<p><strong>ಶಿವಮೊಗ್ಗ:</strong> ಪ್ರಸ್ತುತ ಕೃಷಿ ಕ್ಷೇತ್ರದಲ್ಲಿ ಬಹುವಾಗಿ ಕಾಡುತ್ತಿರುವ ಕಾರ್ಮಿಕರ ಸಮಸ್ಯೆಗಳಿಗೆ ರೈತರು ಸಮಗ್ರ ಕೃಷಿ ವಿಧಾನ ಅಳವಡಿಸಿಕೊಳ್ಳುವುದೇ ಪರಿಹಾರ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ವಿ. ರಮೇಶ್ ಸಲಹೆ ಮಾಡಿದರು.<br /> <br /> ವಲಯ ಕೃಷಿ ಸಂಶೋಧನಾ ಕೇಂದ್ರ ನವಿಲೆ ಹಮ್ಮಿಕೊಂಡಿರುವ ಎರಡು ದಿನಗಳ `ಕೃಷಿ ಮೇಳ~ವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ನಾಟಿಯಿಂದ ಒಕ್ಕಣೆಯವರೆಗೆ ಕೃಷಿ ಪರಿಕರಗಳನ್ನು ಬಳಸಿಕೊಂಡು ಕೃಷಿಯನ್ನು ಸರಳೀಕರಣಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಶೋಧನಾ ಕೇಂದ್ರಗಳು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.<br /> <br /> ಹಾಗೆಯೇ, ರೈತರು ಸಾವಯವ ಕೃಷಿ ಅಳವಡಿಸಿಕೊಳ್ಳುವ ಮೂಲಕ ಕಡಿಮೆ ವೆಚ್ಚದಲ್ಲಿ ಭೂಮಿಯ ಫಲವತ್ತತೆ ಹೆಚ್ಚಿಸಿಕೊಂಡು ಅಧಿಕ ಇಳುವರಿ ಪಡೆಯಬಹುದು ಎಂದರು.ಕೃಷಿ ಸಂಶೋಧನಾ ಕೇಂದ್ರಗಳ ಸಂಶೋಧನೆಗಳು ಫಲಕಾರಿಯಾಗಬೇಕಾದರೆ ರೈತರು ಹಾಗೂ ಕೃಷಿ ಸಂಶೋಧನಾಕರ ನಡುವೆ ವಿಚಾರ ವಿನಿಮಯಗಳಾಗಬೇಕು; ಜ್ಞಾನ ಪರಸ್ಪರ ಹಂಚಿಕೆಯಾಗಬೇಕು ಎಂದು ಅಭಿಪ್ರಾಯ ಪಟ್ಟರು.<br /> <br /> ಇಂದು ಫಲವತ್ತಾದ ಕೃಷಿಭೂಮಿಗಳು ಲೇಔಟ್ಆಗುತ್ತಿವೆ. ಸರ್ಕಾರವೇ ಕೈಗಾರಿಕಾ ವಸಾಹತುಗಳನ್ನು ನಿರ್ಮಿಸುತ್ತಿದೆ. ಇಂತಹ ಸನ್ನಿವೇಶದಲ್ಲಿ ಕೃಷಿ ಪದ್ಧತಿ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದರು.<br /> <br /> `ಕೃಷಿ ಮೇಳ~ದಲ್ಲಿ ವಸ್ತು ಪ್ರದರ್ಶನ ಉದ್ಘಾಟಿಸಿದ ವ್ಯವಸ್ಥಾಪನಾ ಮಂಡಳಿ ಸದಸ್ಯ ಕುಂಸಿ ಬಸವಕುಮಾರ್ ಮಾತನಾಡಿ, ಕೃಷಿಗೆ ಎಂದಿಗೂ ಸಾವಿಲ್ಲ; ಅದು ಸತ್ತರೆ ನಾವು ಬದುಕುವುದೂ ಇಲ್ಲ. ಮನುಷ್ಯನ ಇಡೀ ಜೀವನ ಆಹಾರಕ್ಕಾಗಿ ಕೃಷಿಯನ್ನೇ ಆಧಾರಿಸಿದೆ ಎಂದು ಹೇಳಿದರು.<br /> <br /> ರೈತರು ಕೃಷಿಯಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಕೃಷಿಯನ್ನು ಸುಲಭಗೊಳಿಸಿಕೊಳ್ಳಬೇಕು. ಹಾಗೆಯೇ, ಕೃಷಿಯಿಂದ ದೂರವಾಗುತ್ತಿರುವ ಯುವಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕು ಎಂದು ಸಲಹೆ ನೀಡಿದರು.