ಕಾರ್ಮಿಕರ ಬೇಡಿಕೆ: ನಾಳೆ ಪ್ರತಿಭಟನೆ
ಬೆಂಗಳೂರು: `ಕಾರ್ಮಿಕ ವರ್ಗದ ಬೇಡಿಕೆಗಳ ಬಗ್ಗೆ ಮಂಗಳವಾರ (ಜು. 10) ಸಾಮೂಹಿಕ ಪ್ರದರ್ಶನಗಳ ಮೂಲಕ ಪ್ರತಿಭಟನೆ ನಡೆಸಲಾಗುವುದು~ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.
ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬೆಲೆ ಏರಿಕೆ ಮುಗಿಲು ಮುಟ್ಟಿದೆ. ಆದರೆ, ಜನ ಸಾಮಾನ್ಯರ ಉಳಿವಿಗಾಗಿ ಸೂಕ್ತ ಕ್ರಮಗಳ ಮೂಲಕ ಬೆಲೆ ಏರಿಕೆಯನ್ನು ಸರ್ಕಾರ ತಡೆಗಟ್ಟಬೇಕು. ನಿಯಂತ್ರಿತ ಬೆಲೆಯಲ್ಲಿ ಎಲ್ಲರಿಗೂ ಅಗತ್ಯ ವಸ್ತುಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು~ ಎಂದರು.
`ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಹಂತ ಹಂತವಾಗಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದರು.
ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಎಸ್.ನಾಗರಾಜು, ಡಿ.ಎ. ವಿಜಯ ಭಾಸ್ಕರ್, ಶಿವಣ್ಣ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.