<p><strong>ಬೆಂಗಳೂರು:</strong> ‘ಕಯ್ಯಾರ ಕಿಞ್ಞಣ್ಣ ರೈ ಅವರ ಶತಮಾನೋತ್ಸವದ ಈ ಹೊತ್ತಿನಲ್ಲಾದರೂ ಕಾಸರಗೋಡು ಕರ್ನಾಟಕಕ್ಕೆ ಸೇರುವಂತಾಗ ಬೇಕು’ ಎಂದು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಆಶಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಯ್ಯಾರ ಕಿಞ್ಞಣ್ಣ ರೈ 100ರ ಸಂಭ್ರಮ’ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಕೆಲವರ ಹುನ್ನಾರದಿಂದ ಕಾಸರಗೋಡು ಕರ್ನಾಟಕದ ಕೈತಪ್ಪಿತು. ಅದನ್ನು ವಾಪಾಸ್ಸು ಕರೆತರುವ ಕೆಲಸವನ್ನು ಮುಖ್ಯಮಂತ್ರಿ ಅವರು ಮಾಡಬೇಕಿದೆ. ಆಗ ಮಾತ್ರ ಮಹಾನ್ ಕವಿ ಕಿಞ್ಞಣ್ಣ ರೈ ಅವರಿಗೆ ನಿಜ ಅರ್ಥದಲ್ಲಿ ಗೌರವ ಸಲ್ಲಿಸಿದಂತಾಗು-ತ್ತದೆ’ ಎಂದು ಅಭಿಪ್ರಾಯಪಟ್ಟರು. ‘ತುಳು ಮಾತೃ ಭಾಷೆಯಾಗಿದ್ದರೂ, ಕನ್ನಡದ ಬಗ್ಗೆ ಅಪಾರ ಒಲವಿಟ್ಟುಕೊಂಡು, ಕಥನ ಕಾವ್ಯ, ಶಿಶು ಗೀತೆಗಳನ್ನು ರಚಿಸಿದ್ದಾರೆ’ ಎಂದು ಶ್ಲಾಘಿಸಿದರು.<br /> <br /> ವಿಮರ್ಶಕ ಡಾ.ಬಸವರಾಜ ಕಲ್ಗುಡಿ, ‘ತುಳು, ಕನ್ನಡ, ಸಂಸ್ಕೃತ ಭಾಷೆಗಳಲ್ಲಿ ಅಗಾಧ ಪಾಂಡಿತ್ಯ ಗಳಿಸಿದ್ದರೂ, ಮಕ್ಕಳ ಭಾವಕೋಶವನ್ನು ತೀಡುವಂತಹ ಸರಳ ಶಿಶುಗೀತೆಗಳನ್ನು ರಚಿಸಿದ್ದಾರೆ’ ಎಂದು ಹೇಳಿದರು.‘ಕುವೆಂಪು, ಬೇಂದ್ರೆ ಅವರಿಗಿಂತ ವಿಭಿನ್ನ ಪರಿಕಲ್ಪನೆಯಿಟ್ಟುಕೊಂಡು ಕಾವ್ಯ ಕ್ಷೇತ್ರದಲ್ಲಿ ತೊಡಗಿಕೊಂಡರು.</p>.<p>ಕನ್ನಡಕ್ಕೂ ಅನ್ವಯಿಸುವಂತಹ ತುಳುವಿನ ಘನಾತ್ಮಕ ಕಲ್ಪನೆಯನ್ನು ಕೊಡುಗೆಯಾಗಿ ನೀಡಿದ್ದಾರೆ’ ಎಂದರು. ಮಂಗಳೂರು ಆಕಾಶವಾಣಿ ನಿರ್ದೇಶಕ ಡಾ.ವಸಂತಕುಮಾರ ಪೆರ್ಲ, ‘ಬಹು ಸಂಸ್ಕೃತಿಗೆ ಹೆಸರಾದ ದಕ್ಷಿಣ ಕನ್ನಡದಲ್ಲಿ ಸಮನ್ವಯತೆ ಸಾಧಿಸಿದ ಅದ್ಬುತ ಕವಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಯ್ಯಾರ ಕಿಞ್ಞಣ್ಣ ರೈ ಅವರ ಶತಮಾನೋತ್ಸವದ ಈ ಹೊತ್ತಿನಲ್ಲಾದರೂ ಕಾಸರಗೋಡು ಕರ್ನಾಟಕಕ್ಕೆ ಸೇರುವಂತಾಗ ಬೇಕು’ ಎಂದು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಆಶಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಯ್ಯಾರ ಕಿಞ್ಞಣ್ಣ ರೈ 100ರ ಸಂಭ್ರಮ’ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಕೆಲವರ ಹುನ್ನಾರದಿಂದ ಕಾಸರಗೋಡು ಕರ್ನಾಟಕದ ಕೈತಪ್ಪಿತು. ಅದನ್ನು ವಾಪಾಸ್ಸು ಕರೆತರುವ ಕೆಲಸವನ್ನು ಮುಖ್ಯಮಂತ್ರಿ ಅವರು ಮಾಡಬೇಕಿದೆ. ಆಗ ಮಾತ್ರ ಮಹಾನ್ ಕವಿ ಕಿಞ್ಞಣ್ಣ ರೈ ಅವರಿಗೆ ನಿಜ ಅರ್ಥದಲ್ಲಿ ಗೌರವ ಸಲ್ಲಿಸಿದಂತಾಗು-ತ್ತದೆ’ ಎಂದು ಅಭಿಪ್ರಾಯಪಟ್ಟರು. ‘ತುