<p><strong>ಚಾಮರಾಜನಗರ:</strong> `ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರಿನ ಸಮಸ್ಯೆ ಇಲ್ಲ. ಆದರೆ, ಎರಡೂ ರಾಜ್ಯದ ರಾಜಕಾರಣಿಗಳೇ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ~ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಗುರುವಾರ ವಿಷಾದಿಸಿದರು.<br /> <br /> ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿಗೆ ಸೇರಿದ ತಾಳವಾಡಿ ಗ್ರಾಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ತಾಳವಾಡಿ-ಫಿರ್ಕಾ ತಾಲ್ಲೂಕು ಯೂನಿಯನ್ ಹಾಗೂ ಕನ್ನಡಪರ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಭಾಷಾ ಭಾವೈಕ್ಯ ಸಮಾವೇಶ ಹಾಗೂ ಹೊರನಾಡ ಕನ್ನಡಿಗರ ಸಂಸ್ಕೃತಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> `ಭಾಷೆ ಅಭಿವ್ಯಕ್ತಿಯ ಮಾಧ್ಯಮ. ಅದು ಸಂಘರ್ಷದ ಸಂತೇಕವಾಗಬಾರದು. ನದಿ ನೀರು ವಿವಾದದಿಂದ ಭಾಷಾ ಸಾಮರಸ್ಯಕ್ಕೆ ಧಕ್ಕೆಯಾಗುವುದು ಸರಿಯಲ್ಲ. ತಾಳವಾಡಿಯಲ್ಲಿ ಕನ್ನಡಿಗರು ಹಾಗೂ ತಮಿಳು ಭಾಷಿಕರು ಅನೋನ್ಯವಾಗಿದ್ದಾರೆ. ಭಾಷಾ ಭಾವೈಕ್ಯಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ~ ಎಂದರು.<br /> <br /> ಚಿತ್ರನಟ ಶಿವರಾಜ್ ಕುಮಾರ್ ಮಾತನಾಡಿ, `ನಾವೆಲ್ಲರೂ ಭಾರತೀಯರು. ಒಂದೇ ಎನ್ನುವ ಭಾವನೆಯಿಂದ ಬದುಕಬೇಕು. ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಿಕೊಳ್ಳುವುದು ಎರಡು ರಾಜ್ಯದ ಸರ್ಕಾರಗಳ ಜವಾಬ್ದಾರಿ. ಹೀಗಾಗಿ, ಭಾಷಾ ಸಂಘರ್ಷಕ್ಕೆ ಅವಕಾಶ ನೀಡಬಾರದು~ ಎಂದು ಸಲಹೆ ನೀಡಿದರು.<br /> <br /> ತಮಿಳುನಾಡಿನ ಭವನಿಸಾಗರ ಕ್ಷೇತ್ರದ ಶಾಸಕ ಪಿ.ಎಲ್.ಸುಂದರಂ ಮಾತನಾಡಿ, `ತಾಳವಾಡಿಯಲ್ಲಿ ತಮಿಳರು ಮತ್ತು ಕನ್ನಡಿಗರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಕನ್ನಡಿಗರಿಗೆ ತಾರತಮ್ಯ ಮಾಡದೆ ಸರ್ಕಾರದಿಂದ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಜನರ ಬಹುದಿನದ ಬೇಡಿಕೆಯಂತೆ ತಾಳವಾಡಿಯನ್ನು ತಾಲ್ಲೂಕು ಕೇಂದ್ರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, `ಹೊರನಾಡ ಕನ್ನಡಿಗರ ಸಮಸ್ಯೆ ಪರಿಹರಿಸಲು ಸದನ ಸಮಿತಿ ರಚಿಸಲಾಗಿದೆ.ಸಮಾವೇಶದಲ್ಲಿ ಜನರ ಹಕ್ಕೊತ್ತಾಯ ಮಂಡಿಸಲಾಗುವುದು. ಇದನ್ನು ಸಮಿತಿ ಮುಂದೆಯೂ ಮಂಡಿಸುತ್ತೇವೆ. ಬಳಿಕ ಎರಡು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಧಿಕಾರ ಬದ್ಧವಾಗಿದೆ~ ಎಂದು ಹೇಳಿದರು.<br /> <br /> ಸಮಾವೇಶಕ್ಕೂ ಮೊದಲು ಹಮ್ಮಿಕೊಂಡಿದ್ದ ಕರ್ನಾಟಕ ಹಾಗೂ ತಮಿಳುನಾಡು ಜನಪದ ಕಲಾ ತಂಡಗಳ ಬೃಹತ್ ಮೆರವಣಿಗೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ಕುಮಾರ್ ಚಾಲನೆ ನೀಡಿದರು. ಸಾಹಿತಿ ಡಾ.