<p>ದಾವಣಗೆರೆ: ಖಾಸಗಿ ಶಾಲೆಗಳೇ ಪ್ರಭುತ್ವ ಸಾಧಿಸಿರುವ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಗುಣಮಟ್ಟದ ಶಿಕ್ಷಣದ ಮೂಲಕ ಗಮನ ಸೆಳೆಯುತ್ತಿದೆ. ವಿದ್ಯಾರ್ಥಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಡ್ಡು ಹೊಡೆದು ರ್ಯಾಂಕ್ ಗಳಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಶ್ಲಾಘಿಸಿದರು.<br /> <br /> ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಾಯಾಮ ಶಾಲೆ ಕಟ್ಟಡ ಹಾಗೂ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ದೊರೆಯಲು ಕಾಲೇಜಿಗೆ ಮೂಲಸೌಕರ್ಯ ಅಗತ್ಯ. ಒಳ್ಳೆ ಕಟ್ಟಡ, ವಾಚನಾಲಯ, ಉತ್ತಮ ಉಪನ್ಯಾಸಕರು ಇದ್ದರೆ ಅಂತಹ ಕಾಲೇಜು ಉನ್ನತ ಪ್ರಗತಿ ಕಾಣುತ್ತದೆ. ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ನೈತಿಕತೆ, ಚಾರಿತ್ರ್ಯದ ಬಗ್ಗೆಯೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.<br /> <br /> ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ಸರ್ಕಾರದ ಅನುದಾನದ ಜತೆಗೆ, ಜನಪ್ರತಿನಿಧಿಗಳು ಕಾಲೇಜಿಗೆ ಸಾಕಷ್ಟು ನೆರವು ನೀಡಿದ್ದಾರೆ. ಕಾಲೇಜಿನ ಅಭಿವೃದ್ಧಿಗೆ ಸರ್ಕಾರಕ್ಕೆ ್ಙ 3 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರದಲ್ಲೇ ್ಙ 1.5 ಕೋಟಿ ನೆರವು ದೊರೆಯಲಿದೆ ಎಂದು ಮಾಹಿತಿ ನೀಡಿದರು.<br /> <br /> ಭಾರತ ಸಾಂಸ್ಕೃತಿಕವಾಗಿ ಶ್ರೀಮಂತರಾಷ್ಟ್ರ. ವಿವೇಕಾನಂದರ ಆಶಯದಂತೆ ಇತಿಹಾಸದ ಬಗ್ಗೆ ಗೌರವ ಹೊಂದಿರುವ ವ್ಯಕ್ತಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಲ್ಲರು ಎಂದರು.<br /> <br /> ನಿವೃತ್ತ ಪ್ರಾಂಶುಪಾಲ ಎಸ್.ಎಚ್. ಪಟೇಲ್ ಸಮಾರೋಪ ಮಾತುಗಳನ್ನು ಆಡಿದರು. ಪ್ರಾಂಶುಪಾಲ ಡಿ. ಬಸವರಾಜ್ ಪ್ರಾಸ್ತಾವಿಕ ಮಾತನಾಡಿದರು. ಮೇಯರ್ ಸುಧಾ ಜಯರುದ್ರೇಶ್, ಪಾಲಿಕೆ ಸದಸ್ಯೆ ಜ್ಯೋತಿ ಸಿದ್ದೇಶ್, ಕುಮಾರಿ, ಎಂ.ಎಸ್. ಕಿಣಿ, ಕೆ.ಎನ್. ಓಂಕಾರಪ್ಪ ಮತ್ತಿತರರು ಉಪಸ್ಥಿತರಿದ್ದರು. <br /> <strong><br /> 18ಕ್ಕೆ ನೇಮಕಾತಿ ರ್ಯಾಲಿ</strong><br /> ನಗರದ ಪಿ.ಜೆ. ಬಡಾವಣೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏ. 18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಚೆನ್ನೈನ ಫಸ್ಟ್ ಸೋರ್ಸ್ ಬಿಪಿಒ ಕಂಪೆನಿ `ವಾಯ್ಸ ಪ್ರೋಸೆಸ್~ (ಕಾಲ್ ಸೆಂಟರ್) ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದೆ. ಪದವಿ, ಡಿಪ್ಲೊಮಾ ಅಥವಾ ಪಿಯು ಪಾಸಾಗಿರುವವರು ಪಾಲ್ಗೊಳ್ಳಬಹುದು. ಕನ್ನಡ ಮತ್ತು ಇಂಗ್ಲಿಷ್ ಮಾತನಾಡಲು ಬರಬೇಕು. <br /> <br /> 18ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಮಾಸಿಕ ್ಙ 7ರಿಂದ ್ಙ 8 ಸಾವಿರ ವೇತನ ನೀಡಲಾಗುವುದು. ವಿವರಕ್ಕೆ ದೂರವಾಣಿ: 08192- 259446 ಅಥವಾ ಮೊಬೈಲ್: 96633 91401 ಸಂಪರ್ಕಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಖಾಸಗಿ ಶಾಲೆಗಳೇ ಪ್ರಭುತ್ವ ಸಾಧಿಸಿರುವ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಗುಣಮಟ್ಟದ ಶಿಕ್ಷಣದ ಮೂಲಕ ಗಮನ ಸೆಳೆಯುತ್ತಿದೆ. ವಿದ್ಯಾರ್ಥಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಡ್ಡು ಹೊಡೆದು ರ್ಯಾಂಕ್ ಗಳಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಶ್ಲಾಘಿಸಿದರು.