<p><strong>ಬೆಂಗಳೂರು:</strong> `ಸರ್ಕಾರದಡಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ನೀಡುವ ಸ್ಮರಣಿಕೆಗಳನ್ನು ಕಾವೇರಿ ಮಳಿಗೆಯಿಂದಲೇ ಕೊಂಡುಕೊಳ್ಳಬೇಕೆಂದು ಮನವಿ ಮಾಡಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ' ಎಂದು ಸಣ್ಣ ಕೈಗಾರಿಕಾ ಸಚಿವ ರಾಜುಗೌಡ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ಜಯನಗರದಲ್ಲಿ ನೂತನವಾಗಿ ಆರಂಭಗೊಂಡ ಕಾವೇರಿ ಕರಕುಶಲ ಮಳಿಗೆಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>`ನಿಗಮದ ಅಭಿವೃದ್ಧಿಗಾಗಿ ಈಗಾಗಲೇ 5 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಕರಕುಶಲಕರ್ಮಿ ಗಳಿಗಾಗಿ ಉತ್ತಮ ಮಾರುಕಟ್ಟೆಯನ್ನು ಸೃಷ್ಟಿಸುವತ್ತ ಚಿಂತನೆ ನಡೆಸಬೇಕು' ಎಂದು ತಿಳಿಸಿದರು.</p>.<p>`ನಿಗಮವು ಒಂದು ಕೋಟಿ ರೂಪಾಯಿಗಳಷ್ಟು ಕರಕುಶಲ ವಸ್ತುಗಳನ್ನು ರಫ್ತು ಮಾಡಿದ್ದು, 3.30 ಕೋಟಿಗಳಷ್ಟು ನಿವ್ವಳ ಲಾಭವನ್ನು ಗಳಿಸಿದೆ. ನಿಗಮದಲ್ಲಿ ಐದು ಸಾವಿರ ಕುಶಲಕರ್ಮಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಮೂವತ್ತು ಸಾವಿರಕ್ಕೂ ಹೆಚ್ಚು ಕುಶಲಕರ್ಮಿಗಳು ನಿಗಮವನ್ನು ಅವಲಂಬಿಸಿದ್ದಾರೆ' ಎಂದು ತಿಳಿಸಿದರು.</p>.<p>ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, `ನಿಗಮವು ದೇಶದ ವಿವಿಧ ಭಾಗಗಳಲ್ಲಿರುವ ಐತಿಹಾಸಿಕ ಸ್ಥಳಗಳಿಗೆ ಹಾಗೂ ಕುಶಲಕಲಾ ಕೇಂದ್ರಗಳಿಗೆ ಕಲಾವಿದರನ್ನು ಕರೆದೊಯ್ದು ಕುಶಲತೆಯ ಬಗ್ಗೆ ಹೆಚ್ಚಿನ ತರಬೇತಿಯನ್ನು ನೀಡುತ್ತಿದೆ' ಎಂದು ತಿಳಿಸಿದರು.</p>.<p>`ನೋಂದಾಯಿತ ಕುಶಲಕರ್ಮಿಗಳಿಗೆ ಕಚ್ಚಾವಸ್ತುಗಳಾದ ಶ್ರೀಗಂಧ, ಬೆಳ್ಳಿ, ಸತುವಿನಂತಹ ಲೋಹಗಳನ್ನು ಶೇ 50 ರಷ್ಟು ಕಡಿಮೆ ದರದಲ್ಲಿ ನೀಡಲಾಗುತ್ತಿದೆ' ಎಂದು ಹೇಳಿದರು. ನಿಗಮದ ನಿರ್ದೇಶಕ ಎಸ್.ಕೆ.ರವಿಕುಮಾರ್, ಶಾಸಕ ಬಿ.ಎನ್.ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಸರ್ಕಾರದಡಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ನೀಡುವ ಸ್ಮರಣಿಕೆಗಳನ್ನು ಕಾವೇರಿ ಮಳಿಗೆಯಿಂದಲೇ ಕೊಂಡುಕೊಳ್ಳಬೇಕೆಂದು ಮನವಿ ಮಾಡಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ' ಎಂದು ಸಣ್ಣ ಕೈಗಾರಿಕಾ ಸಚಿವ ರಾಜುಗೌಡ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ಜಯನಗರದಲ್ಲಿ ನೂತನವಾಗಿ ಆರಂಭಗೊಂಡ ಕಾವೇರಿ ಕರಕುಶಲ ಮಳಿಗೆಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>`ನಿಗಮದ ಅಭಿವೃದ್ಧಿಗಾಗಿ ಈಗಾಗಲೇ 5 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಕರಕುಶಲಕರ್ಮಿ ಗಳಿಗಾಗಿ ಉತ್ತಮ ಮಾರುಕಟ್ಟೆಯನ್ನು ಸೃಷ್ಟಿಸುವತ್ತ ಚಿಂತನೆ ನಡೆಸಬೇಕು' ಎಂದು ತಿಳಿಸಿದರು.</p>.<p>`ನಿಗಮವು ಒಂದು ಕೋಟಿ ರೂಪಾಯಿಗಳಷ್ಟು ಕರಕುಶಲ ವಸ್ತುಗಳನ್ನು ರಫ್ತು ಮಾಡಿದ್ದು, 3.30 ಕೋಟಿಗಳಷ್ಟು ನಿವ್ವಳ ಲಾಭವನ್ನು ಗಳಿಸಿದೆ. ನಿಗಮದಲ್ಲಿ ಐದು ಸಾವಿರ ಕುಶಲಕರ್ಮಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಮೂವತ್ತು ಸಾವಿರಕ್ಕೂ ಹೆಚ್ಚು ಕುಶಲಕರ್ಮಿಗಳು ನಿಗಮವನ್ನು ಅವಲಂಬಿಸಿದ್ದಾರೆ' ಎಂದು ತಿಳಿಸಿದರು.</p>.<p>ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, `ನಿಗಮವು ದೇಶದ ವಿವಿಧ ಭಾಗಗಳಲ್ಲಿರುವ ಐತಿಹಾಸಿಕ ಸ್ಥಳಗಳಿಗೆ ಹಾಗೂ ಕುಶಲಕಲಾ ಕೇಂದ್ರಗಳಿಗೆ ಕಲಾವಿದರನ್ನು ಕರೆದೊಯ್ದು ಕುಶಲತೆಯ ಬಗ್ಗೆ ಹೆಚ್ಚಿನ ತರಬೇತಿಯನ್ನು ನೀಡುತ್ತಿದೆ' ಎಂದು ತಿಳಿಸಿದರು.</p>.<p>`ನೋಂದಾಯಿತ ಕುಶಲಕರ್ಮಿಗಳಿಗೆ ಕಚ್ಚಾವಸ್ತುಗಳಾದ ಶ್ರೀಗಂಧ, ಬೆಳ್ಳಿ, ಸತುವಿನಂತಹ ಲೋಹಗಳನ್ನು ಶೇ 50 ರಷ್ಟು ಕಡಿಮೆ ದರದಲ್ಲಿ ನೀಡಲಾಗುತ್ತಿದೆ' ಎಂದು ಹೇಳಿದರು. ನಿಗಮದ ನಿರ್ದೇಶಕ ಎಸ್.ಕೆ.ರವಿಕುಮಾರ್, ಶಾಸಕ ಬಿ.ಎನ್.ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>