ್ನು ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು~ ಎಂದರು.<br /> <br /> ಶಾಸಕ ಎನ್.ಎಸ್.ನಂದೀಶ ರೆಡ್ಡಿ ಮಾತನಾಡಿ, `ದಿನಗೂಲಿ ನೌಕರರಿಗೆ ವಾಜಪೇಯಿ `ಆರೋಗ್ಯಶ್ರೆ~ ಕಾರ್ಡುಗಳು ಮತ್ತು ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಆಶ್ವಾಸನೆ ನೀಡಿದರು.<br /> ಪಾಲಿಕೆ ಸದಸ್ಯ ಸುಕುಮಾರ್, ಎಸ್.ಎಸ್.ಪ್ರಸಾದ್, ನಗರಸಭೆ ಮಾಜಿ ಸದಸ್ಯ ಬಾಕ್ಸರ್ ನಾಗರಾಜ್, ವಾಸುದೇವ ರೆಡ್ಡಿ, ಗೌರಮ್ಮ ಮತ್ತಿತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>