<br /> <br /> ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಾಯಾಮ ಶಾಲೆ ಕಟ್ಟಡ ಹಾಗೂ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ದೊರೆಯಲು ಕಾಲೇಜಿಗೆ ಮೂಲಸೌಕರ್ಯ ಅಗತ್ಯ. ಒಳ್ಳೆ ಕಟ್ಟಡ, ವಾಚನಾಲಯ, ಉತ್ತಮ ಉಪನ್ಯಾಸಕರು ಇದ್ದರೆ ಅಂತಹ ಕಾಲೇಜು ಉನ್ನತ ಪ್ರಗತಿ ಕಾಣುತ್ತದೆ. ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ನೈತಿಕತೆ, ಚಾರಿತ್ರ್ಯದ ಬಗ್ಗೆಯೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.<br /> <br /> ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ಸರ್ಕಾರದ ಅನುದಾನದ ಜತೆಗೆ, ಜನಪ್ರತಿನಿಧಿಗಳು ಕಾಲೇಜಿಗೆ ಸಾಕಷ್ಟು ನೆರವು ನೀಡಿದ್ದಾರೆ. ಕಾಲೇಜಿನ ಅಭಿವೃದ್ಧಿಗೆ ಸರ್ಕಾರಕ್ಕೆ ್ಙ 3 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರದಲ್ಲೇ ್ಙ 1.5 ಕೋಟಿ ನೆರವು ದೊರೆಯಲಿದೆ ಎಂದು ಮಾಹಿತಿ ನೀಡಿದರು.<br /> <br /> ಭಾರತ ಸಾಂಸ್ಕೃತಿಕವಾಗಿ ಶ್ರೀಮಂತರಾಷ್ಟ್ರ. ವಿವೇಕಾನಂದರ ಆಶಯದಂತೆ ಇತಿಹಾಸದ ಬಗ್ಗೆ ಗೌರವ ಹೊಂದಿರುವ ವ್ಯಕ್ತಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಲ್ಲರು ಎಂದರು.<br /> <br /> ನಿವೃತ್ತ ಪ್ರಾಂಶುಪಾಲ ಎಸ್.ಎಚ್. ಪಟೇಲ್ ಸಮಾರೋಪ ಮಾತುಗಳನ್ನು ಆಡಿದರು. ಪ್ರಾಂಶುಪಾಲ ಡಿ. ಬಸವರಾಜ್ ಪ್ರಾಸ್ತಾವಿಕ ಮಾತನಾಡಿದರು. ಮೇಯರ್ ಸುಧಾ ಜಯರುದ್ರೇಶ್, ಪಾಲಿಕೆ ಸದಸ್ಯೆ ಜ್ಯೋತಿ ಸಿದ್ದೇಶ್, ಕುಮಾರಿ, ಎಂ.ಎಸ್. ಕಿಣಿ, ಕೆ.ಎನ್. ಓಂಕಾರಪ್ಪ ಮತ್ತಿತರರು ಉಪಸ್ಥಿತರಿದ್ದರು. <br /> <strong><br /> 18ಕ್ಕೆ ನೇಮಕಾತಿ ರ್ಯಾಲಿ</strong><br /> ನಗರದ ಪಿ.ಜೆ. ಬಡಾವಣೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏ. 18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಚೆನ್ನೈನ ಫಸ್ಟ್ ಸೋರ್ಸ್ ಬಿಪಿಒ ಕಂಪೆನಿ `ವಾಯ್ಸ ಪ್ರೋಸೆಸ್~ (ಕಾಲ್ ಸೆಂಟರ್) ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದೆ. ಪದವಿ, ಡಿಪ್ಲೊಮಾ ಅಥವಾ ಪಿಯು ಪಾಸಾಗಿರುವವರು ಪಾಲ್ಗೊಳ್ಳಬಹುದು. ಕನ್ನಡ ಮತ್ತು ಇಂಗ್ಲಿಷ್ ಮಾತನಾಡಲು ಬರಬೇಕು. <br /> <br /> 18ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಮಾಸಿಕ ್ಙ 7ರಿಂದ ್ಙ 8 ಸಾವಿರ ವೇತನ ನೀಡಲಾಗುವುದು. ವಿವರಕ್ಕೆ ದೂರವಾಣಿ: 08192- 259446 ಅಥವಾ ಮೊಬೈಲ್: 96633 91401 ಸಂಪರ್ಕಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>