<p>ಮಾಗಡಿ: ತಾಲ್ಲೂಕಿನ ಕುದೂರು ಹೋಬಳಿಯ ಕಣ್ಣೂರು ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ದಲಿತರ ಕಾಲೋನಿಯಲ್ಲಿ ಮೂಲಭೂತ ಸವಲತ್ತುಗಳನ್ನು ದೊರಕಿಸಿಕೊಡುವಂತೆ ಕಾಲೊನಿಯ ನಿವಾಸಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. <br /> <br /> `ಕಾಲೋನಿಯಲ್ಲಿ ಇರುವ ಹೆಂಚಿನ ಮನೆಗಳು ಕಳಪೆಯಾಗಿವೆ. ಯಾವುದೇ ಸಮಯದಲ್ಲಿ ಕುಸಿದು ಬೀಳುವ ಅಪಾಯಕರ ಸ್ಥಿತಿಯಲ್ಲಿವೆ~ ಎಂದ ಗ್ರಾಮದ ಹಿರಿಯರಾದ ಸಿದ್ಧಮ್ಮ ಪತ್ರಿಕೆಯೊಂದಿಗೆ ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ. <br /> <br /> `ಕುಡಿಯುವ ನೀರು, ರಸ್ತೆ, ಬೀದಿ ದೀಪಗಳಿಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದೇವೆ~ ಎಂದು ಗ್ರಾಮದ ಹಿರಿಯರು ತಮ್ಮ ಸಮಸ್ಯೆಗಳನ್ನು ಬಿಡಿಸಿಟ್ಟರು.<br /> <br /> ಕೆಲವು ವರ್ಷಗಳ ಹಿಂದೆ ಸರ್ಕಾರ ಈ ಕಾಲೊನಿ ಜನರಿಗೆ ಹೆಂಚಿನ ಮನೆಗಳು ನೀಡಿದೆ. ಅವುಗಳು ಈಗ ಅಲ್ಪಸ್ವಲ್ಪ ಮಳೆ ಬಿದ್ದರೂ ಸಾಕು ಸೋರುತ್ತವೆ. ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ದೂರದ ತೋಟಗಳ ಕೊಳವೆ ಬಾವಿಗಳಿಂದ ನೀರು ಸಂಗ್ರಹಿಸಿ ತರಬೇಕಿದೆ. ಕೂಲಿ ಮಾಡುತ್ತಿರುವ, ಕಡು ಬಡವರೇ ಹೆಚ್ಚಾಗಿ ವಾಸವಿರುವ ಈ ಕಾಲೊನಿಗೆ ಮೂಲಭೂತ ಸವಲತ್ತುಗಳನ್ನು ದೊರಕಿಸಿಕೊಡುವಂತೆ ನಿವಾಸಿಗಳು ಮನವಿ ಮಾಡಿದರು.<br /> <br /> ಮನವಿಗೆ ಸ್ಪಂದಿಸಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಿಕ್ಕಣ್ಣ ಅವರು, ವಿದ್ಯುತ್ ಇಲ್ಲದೆ ರಾಜ್ಯದ ಎಲ್ಲಾ ಕಡೆ ನೀರಿನ ಸಮಸ್ಯೆ ತಲೆದೋರಿದೆ. ಆದರೂ ಗ್ರಾಮದ ದಲಿತ ಸಮುದಾಯದವರಿಗೆ ಅಗತ್ಯ ಸವಲತ್ತುಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಚಿಕ್ಕಣ್ಣ ತಿಳಿಸಿದ್ದಾರೆ.<br /> <strong><br /> ಅಪರಿಚಿತ ಶವ ಪತ್ತೆ</strong><br /> ಮಾಗಡಿ ಪಟ್ಟಣದ ಹೊಂಬಾಳಮ್ಮನಪೇಟೆಯ ಕೆರೆಯಲ್ಲಿ ಬೆಳೆದಿರುವ ಜೊಂಡು ಹುಲ್ಲಿನ ನಡುವೆ ಇರುವ ನೀರಿನ್ಲ್ಲಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿದೆ. ದೇಹವು ಕೊಳೆತ ಸ್ಥಿತಿಯ್ಲ್ಲಲಿದೆ. <br /> ಮೃತನ ಗುರುತು ಪತ್ತೆಯಾಗಿಲ್ಲ. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. <br /> <br /> ಕತ್ತಲಾದ್ದರಿಂದ ಶುಕ್ರವಾರ ಬೆಳಿಗ್ಗೆ ಶವವನ್ನು ಕೆರೆಯ ನೀರಿನಿಂದ ಹೊರತೆಗೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕೆರೆಯ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಕೆರೆಯ ಅಂಗಳದಲ್ಲಿ ಸುಮಾರು 6 ಅಡಿ ಎತ್ತರದ ಜೊಂಡುಹುಲ್ಲು ಬೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ತಾಲ್ಲೂಕಿನ ಕುದೂರು ಹೋಬಳಿಯ ಕಣ್ಣೂರು ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ದಲಿತರ ಕಾಲೋನಿಯಲ್ಲಿ ಮೂಲಭೂತ ಸವಲತ್ತುಗಳನ್ನು ದೊರಕಿಸಿಕೊಡುವಂತೆ ಕಾಲೊನಿಯ ನಿವಾಸಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. <br /> <br /> `ಕಾಲೋನಿಯಲ್ಲಿ ಇರುವ ಹೆಂಚಿನ ಮನೆಗಳು ಕಳಪೆಯಾಗಿವೆ. ಯಾವುದೇ ಸಮಯದಲ್ಲಿ ಕುಸಿದು ಬೀಳುವ ಅಪಾಯಕರ ಸ್ಥಿತಿಯಲ್ಲಿವೆ~ ಎಂದ ಗ್ರಾಮದ ಹಿರಿಯರಾದ ಸಿದ್ಧಮ್ಮ ಪತ್ರಿಕೆಯೊಂದಿಗೆ ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ. <br /> <br /> `ಕುಡಿಯುವ ನೀರು, ರಸ್ತೆ, ಬೀದಿ ದೀಪಗಳಿಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದೇವೆ~ ಎಂದು ಗ್ರಾಮದ ಹಿರಿಯರು ತಮ್ಮ ಸಮಸ್ಯೆಗಳನ್ನು ಬಿಡಿಸಿಟ್ಟರು.<br /> <br /> ಕೆಲವು ವರ್ಷಗಳ ಹಿಂದೆ ಸರ್ಕಾರ ಈ ಕಾಲೊನಿ ಜನರಿಗೆ ಹೆಂಚಿನ ಮನೆಗಳು ನೀಡಿದೆ. ಅವುಗಳು ಈಗ ಅಲ್ಪಸ್ವಲ್ಪ ಮಳೆ ಬಿದ್ದರೂ ಸಾಕು ಸೋರುತ್ತವೆ. ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ದೂರದ ತೋಟಗಳ ಕೊಳವೆ ಬಾವಿಗಳಿಂದ ನೀರು ಸಂಗ್ರಹಿಸಿ ತರಬೇಕಿದೆ. ಕೂಲಿ ಮಾಡುತ್ತಿರುವ, ಕಡು ಬಡವರೇ ಹೆಚ್ಚಾಗಿ ವಾಸವಿರುವ ಈ ಕಾಲೊನಿಗೆ ಮೂಲಭೂತ ಸವಲತ್ತುಗಳನ್ನು ದೊರಕಿಸಿಕೊಡುವಂತೆ ನಿವಾಸಿಗಳು ಮನವಿ ಮಾಡಿದರು.<br /> <br /> ಮನವಿಗೆ ಸ್ಪಂದಿಸಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಿಕ್ಕಣ್ಣ ಅವರು, ವಿದ್ಯುತ್ ಇಲ್ಲದೆ ರಾಜ್ಯದ ಎಲ್ಲಾ ಕಡೆ ನೀರಿನ ಸಮಸ್ಯೆ ತಲೆದೋರಿದೆ. ಆದರೂ ಗ್ರಾಮದ ದಲಿತ ಸಮುದಾಯದವರಿಗೆ ಅಗತ್ಯ ಸವಲತ್ತುಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಚಿಕ್ಕಣ್ಣ ತಿಳಿಸಿದ್ದಾರೆ.<br /> <strong><br /> ಅಪರಿಚಿತ ಶವ ಪತ್ತೆ</strong><br /> ಮಾಗಡಿ ಪಟ್ಟಣದ ಹೊಂಬಾಳಮ್ಮನಪೇಟೆಯ ಕೆರೆಯಲ್ಲಿ ಬೆಳೆದಿರುವ ಜೊಂಡು ಹುಲ್ಲಿನ ನಡುವೆ ಇರುವ ನೀರಿನ್ಲ್ಲಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿದೆ. ದೇಹವು ಕೊಳೆತ ಸ್ಥಿತಿಯ್ಲ್ಲಲಿದೆ. <br /> ಮೃತನ ಗುರುತು ಪತ್ತೆಯಾಗಿಲ್ಲ. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. <br /> <br /> ಕತ್ತಲಾದ್ದರಿಂದ ಶುಕ್ರವಾರ ಬೆಳಿಗ್ಗೆ ಶವವನ್ನು ಕೆರೆಯ ನೀರಿನಿಂದ ಹೊರತೆಗೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕೆರೆಯ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಕೆರೆಯ ಅಂಗಳದಲ್ಲಿ ಸುಮಾರು 6 ಅಡಿ ಎತ್ತರದ ಜೊಂಡುಹುಲ್ಲು ಬೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>