<p><strong>ನವದೆಹಲಿ, (ಪಿಟಿಐ):</strong> ಕೇಂದ್ರ ಸರ್ಕಾರ ನೇಮಿಸಿದ್ದ ಜಮ್ಮು ಮತ್ತು ಕಾಶ್ಮೀರದ ಸಂಧಾನಕಾರರು ಗೃಹ ಸಚಿವ ಪಿ.ಚಿದಂಬರಂ ಅವರಿಗೆ ಬುಧವಾರ ವರದಿ ಸಲ್ಲಿಸಿದರು.</p>.<p>ಕಾಶ್ಮೀರದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಸಲಹೆಗಳನ್ನು ಒಳಗೊಂಡ ವರದಿಯನ್ನು ಸಂಧಾನಕಾರರಾದ ಹಿರಿಯ ಪತ್ರಕರ್ತ ದಿಲೀಪ್ ಪಡಗಾಂವ್ಕರ್, ಮಾಹಿತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಎಂ.ಅನ್ಸಾರಿ ಮತ್ತು ರಾಧಾ ಕುಮಾರ್ ಅವರ ಸಲಿಸಿದರು.</p>.<p>ಕಳೆದ ವರ್ಷ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರವಾದಂತೆ ಸಂಧಾನಕಾರರನ್ನು ನೇಮಿಸಿ ಒಂದು ವರ್ಷದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ನಿಗದಿಯಂತೆ ಅವರು ಒಂದು ವರ್ಷದಲ್ಲಿ ವರದಿ ಸಲ್ಲಿಸಿದ್ದಾರೆ. <br /> ಸಂಧಾನಕಾರರು ಹುರಿಯತ್ ಸಂಘಟನೆಯ ಅಧ್ಯಕ್ಷ ಮೌಲಾನಾ ಅಬ್ಬಾಸ್ ಅನ್ಸಾರಿ ಅವರನ್ನು ಹೊರತುಪಡಿಸಿ ಬೇರಾವುದೇ ಪ್ರತ್ಯೇಕತಾವಾದಿ ಸಂಘಟನೆಯ ಮುಖಂಡರನ್ನು ಭೇಟಿ ಮಾಡಲಿಲ್ಲ. ರಾಜ್ಯದ ಎಲ್ಲ ಕಡೆಗಳಲ್ಲಿ ಸಂಚರಿಸಿ ಪ್ರತ್ಯೇಕತಾವಾದಿಗಳ ಬೇಡಿಕೆ ಮತ್ತು ನಾಗರಿಕ ಅಗತ್ಯಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.</p>.<p>ಸುಮಾರು 700 ನಿಯೋಗಗಳನ್ನು ಭೇಟಿ ಮಾಡಿದ ಸಂಧಾನಕಾರರು ಎಲ್ಲವುಗಳ ಅಹವಾಲುಗಳನ್ನೂ ಆಲಿಸಿದ್ದಾರೆ. ಇದಲ್ಲದೆ ಮೂರು ದುಂಡು ಮೇಜಿನ ಪರಿಷತ್ತನ್ನು ಹಾಗೂ ಮೂರು ಬಹಿರಂಗ ಸಭೆಗಳನ್ನು ನಡೆಸಲಾಗಿದೆ.</p>.<p> ಸಂಧಾನಕಾರರಾಗಿ ನೇಮಕವಾಗುವ ಮೊದಲು ರಾಧಾ ಕುಮಾರ್ ಅವರು ಹುರಿಯತ್ನ ಎರಡೂ ಬಣಗಳ ನಾಯಕರ ಮಧ್ಯೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದರು. ಆದರೆ ಅವರು ಸಂಧಾನಕಾರರಾಗಿ ನೇಮಕಗೊಂಡ ನಂತರ ಪ್ರತ್ಯೇಕತಾವಾದಿ ಮುಖಂಡರು ಅವರಿಂದ ದೂರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ):</strong> ಕೇಂದ್ರ ಸರ್ಕಾರ ನೇಮಿಸಿದ್ದ ಜಮ್ಮು ಮತ್ತು ಕಾಶ್ಮೀರದ ಸಂಧಾನಕಾರರು ಗೃಹ ಸಚಿವ ಪಿ.ಚಿದಂಬರಂ ಅವರಿಗೆ ಬುಧವಾರ ವರದಿ ಸಲ್ಲಿಸಿದರು.</p>.<p>ಕಾಶ್ಮೀರದ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಸಲಹೆಗಳನ್ನು ಒಳಗೊಂಡ ವರದಿಯನ್ನು ಸಂಧಾನಕಾರರಾದ ಹಿರಿಯ ಪತ್ರಕರ್ತ ದಿಲೀಪ್ ಪಡಗಾಂವ್ಕರ್, ಮಾಹಿತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಎಂ.ಅನ್ಸಾರಿ ಮತ್ತು ರಾಧಾ ಕುಮಾರ್ ಅವರ ಸಲಿಸಿದರು.</p>.<p>ಕಳೆದ ವರ್ಷ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರವಾದಂತೆ ಸಂಧಾನಕಾರರನ್ನು ನೇಮಿಸಿ ಒಂದು ವರ್ಷದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ನಿಗದಿಯಂತೆ ಅವರು ಒಂದು ವರ್ಷದಲ್ಲಿ ವರದಿ ಸಲ್ಲಿಸಿದ್ದಾರೆ. <br /> ಸಂಧಾನಕಾರರು ಹುರಿಯತ್ ಸಂಘಟನೆಯ ಅಧ್ಯಕ್ಷ ಮೌಲಾನಾ ಅಬ್ಬಾಸ್ ಅನ್ಸಾರಿ ಅವರನ್ನು ಹೊರತುಪಡಿಸಿ ಬೇರಾವುದೇ ಪ್ರತ್ಯೇಕತಾವಾದಿ ಸಂಘಟನೆಯ ಮುಖಂಡರನ್ನು ಭೇಟಿ ಮಾಡಲಿಲ್ಲ. ರಾಜ್ಯದ ಎಲ್ಲ ಕಡೆಗಳಲ್ಲಿ ಸಂಚರಿಸಿ ಪ್ರತ್ಯೇಕತಾವಾದಿಗಳ ಬೇಡಿಕೆ ಮತ್ತು ನಾಗರಿಕ ಅಗತ್ಯಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.</p>.<p>ಸುಮಾರು 700 ನಿಯೋಗಗಳನ್ನು ಭೇಟಿ ಮಾಡಿದ ಸಂಧಾನಕಾರರು ಎಲ್ಲವುಗಳ ಅಹವಾಲುಗಳನ್ನೂ ಆಲಿಸಿದ್ದಾರೆ. ಇದಲ್ಲದೆ ಮೂರು ದುಂಡು ಮೇಜಿನ ಪರಿಷತ್ತನ್ನು ಹಾಗೂ ಮೂರು ಬಹಿರಂಗ ಸಭೆಗಳನ್ನು ನಡೆಸಲಾಗಿದೆ.</p>.<p> ಸಂಧಾನಕಾರರಾಗಿ ನೇಮಕವಾಗುವ ಮೊದಲು ರಾಧಾ ಕುಮಾರ್ ಅವರು ಹುರಿಯತ್ನ ಎರಡೂ ಬಣಗಳ ನಾಯಕರ ಮಧ್ಯೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದರು. ಆದರೆ ಅವರು ಸಂಧಾನಕಾರರಾಗಿ ನೇಮಕಗೊಂಡ ನಂತರ ಪ್ರತ್ಯೇಕತಾವಾದಿ ಮುಖಂಡರು ಅವರಿಂದ ದೂರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>