<p><strong>ಬೆಂಗಳೂರು:</strong> ಬೆಂಗಳೂರು ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರ ಮೇಲೆ ವಕೀಲರಿಂದ ನಡೆದ ಹಲ್ಲೆ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.<br /> <br /> ಪತ್ರಕರ್ತರನ್ನು ಗುರಿಯನ್ನಾಗಿಸಿಕೊಂಡು, ಅದರಲ್ಲೂ ಟಿವಿ ಮಾಧ್ಯಮದ ಕ್ಯಾಮರಾಮನ್, ವರದಿಗಾರರುಗಳನ್ನು ಗುರಿಯಾಗಿಸಿ ಹಲ್ಲೆ ನಡೆಸಿರುವುದು ಪೂರ್ವಯೋಜಿತ ಸಂಚಿನಂತೆ ತೋರುತ್ತಿದ್ದು, ಪುಂಡಾಟಿಕೆ ನಡೆಸಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಘ ಒತ್ತಾಯಿಸಿದೆ.<br /> <br /> ಹಲ್ಲೆ ಘಟನೆ ಖಂಡಿಸಿ ಸೋಮವಾರ (ಮಾ.5) ರಂದು ಬೆಂಗಳೂರಿನಲ್ಲಿ ರಾಜಭವನ ಜಾಥಾ ಕಾರ್ಯಕ್ರಮವನ್ನು ನಡೆಸಲಾಗುವುದು, ಪತ್ರಕರ್ತರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಲಾಗುವುದು ಅಂದು ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸುವ ಎರಡು ಸಾವಿರ ಕಾರ್ಯನಿರತ ಪತ್ರಕರ್ತರು ಮಹಾತ್ಮಗಾಂಧಿ ಪ್ರತಿಮೆ ಮುಂಭಾಗದಿಂದ ಕಪ್ಪು ಪಟ್ಟಿ ಧರಿಸಿ ಮೌನ ಮೆರವಣಿಗೆ ನಡೆಸಲಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಪ್ರೆಸ್ಕ್ಲಬ್ ಅಧ್ಯಕ್ಷ್ಯ ಎಂ.ಎ.ಪೊನ್ನಪ್ಪ, ವರದಿಗಾರರ ಕೂಟದ ಅಧ್ಯಕ್ಷ್ಯ ಕೆ.ವಿ ಪ್ರಭಾಕರ್ ಹಾಗೂ ಮುಂಬೈ ಪತ್ರಕರ್ತರು ಘಟನೆಯನ್ನು ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರ ಮೇಲೆ ವಕೀಲರಿಂದ ನಡೆದ ಹಲ್ಲೆ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.<br /> <br /> ಪತ್ರಕರ್ತರನ್ನು ಗುರಿಯನ್ನಾಗಿಸಿಕೊಂಡು, ಅದರಲ್ಲೂ ಟಿವಿ ಮಾಧ್ಯಮದ ಕ್ಯಾಮರಾಮನ್, ವರದಿಗಾರರುಗಳನ್ನು ಗುರಿಯಾಗಿಸಿ ಹಲ್ಲೆ ನಡೆಸಿರುವುದು ಪೂರ್ವಯೋಜಿತ ಸಂಚಿನಂತೆ ತೋರುತ್ತಿದ್ದು, ಪುಂಡಾಟಿಕೆ ನಡೆಸಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಘ ಒತ್ತಾಯಿಸಿದೆ.<br /> <br /> ಹಲ್ಲೆ ಘಟನೆ ಖಂಡಿಸಿ ಸೋಮವಾರ (ಮಾ.5) ರಂದು ಬೆಂಗಳೂರಿನಲ್ಲಿ ರಾಜಭವನ ಜಾಥಾ ಕಾರ್ಯಕ್ರಮವನ್ನು ನಡೆಸಲಾಗುವುದು, ಪತ್ರಕರ್ತರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಲಾಗುವುದು ಅಂದು ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸುವ ಎರಡು ಸಾವಿರ ಕಾರ್ಯನಿರತ ಪತ್ರಕರ್ತರು ಮಹಾತ್ಮಗಾಂಧಿ ಪ್ರತಿಮೆ ಮುಂಭಾಗದಿಂದ ಕಪ್ಪು ಪಟ್ಟಿ ಧರಿಸಿ ಮೌನ ಮೆರವಣಿಗೆ ನಡೆಸಲಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಪ್ರೆಸ್ಕ್ಲಬ್ ಅಧ್ಯಕ್ಷ್ಯ ಎಂ.ಎ.ಪೊನ್ನಪ್ಪ, ವರದಿಗಾರರ ಕೂಟದ ಅಧ್ಯಕ್ಷ್ಯ ಕೆ.ವಿ ಪ್ರಭಾಕರ್ ಹಾಗೂ ಮುಂಬೈ ಪತ್ರಕರ್ತರು ಘಟನೆಯನ್ನು ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>