<br /> <br /> ಕಾಂಪೋಸ್ಟ್ ತಯಾರಿಕೆ ಕೈಪಿಡಿಯನ್ನು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಎಂ. ಶೇಖರ್ಗೌಡ ಬಿಡುಗಡೆ ಮಾಡಿದರು. ಕೃಷಿ ಸಂಶೋಧನಾ ಕೇಂದ್ರದ ಡೀನ್ ಡಾ.ಎಂ.ಎಸ್. ಗಣೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. <br /> ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಾ.ಆರ್. ಪ್ರಸನ್ನಕುಮಾರ್, ಕೆ. ನಾಗರಾಜ್, ಎಚ್. ಶಿವಪ್ಪ, ಸಂಶೋಧನಾ ನಿರ್ದೇಶಕ ಡಾ.ಎಚ್. ಶಿವಣ್ಣ, ಜಂಟಿ ಕೃಷಿ ನಿರ್ದೇಶಕ ಡಾ.ಶಿವಮೂರ್ತಪ್ಪ, ತೋಟಗಾರಿಕೆ ಉಪ ನಿರ್ದೇಶಕ ಡಾ.ಎಚ್. ವಿಶ್ವನಾಥ್, ಹಿರಿಯ ಸಹಾಯಕ ವಾರ್ತಾಧಿಕಾರಿ ದೇವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು. <br /> <br /> ಸಂಶೋಧನಾ ನಿರ್ದೇಶಕ ಡಾ.ವೈ. ವಿಶ್ವನಾಥ್ ಶೆಟ್ಟಿ ಸ್ವಾಗತಿಸಿದರು. ಸಂಯೋಜಕ ಡಾ.ಎಚ್.ಕೆ. ವೀರಣ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಪ್ರಸ್ತುತ ಕೃಷಿ ಕ್ಷೇತ್ರದಲ್ಲಿ ಬಹುವಾಗಿ ಕಾಡುತ್ತಿರುವ ಕಾರ್ಮಿಕರ ಸಮಸ್ಯೆಗಳಿಗೆ ರೈತರು ಸಮಗ್ರ ಕೃಷಿ ವಿಧಾನ ಅಳವಡಿಸಿಕೊಳ್ಳುವುದೇ ಪರಿಹಾರ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ವಿ. ರಮೇಶ್ ಸಲಹೆ ಮಾಡಿದರು.<br /> <br /> ವಲಯ ಕೃಷಿ ಸಂಶೋಧನಾ ಕೇಂದ್ರ ನವಿಲೆ ಹಮ್ಮಿಕೊಂಡಿರುವ ಎರಡು ದಿನಗಳ `ಕೃಷಿ ಮೇಳ~ವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ನಾಟಿಯಿಂದ ಒಕ್ಕಣೆಯವರೆಗೆ ಕೃಷಿ ಪರಿಕರಗಳನ್ನು ಬಳಸಿಕೊಂಡು ಕೃಷಿಯನ್ನು ಸರಳೀಕರಣಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಶೋಧನಾ ಕೇಂದ್ರಗಳು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.<br /> <br /> ಹಾಗೆಯೇ, ರೈತರು ಸಾವಯವ ಕೃಷಿ ಅಳವಡಿಸಿಕೊಳ್ಳುವ ಮೂಲಕ ಕಡಿಮೆ ವೆಚ್ಚದಲ್ಲಿ ಭೂಮಿಯ ಫಲವತ್ತತೆ ಹೆಚ್ಚಿಸಿಕೊಂಡು ಅಧಿಕ ಇಳುವರಿ ಪಡೆಯಬಹುದು ಎಂದರು.