<p>ನವದೆಹಲಿ (ಐಎಎನ್ಎಸ್): ಮೂರು ದಿನಗಳ ಹಿಂದೆ ದೆಹಲಿ ಮೆಟ್ರೊ ರೈಲಿನ ಬಾಗಿಲಿನಲ್ಲಿ ಪ್ರಯಾಣಿಕರೊಬ್ಬರ ಕಾಲು ಸಿಲುಕಿ ಸಂಭವಿಸಿದ ಅವಘಡ `ಅಸಹಜ ಅಪಘಾತ~ ಎಂದು ದೆಹಲಿ ಮೆಟ್ರೊ ರೈಲ್ವೆ ಕಾರ್ಪೋರೇಷನ್ (ಡಿಎಂಆರ್ಸಿ) ಸ್ಪಷ್ಟಪಡಿಸಿದೆ.<br /> <br /> ಮಂಗಳವಾರ ದ್ವಾರಕಾ ಸೆಕ್ಟರ್ 21 ಹಾಗೂ ನೊಯಿಡಾ ಸಿಟಿ ಸೆಂಟರ್ ಮಾರ್ಗ ಮಧ್ಯೆ ಪ್ರಯಾಣಿಸುತ್ತಿದ್ದ ಮೆಟ್ರೊ ರೈಲಿನಲ್ಲಿ ಪ್ರಯಾಣಿಕರೊಬ್ಬರ ಕಾಲು ಸಿಕ್ಕಿ ಹಾಕಿಕೊಂಡಿತ್ತು. ಸುದೈವವಶಾತ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದರು. ಈ ಕುರಿತಂತೆ ಶುಕ್ರವಾರ ವಿವರ ನೀಡಿರುವ ಡಿಎಂಆರ್ಸಿ ರೈಲಿನ ಬಾಗಿಲಿನಲ್ಲಿ ಯಾವುದೇ ದೋಷವಿರಲಿಲ್ಲ ಎಂದು ಹೇಳಿದ್ದಾರೆ.<br /> <br /> ಸುನ್ನಿ ಕುಮಾರ್ ಎಂಬುವವರು ಜನಕಪುರಿ (ಪಶ್ಚಿಮ) ನಿಲ್ದಾಣದಲ್ಲಿ ತಮ್ಮ ಕಾಲನ್ನು ಹೊರಗೆ ಎಳೆದುಕೊಳ್ಳಬೇಕೆನ್ನುವಷ್ಟರಲ್ಲೇ ಬಾಗಿಲು ಮುಚ್ಚಿಕೊಂಡಿತ್ತು. ಮುಂದಿನ ನಿಲ್ದಾಣ ಬಂದಾಗಲೇ ಅವರಿಗೆ ತಮ್ಮ ಕಾಲನ್ನು ಬಾಗಿಲಿನ ಮಧ್ಯದಿಂದ ಹೊರತೆಗೆದುಕೊಳ್ಳಲು ಸಾಧ್ಯವಾಯಿತು. ಇದು ಮೂರು ನಿಮಿಷದ ಪ್ರಯಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಮೂರು ದಿನಗಳ ಹಿಂದೆ ದೆಹಲಿ ಮೆಟ್ರೊ ರೈಲಿನ ಬಾಗಿಲಿನಲ್ಲಿ ಪ್ರಯಾಣಿಕರೊಬ್ಬರ ಕಾಲು ಸಿಲುಕಿ ಸಂಭವಿಸಿದ ಅವಘಡ `ಅಸಹಜ ಅಪಘಾತ~ ಎಂದು ದೆಹಲಿ ಮೆಟ್ರೊ ರೈಲ್ವೆ ಕಾರ್ಪೋರೇಷನ್ (ಡಿಎಂಆರ್ಸಿ) ಸ್ಪಷ್ಟಪಡಿಸಿದೆ.<br /> <br /> ಮಂಗಳವಾರ ದ್ವಾರಕಾ ಸೆಕ್ಟರ್ 21 ಹಾಗೂ ನೊಯಿಡಾ ಸಿಟಿ ಸೆಂಟರ್ ಮಾರ್ಗ ಮಧ್ಯೆ ಪ್ರಯಾಣಿಸುತ್ತಿದ್ದ ಮೆಟ್ರೊ ರೈಲಿನಲ್ಲಿ ಪ್ರಯಾಣಿಕರೊಬ್ಬರ ಕಾಲು ಸಿಕ್ಕಿ ಹಾಕಿಕೊಂಡಿತ್ತು. ಸುದೈವವಶಾತ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದರು. ಈ ಕುರಿತಂತೆ ಶುಕ್ರವಾರ ವಿವರ ನೀಡಿರುವ ಡಿಎಂಆರ್ಸಿ ರೈಲಿನ ಬಾಗಿಲಿನಲ್ಲಿ ಯಾವುದೇ ದೋಷವಿರಲಿಲ್ಲ ಎಂದು ಹೇಳಿದ್ದಾರೆ.<br /> <br /> ಸುನ್ನಿ ಕುಮಾರ್ ಎಂಬುವವರು ಜನಕಪುರಿ (ಪಶ್ಚಿಮ) ನಿಲ್ದಾಣದಲ್ಲಿ ತಮ್ಮ ಕಾಲನ್ನು ಹೊರಗೆ ಎಳೆದುಕೊಳ್ಳಬೇಕೆನ್ನುವಷ್ಟರಲ್ಲೇ ಬಾಗಿಲು ಮುಚ್ಚಿಕೊಂಡಿತ್ತು. ಮುಂದಿನ ನಿಲ್ದಾಣ ಬಂದಾಗಲೇ ಅವರಿಗೆ ತಮ್ಮ ಕಾಲನ್ನು ಬಾಗಿಲಿನ ಮಧ್ಯದಿಂದ ಹೊರತೆಗೆದುಕೊಳ್ಳಲು ಸಾಧ್ಯವಾಯಿತು. ಇದು ಮೂರು ನಿಮಿಷದ ಪ್ರಯಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>