<p>ಶ್ರೀನಗರ(ಐಎಎನ್ಎಸ್/ಪಿಟಿಐ): ಕಾಶ್ಮೀರ ಕಣಿವೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಹಿಮಪಾತದಿಂದ ಉಂಟಾದ ಹಿಮಕುಸಿತದಿಂದಾಗಿ ಇಬ್ಬರು ಯೋಧರು ಸೇರಿ 12 ಜನರು ಮೃತಪಟ್ಟಿದ್ದಾರೆ.<br /> <br /> ಅಲ್ಲದೇ, ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಮನೆಗಳು ಕುಸಿದಿರುವ ಕುರಿತು ವರದಿಯಾಗಿದೆ.<br /> <br /> ಅಕಾಲಿಕ ಹಿಮಪಾತದಿಂದ ಕಾಶ್ಮೀರದ ವಿವಿಧೆಡೆ ಸಿಲುಕಿಕೊಂಡಿದ್ದ 100 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಇಷ್ಟೇ ಅಲ್ಲದೇ ಹಿಮಪಾತದ ತೀವ್ರತೆಗೆ ಸುಮಾರು 150 ಮನೆಗಳು ಜಖಂಗೊಂಡಿವೆ.<br /> <br /> ಕಾರ್ಗಿಲ್ನ ಲಡಾಖ್ ಪ್ರಾಂತ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 82 ಫೀಲ್ಡ್ ರೆಜಿಮೆಂಟ್ನ ಯೋಧರಾದ ನಾಯಕ್ ವಿಜಯ್ ಪ್ರಸಾದ್, ಧರ್ಮೇಂದ್ರ ಸಿಂಗ್ ಅವರು ಹಿಮಕುಸಿತದಲ್ಲಿ ಮೃತಪಟ್ಟವರು.<br /> <br /> ಇವರಿಬ್ಬರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ರಾಜ್ಯದ ವಿವಿಧೆಡೆ ಹಿಮಕುಸಿತವಾಗುವ ಸಾಧ್ಯತೆ ಇದೆ. ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಎಚ್ಚರಿಕೆ ನೀಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ(ಐಎಎನ್ಎಸ್/ಪಿಟಿಐ): ಕಾಶ್ಮೀರ ಕಣಿವೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಹಿಮಪಾತದಿಂದ ಉಂಟಾದ ಹಿಮಕುಸಿತದಿಂದಾಗಿ ಇಬ್ಬರು ಯೋಧರು ಸೇರಿ 12 ಜನರು ಮೃತಪಟ್ಟಿದ್ದಾರೆ.<br /> <br /> ಅಲ್ಲದೇ, ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಮನೆಗಳು ಕುಸಿದಿರುವ ಕುರಿತು ವರದಿಯಾಗಿದೆ.<br /> <br /> ಅಕಾಲಿಕ ಹಿಮಪಾತದಿಂದ ಕಾಶ್ಮೀರದ ವಿವಿಧೆಡೆ ಸಿಲುಕಿಕೊಂಡಿದ್ದ 100 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಇಷ್ಟೇ ಅಲ್ಲದೇ ಹಿಮಪಾತದ ತೀವ್ರತೆಗೆ ಸುಮಾರು 150 ಮನೆಗಳು ಜಖಂಗೊಂಡಿವೆ.<br /> <br /> ಕಾರ್ಗಿಲ್ನ ಲಡಾಖ್ ಪ್ರಾಂತ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 82 ಫೀಲ್ಡ್ ರೆಜಿಮೆಂಟ್ನ ಯೋಧರಾದ ನಾಯಕ್ ವಿಜಯ್ ಪ್ರಸಾದ್, ಧರ್ಮೇಂದ್ರ ಸಿಂಗ್ ಅವರು ಹಿಮಕುಸಿತದಲ್ಲಿ ಮೃತಪಟ್ಟವರು.<br /> <br /> ಇವರಿಬ್ಬರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ರಾಜ್ಯದ ವಿವಿಧೆಡೆ ಹಿಮಕುಸಿತವಾಗುವ ಸಾಧ್ಯತೆ ಇದೆ. ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಎಚ್ಚರಿಕೆ ನೀಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>