<p><strong>ಹೈದರಾಬಾದ್ (ಪಿಟಿಐ):</strong> ಅಸ್ತಮ ರೋಗಿಗಳಿಗಾಗಿ ವಿತರಿಸಲಾಗುತ್ತಿದ್ದ ಮೀನು ಔಷಧವನ್ನು ಪಡೆಯಲು ಶುಕ್ರವಾರ ಇಲ್ಲಿನ ಕ್ರೀಡಾಂಗಣಕ್ಕೆ ಸಾವಿರಾರು ಜನರು ಆಗಮಿಸಿದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಇದರಿಂದ ಒಬ್ಬ ವ್ಯಕ್ತಿ ಮೃತಪಟ್ಟು ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೀನು ಔಷಧವನ್ನು ಪಡೆಯಲು ಬೆಳಿಗ್ಗೆಯೇ ಕ್ರೀಡಾಂಗಣಕ್ಕೆ ಆಗಮಿಸಿದ್ದ ಸಾವಿರಾರು ಜನರು ಒಂದೇ ಬಾರಿಗೆ ಕ್ರೀಡಾಂಗಣದ ಬಾಗಿಲ ಕಡೆಗೆ ನುಗ್ಗಿದರು. ಇದರಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.<br /> <br /> ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗೊರಖ್ ಪಾಟೀಲ್ (60) ಎಂದು ಗುರುತಿಸಲಾಗಿದ್ದು, ಇವರು ಅಸ್ತಮ ರೋಗಕ್ಕೆ ಒಳಗಾಗಿದ್ದರು ಎಂದು ನಂಬಲಾಗಿದೆ. ಕಾಲ್ತುಳಿತ ಉಂಟಾದ ಸಂದರ್ಭದಲ್ಲಿ ಇವರು ಕೆಳಕ್ಕೆ ಬಿದ್ದರು. ತಕ್ಷಣ ಇವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದರು. <br /> <br /> ಮಹಿಳೆ ಸೇರಿದಂತೆ ಸುಮಾರು 25ಕ್ಕೂ ಅಧಿಕ ಜನರು ಈ ಘಟನೆಯಿಂದ ಗಾಯಗೊಂಡಿದ್ದಾರೆ ಎನ್ನಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ಅಸ್ತಮ ರೋಗಿಗಳಿಗಾಗಿ ವಿತರಿಸಲಾಗುತ್ತಿದ್ದ ಮೀನು ಔಷಧವನ್ನು ಪಡೆಯಲು ಶುಕ್ರವಾರ ಇಲ್ಲಿನ ಕ್ರೀಡಾಂಗಣಕ್ಕೆ ಸಾವಿರಾರು ಜನರು ಆಗಮಿಸಿದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಇದರಿಂದ ಒಬ್ಬ ವ್ಯಕ್ತಿ ಮೃತಪಟ್ಟು ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೀನು ಔಷಧವನ್ನು ಪಡೆಯಲು ಬೆಳಿಗ್ಗೆಯೇ ಕ್ರೀಡಾಂಗಣಕ್ಕೆ ಆಗಮಿಸಿದ್ದ ಸಾವಿರಾರು ಜನರು ಒಂದೇ ಬಾರಿಗೆ ಕ್ರೀಡಾಂಗಣದ ಬಾಗಿಲ ಕಡೆಗೆ ನುಗ್ಗಿದರು. ಇದರಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.<br /> <br /> ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗೊರಖ್ ಪಾಟೀಲ್ (60) ಎಂದು ಗುರುತಿಸಲಾಗಿದ್ದು, ಇವರು ಅಸ್ತಮ ರೋಗಕ್ಕೆ ಒಳಗಾಗಿದ್ದರು ಎಂದು ನಂಬಲಾಗಿದೆ. ಕಾಲ್ತುಳಿತ ಉಂಟಾದ ಸಂದರ್ಭದಲ್ಲಿ ಇವರು ಕೆಳಕ್ಕೆ ಬಿದ್ದರು. ತಕ್ಷಣ ಇವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದರು. <br /> <br /> ಮಹಿಳೆ ಸೇರಿದಂತೆ ಸುಮಾರು 25ಕ್ಕೂ ಅಧಿಕ ಜನರು ಈ ಘಟನೆಯಿಂದ ಗಾಯಗೊಂಡಿದ್ದಾರೆ ಎನ್ನಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>