<p><strong>ಹುಳಿಯಾರು: </strong>ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಐದುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಸಮಾವೇಶಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಳೆದ ಐದಾರು ವರ್ಷಗಳಿಂದ ಕಾಲೇಜಿಗೆ ಮೂಲ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.<br /> <br /> ನಂತರ ಪೊಲೀಸ್ ಠಾಣೆ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲ ಕಾಲ ಸಾಂಕೇತಿಕ ರಸ್ತೆತಡೆ ನಡೆಸಿದರು. ಅಲ್ಲಿಂದ ನಾಡ ಕಚೇರಿವರೆಗೆ ಮೆರವಣಿಗೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುವಂತೆ ಒತ್ತಾಯಿಸಿದರು.<br /> <br /> ವಿದ್ಯಾರ್ಥಿ ನಾಯಕಿ ಲಕ್ಷ್ಮೀ ಕಾಲೇಜಿನ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಸ್ಥಳಕ್ಕೆ ಬಂದು ನಮ್ಮ ಮನವಿ ಆಲಿಸುವಂತೆ ಪಟ್ಟು ಹಿಡಿದರು. ತಹಶೀಲ್ದಾರ್ ಉಮೇಶಚಂದ್ರ ಅವರಿಗೆ ತಮ್ಮ ಸಮಸ್ಯೆ ತಿಳಿಸಿ, ಖುದ್ದು ತಾವೇ ಕಾಲೇಜಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡುವಂತೆ ಆಗ್ರಹಿಸಿದರು.<br /> <br /> ಕಾಲೇಜಿಗೆ ಭೇಟಿ ನೀಡಿದ ತಹಶೀಲ್ದಾರ್ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಉಪನಿರ್ದೇಶಕರ ಗಮನಕ್ಕೆ ತಂದು ಪರಿಹಾರ ಕೊಡಿಸುವ ಭರವಸೆ ನೀಡಿದರು.ರೈತ ಸಂಘದ ಸತೀಶ್, ಮಲ್ಲೇಶ್, ಎಬಿವಿಪಿಯ ಇಮ್ರಾಜ್, ಟಿಪ್ಪುಸುಲ್ತಾನ್ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು: </strong>ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಐದುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಸಮಾವೇಶಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಳೆದ ಐದಾರು ವರ್ಷಗಳಿಂದ ಕಾಲೇಜಿಗೆ ಮೂಲ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.<br /> <br /> ನಂತರ ಪೊಲೀಸ್ ಠಾಣೆ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲ ಕಾಲ ಸಾಂಕೇತಿಕ ರಸ್ತೆತಡೆ ನಡೆಸಿದರು. ಅಲ್ಲಿಂದ ನಾಡ ಕಚೇರಿವರೆಗೆ ಮೆರವಣಿಗೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುವಂತೆ ಒತ್ತಾಯಿಸಿದರು.<br /> <br /> ವಿದ್ಯಾರ್ಥಿ ನಾಯಕಿ ಲಕ್ಷ್ಮೀ ಕಾಲೇಜಿನ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಸ್ಥಳಕ್ಕೆ ಬಂದು ನಮ್ಮ ಮನವಿ ಆಲಿಸುವಂತೆ ಪಟ್ಟು ಹಿಡಿದರು. ತಹಶೀಲ್ದಾರ್ ಉಮೇಶಚಂದ್ರ ಅವರಿಗೆ ತಮ್ಮ ಸಮಸ್ಯೆ ತಿಳಿಸಿ, ಖುದ್ದು ತಾವೇ ಕಾಲೇಜಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡುವಂತೆ ಆಗ್ರಹಿಸಿದರು.<br /> <br /> ಕಾಲೇಜಿಗೆ ಭೇಟಿ ನೀಡಿದ ತಹಶೀಲ್ದಾರ್ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಉಪನಿರ್ದೇಶಕರ ಗಮನಕ್ಕೆ ತಂದು ಪರಿಹಾರ ಕೊಡಿಸುವ ಭರವಸೆ ನೀಡಿದರು.ರೈತ ಸಂಘದ ಸತೀಶ್, ಮಲ್ಲೇಶ್, ಎಬಿವಿಪಿಯ ಇಮ್ರಾಜ್, ಟಿಪ್ಪುಸುಲ್ತಾನ್ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>