ಕೃಷಿ ಸಂಶೋಧನಾ ಕೇಂದ್ರಗಳ ಸಂಶೋಧನೆಗಳು ಫಲಕಾರಿಯಾಗಬೇಕಾದರೆ ರೈತರು ಹಾಗೂ ಕೃಷಿ ಸಂಶೋಧನಾಕರ ನಡುವೆ ವಿಚಾರ ವಿನಿಮಯಗಳಾಗಬೇಕು; ಜ್ಞಾನ ಪರಸ್ಪರ ಹಂಚಿಕೆಯಾಗಬೇಕು ಎಂದು ಅಭಿಪ್ರಾಯ ಪಟ್ಟರು.<br /> <br /> ಇಂದು ಫಲವತ್ತಾದ ಕೃಷಿಭೂಮಿಗಳು ಲೇಔಟ್ಆಗುತ್ತಿವೆ. ಸರ್ಕಾರವೇ ಕೈಗಾರಿಕಾ ವಸಾಹತುಗಳನ್ನು ನಿರ್ಮಿಸುತ್ತಿದೆ. ಇಂತಹ ಸನ್ನಿವೇಶದಲ್ಲಿ ಕೃಷಿ ಪದ್ಧತಿ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದರು.<br /> <br /> `ಕೃಷಿ ಮೇಳ~ದಲ್ಲಿ ವಸ್ತು ಪ್ರದರ್ಶನ ಉದ್ಘಾಟಿಸಿದ ವ್ಯವಸ್ಥಾಪನಾ ಮಂಡಳಿ ಸದಸ್ಯ ಕುಂಸಿ ಬಸವಕುಮಾರ್ ಮಾತನಾಡಿ, ಕೃಷಿಗೆ ಎಂದಿಗೂ ಸಾವಿಲ್ಲ; ಅದು ಸತ್ತರೆ ನಾವು ಬದುಕುವುದೂ ಇಲ್ಲ. ಮನುಷ್ಯನ ಇಡೀ ಜೀವನ ಆಹಾರಕ್ಕಾಗಿ ಕೃಷಿಯನ್ನೇ ಆಧಾರಿಸಿದೆ ಎಂದು ಹೇಳಿದರು.<br /> <br /> ರೈತರು ಕೃಷಿಯಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಕೃಷಿಯನ್ನು ಸುಲಭಗೊಳಿಸಿಕೊಳ್ಳಬೇಕು. ಹಾಗೆಯೇ, ಕೃಷಿಯಿಂದ ದೂರವಾಗುತ್ತಿರುವ ಯುವಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸಬೇಕು ಎಂದು ಸಲಹೆ ನೀಡಿದರು.<br /> <br /> ಕಾಂಪೋಸ್ಟ್ ತಯಾರಿಕೆ ಕೈಪಿಡಿಯನ್ನು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಎಂ. ಶೇಖರ್ಗೌಡ ಬಿಡುಗಡೆ ಮಾಡಿದರು. ಕೃಷಿ ಸಂಶೋಧನಾ ಕೇಂದ್ರದ ಡೀನ್ ಡಾ.ಎಂ.ಎಸ್. ಗಣೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. <br /> ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಾ.ಆರ್. ಪ್ರಸನ್ನಕುಮಾರ್, ಕೆ. ನಾಗರಾಜ್, ಎಚ್. ಶಿವಪ್ಪ, ಸಂಶೋಧನಾ ನಿರ್ದೇಶಕ ಡಾ.ಎಚ್. ಶಿವಣ್ಣ, ಜಂಟಿ ಕೃಷಿ ನಿರ್ದೇಶಕ ಡಾ.ಶಿವಮೂರ್ತಪ್ಪ, ತೋಟಗಾರಿಕೆ ಉಪ ನಿರ್ದೇಶಕ ಡಾ.ಎಚ್. ವಿಶ್ವನಾಥ್, ಹಿರಿಯ ಸಹಾಯಕ ವಾರ್ತಾಧಿಕಾರಿ ದೇವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು. <br /> <br /> ಸಂಶೋಧನಾ ನಿರ್ದೇಶಕ ಡಾ.ವೈ. ವಿಶ್ವನಾಥ್ ಶೆಟ್ಟಿ ಸ್ವಾಗತಿಸಿದರು. ಸಂಯೋಜಕ ಡಾ.ಎಚ್.ಕೆ. ವೀರಣ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>