ಹಂಪ ನಾಗರಾಜಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> `ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರಿನ ಸಮಸ್ಯೆ ಇಲ್ಲ. ಆದರೆ, ಎರಡೂ ರಾಜ್ಯದ ರಾಜಕಾರಣಿಗಳೇ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ~ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಗುರುವಾರ ವಿಷಾದಿಸಿದರು.<br /> <br /> ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿಗೆ ಸೇರಿದ ತಾಳವಾಡಿ ಗ್ರಾಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ತಾಳವಾಡಿ-ಫಿರ್ಕಾ ತಾಲ್ಲೂಕು ಯೂನಿಯನ್ ಹಾಗೂ ಕನ್ನಡಪರ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಭಾಷಾ ಭಾವೈಕ್ಯ ಸಮಾವೇಶ ಹಾಗೂ ಹೊರನಾಡ ಕನ್ನಡಿಗರ ಸಂಸ್ಕೃತಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> `ಭಾಷೆ ಅಭಿವ್ಯಕ್ತಿಯ ಮಾಧ್ಯಮ. ಅದು ಸಂಘರ್ಷದ ಸಂತೇಕವಾಗಬಾರದು. ನದಿ ನೀರು ವಿವಾದದಿಂದ ಭಾಷಾ ಸಾಮರಸ್ಯಕ್ಕೆ ಧಕ್ಕೆಯಾಗುವುದು ಸರಿಯಲ್ಲ. ತಾಳವಾಡಿಯಲ್ಲಿ ಕನ್ನಡಿಗರು ಹಾಗೂ ತಮಿಳು ಭಾಷಿಕರು ಅನೋನ್ಯವಾಗಿದ್ದಾರೆ. ಭಾಷಾ ಭಾವೈಕ್ಯಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ~ ಎಂದರು.<br /> <br /> ಚಿತ್ರನಟ ಶಿವರಾಜ್ ಕುಮಾರ್ ಮಾತನಾಡಿ, `ನಾವೆಲ್ಲರೂ ಭಾರತೀಯರು. ಒಂದೇ ಎನ್ನುವ ಭಾವನೆಯಿಂದ ಬದುಕಬೇಕು. ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಿಕೊಳ್ಳುವುದು ಎರಡು ರಾಜ್ಯದ ಸರ್ಕಾರಗಳ ಜವಾಬ್ದಾರಿ. ಹೀಗಾಗಿ, ಭಾಷಾ ಸಂಘರ್ಷಕ್ಕೆ ಅವಕಾಶ ನೀಡಬಾರದು~ ಎಂದು ಸಲಹೆ ನೀಡಿದರು.<br /> <br /> ತಮಿಳುನಾಡಿನ ಭವನಿಸಾಗರ ಕ್ಷೇತ್ರದ ಶಾಸಕ ಪಿ.ಎಲ್.ಸುಂದರಂ ಮಾತನಾಡಿ, `ತಾಳವಾಡಿಯಲ್ಲಿ ತಮಿಳರು ಮತ್ತು ಕನ್ನಡಿಗರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಕನ್ನಡಿಗರಿಗೆ ತಾರತಮ್ಯ ಮಾಡದೆ ಸರ್ಕಾರದಿಂದ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಜನರ ಬಹುದಿನದ ಬೇಡಿಕೆಯಂತೆ ತಾಳವಾಡಿಯನ್ನು ತಾಲ್ಲೂಕು ಕೇಂದ್ರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, `ಹೊರನಾಡ ಕನ್ನಡಿಗರ ಸಮಸ್ಯೆ ಪರಿಹರಿಸಲು ಸದನ ಸಮಿತಿ ರಚಿಸಲಾಗಿದೆ.ಸಮಾವೇಶದಲ್ಲಿ ಜನರ ಹಕ್ಕೊತ್ತಾಯ ಮಂಡಿಸಲಾಗುವುದು. ಇದನ್ನು ಸಮಿತಿ ಮುಂದೆಯೂ ಮಂಡಿಸುತ್ತೇವೆ. ಬಳಿಕ ಎರಡು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಧಿಕಾರ ಬದ್ಧವಾಗಿದೆ~ ಎಂದು ಹೇಳಿದರು.<br /> <br /> ಸಮಾವೇಶಕ್ಕೂ ಮೊದಲು ಹಮ್ಮಿಕೊಂಡಿದ್ದ ಕರ್ನಾಟಕ ಹಾಗೂ ತಮಿಳುನಾಡು ಜನಪದ ಕಲಾ ತಂಡಗಳ ಬೃಹತ್ ಮೆರವಣಿಗೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ಕುಮಾರ್ ಚಾಲನೆ ನೀಡಿದರು. ಸಾಹಿತಿ ಡಾ.ಹಂಪ ನಾಗರಾಜಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>