<p><strong>ರಾಯಚೂರು: </strong>ಇಲ್ಲಿನ ಸರ್ಕಾರಿ ನೌಕರರ ಸಂಘದ ಮನೋರಂಜನಾ ಕೇಂದ್ರದಲ್ಲಿ ಸಿಐಟಿಯು ಸಂಘಟನೆ ವತಿಯಿಂದ ಸೋಮವಾರ ಬಿಸಿಯೂಟ ನೌಕರರ 3ನೇ ತಾಲ್ಲೂಕು ಸಮ್ಮೇಳನ ಜರುಗಿತು.<br /> <br /> ಸಮ್ಮೇಳನ ಉದ್ಘಾಟಿಸಿದ ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖ್ ಷಾ ಖಾದ್ರಿ ಮಾತನಾಡಿ, ದೆಹಲಿಯಲ್ಲಿ ಈಚೆಗೆ ಕೇಂದ್ರ ಕಾರ್ಮಿಕ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಭಾರತೀಯ ಕಾರ್ಮಿಕರ ಸಮ್ಮೇಳನ ನಡೆಯಿತು ಎಂದು ಹೇಳಿದರು.<br /> <br /> ಬಿಸಿಯೂಟ ನೌಕರರರನ್ನು ಕಾರ್ಮಿಕರರೆಂದು ಪರಿಗಣಿಸಬೇಕು ಹಾಗೂ ಕನಿಷ್ಠ ವೇತನ ನೀಡಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದನ್ನು ಜಾರಿಗೊಳಿಸಲು ಬೆಂಗಳೂರಿನಲ್ಲಿ ಜೂನ್ 14ರಂದು ನಡೆಯುವ ಹೋರಾಟದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಬೇಕು ಎಂದು ಮನವಿ ಮಾಡಿದರು.<br /> <br /> ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ ಮಾತನಾಡಿ, ಅತಿ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುವ ಸರ್ಕಾರದ ನೀತಿ ಖಂಡನೀಯ. 10ಸಾವಿರ ಕನಿಷ್ಠ ವೇತನ ಹಾಗೂ ಪಿಂಚಣಿ ಸೇರಿದಂತೆ ಅನೇಕ ಬೇಡಿಕೆ ಈಡೇರಿಕೆಗೆ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.<br /> <br /> ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿ ಕೆ.ಜಿ ವೀರೇಶ ಮಾತನಾಡಿ, ಬೆಲೆ ಏರಿಕೆ ತಕ್ಕಂತೆ ವೇತನ ಹೆಚ್ಚಳ ಮಾಡಬೇಕು ಸರ್ಕಾರ ಕ್ರಮ ಕೈಗೊಳ್ಳಬೇಕು. ಬಿಸಿಯೂಟ ನೌಕರರ ನಡೆಸುವ ಹೋರಾಟಕ್ಕೆ ಕರ್ನಾಟಕ ಪ್ರಾಂತ ರೈತ ಸಂಘವು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು.<br /> <br /> ಸಿಐಟಿಯು ಸಂಘಟನೆ ಕಾರ್ಯದರ್ಶಿ ವೈ.ಈರಣ್ಣ, ಬಿಸಿಯೂಟ ನೌಕರರ ಪದಾಧಿಕಾರಿಗಳಾದ ಗೌರಮ್ಮ, ಅಕ್ಕಮ್ಮ, ಕಲ್ಯಾಣಿ ಸೇರಿದಂತೆ ಅನೇಕ ನೌಕರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಇಲ್ಲಿನ ಸರ್ಕಾರಿ ನೌಕರರ ಸಂಘದ ಮನೋರಂಜನಾ ಕೇಂದ್ರದಲ್ಲಿ ಸಿಐಟಿಯು ಸಂಘಟನೆ ವತಿಯಿಂದ ಸೋಮವಾರ ಬಿಸಿಯೂಟ ನೌಕರರ 3ನೇ ತಾಲ್ಲೂಕು ಸಮ್ಮೇಳನ ಜರುಗಿತು.<br /> <br /> ಸಮ್ಮೇಳನ ಉದ್ಘಾಟಿಸಿದ ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖ್ ಷಾ ಖಾದ್ರಿ ಮಾತನಾಡಿ, ದೆಹಲಿಯಲ್ಲಿ ಈಚೆಗೆ ಕೇಂದ್ರ ಕಾರ್ಮಿಕ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಭಾರತೀಯ ಕಾರ್ಮಿಕರ ಸಮ್ಮೇಳನ ನಡೆಯಿತು ಎಂದು ಹೇಳಿದರು.<br /> <br /> ಬಿಸಿಯೂಟ ನೌಕರರರನ್ನು ಕಾರ್ಮಿಕರರೆಂದು ಪರಿಗಣಿಸಬೇಕು ಹಾಗೂ ಕನಿಷ್ಠ ವೇತನ ನೀಡಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದನ್ನು ಜಾರಿಗೊಳಿಸಲು ಬೆಂಗಳೂರಿನಲ್ಲಿ ಜೂನ್ 14ರಂದು ನಡೆಯುವ ಹೋರಾಟದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಬೇಕು ಎಂದು ಮನವಿ ಮಾಡಿದರು.<br /> <br /> ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ ಮಾತನಾಡಿ, ಅತಿ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುವ ಸರ್ಕಾರದ ನೀತಿ ಖಂಡನೀಯ. 10ಸಾವಿರ ಕನಿಷ್ಠ ವೇತನ ಹಾಗೂ ಪಿಂಚಣಿ ಸೇರಿದಂತೆ ಅನೇಕ ಬೇಡಿಕೆ ಈಡೇರಿಕೆಗೆ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.<br /> <br /> ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿ ಕೆ.ಜಿ ವೀರೇಶ ಮಾತನಾಡಿ, ಬೆಲೆ ಏರಿಕೆ ತಕ್ಕಂತೆ ವೇತನ ಹೆಚ್ಚಳ ಮಾಡಬೇಕು ಸರ್ಕಾರ ಕ್ರಮ ಕೈಗೊಳ್ಳಬೇಕು. ಬಿಸಿಯೂಟ ನೌಕರರ ನಡೆಸುವ ಹೋರಾಟಕ್ಕೆ ಕರ್ನಾಟಕ ಪ್ರಾಂತ ರೈತ ಸಂಘವು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು.<br /> <br /> ಸಿಐಟಿಯು ಸಂಘಟನೆ ಕಾರ್ಯದರ್ಶಿ ವೈ.ಈರಣ್ಣ, ಬಿಸಿಯೂಟ ನೌಕರರ ಪದಾಧಿಕಾರಿಗಳಾದ ಗೌರಮ್ಮ, ಅಕ್ಕಮ್ಮ, ಕಲ್ಯಾಣಿ ಸೇರಿದಂತೆ ಅನೇಕ ನೌಕರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>