<p><strong>ಹಿರಿಯೂರು:</strong> ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಡಿ.ಎಂ.ಮಲಿಯಪ್ಪ ಒತ್ತಾಯಿಸಿದರು.<br /> <br /> ನಗರದಲ್ಲಿ ಶುಕ್ರವಾರ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯ್ತಿ ನೌಕರರ ಸಂಘ, ಹಮಾಲರ ಸಂಘ, ಬಿಸಿಯೂಟ ನೌಕರರ ಸಂಘ, ಗಣಕಯಂತ್ರ ನೌಕರರ ಸಂಘದವರು ವಿವಿಧ ಬೇಡಿಕೆ ಈಡೇರಿಸುವಂತೆ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಕಾರ್ಮಿಕರು ಮತ್ತು ದುಡಿಯುವ ವರ್ಗದವರನ್ನು ಸಂಕಷ್ಟಕ್ಕೆ ಗುರಿಮಾಡುವಂತಹ ನೀತಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸುತ್ತಿವೆ. ಉದಾರೀಕರಣ, ಖಾಸಗೀಕರಣ, ಜಾಗತೀಕರಣದ ಪ್ರಭಾವದಿಂದ ದುಡಿಯುವ ವರ್ಗ ಬೀದಿಗೆ ಬಿದ್ದಿದ್ದು, ವಿದೇಶಿ ಬಂಡವಾಳಗಾರರು ದೇಶವನ್ನು ದೋಚುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಆರೋಪಿಸಿದರು.<br /> <br /> ಸರ್ಕಾರದ ವಿವಿಧ ಜನಪ್ರಿಯ ಯೋಜನೆಗಳಾಗಿರುವ ಅಕ್ಷರ ದಾಸೋಹ, ಆಶಾ, ಅಂಗನವಾಡಿಗಳಲ್ಲಿ ಲಕ್ಷಾಂತರ ಬಡವರು ತಮ್ಮ ಹುದ್ದೆಯನ್ನು ಕಾಯಂ ಮಾಡಬಹುದು ಎನ್ನುವ ನಿರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. <br /> <br /> ಗ್ರಾಮ ಪಂಚಾಯ್ತಿ ನೌಕರರನ್ನು, ಹಮಾಲರನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇವರಿಗೆ ಗೌರವದ ಬದುಕು ನಡೆಸಲು ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ಮಲಿಯಪ್ಪ ಒತ್ತಾಯಿಸಿದರು.<br /> <br /> ಆಗ್ರಹ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯಲ್ಲಿ ಎಂ.ವಿಜಯಮ್ಮ, ರಾಮಣ್ಣ, ಎಂ.ಬಾಲಮ್ಮ ಪಾಲ್ಗೊಂಡಿದ್ದರು. ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರರಿಗೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಡಿ.ಎಂ.ಮಲಿಯಪ್ಪ ಒತ್ತಾಯಿಸಿದರು.<br /> <br /> ನಗರದಲ್ಲಿ ಶುಕ್ರವಾರ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯ್ತಿ ನೌಕರರ ಸಂಘ, ಹಮಾಲರ ಸಂಘ, ಬಿಸಿಯೂಟ ನೌಕರರ ಸಂಘ, ಗಣಕಯಂತ್ರ ನೌಕರರ ಸಂಘದವರು ವಿವಿಧ ಬೇಡಿಕೆ ಈಡೇರಿಸುವಂತೆ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಕಾರ್ಮಿಕರು ಮತ್ತು ದುಡಿಯುವ ವರ್ಗದವರನ್ನು ಸಂಕಷ್ಟಕ್ಕೆ ಗುರಿಮಾಡುವಂತಹ ನೀತಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸುತ್ತಿವೆ. ಉದಾರೀಕರಣ, ಖಾಸಗೀಕರಣ, ಜಾಗತೀಕರಣದ ಪ್ರಭಾವದಿಂದ ದುಡಿಯುವ ವರ್ಗ ಬೀದಿಗೆ ಬಿದ್ದಿದ್ದು, ವಿದೇಶಿ ಬಂಡವಾಳಗಾರರು ದೇಶವನ್ನು ದೋಚುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಆರೋಪಿಸಿದರು.<br /> <br /> ಸರ್ಕಾರದ ವಿವಿಧ ಜನಪ್ರಿಯ ಯೋಜನೆಗಳಾಗಿರುವ ಅಕ್ಷರ ದಾಸೋಹ, ಆಶಾ, ಅಂಗನವಾಡಿಗಳಲ್ಲಿ ಲಕ್ಷಾಂತರ ಬಡವರು ತಮ್ಮ ಹುದ್ದೆಯನ್ನು ಕಾಯಂ ಮಾಡಬಹುದು ಎನ್ನುವ ನಿರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. <br /> <br /> ಗ್ರಾಮ ಪಂಚಾಯ್ತಿ ನೌಕರರನ್ನು, ಹಮಾಲರನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇವರಿಗೆ ಗೌರವದ ಬದುಕು ನಡೆಸಲು ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ಮಲಿಯಪ್ಪ ಒತ್ತಾಯಿಸಿದರು.<br /> <br /> ಆಗ್ರಹ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯಲ್ಲಿ ಎಂ.ವಿಜಯಮ್ಮ, ರಾಮಣ್ಣ, ಎಂ.ಬಾಲಮ್ಮ ಪಾಲ್ಗೊಂಡಿದ್ದರು. ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರರಿಗೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>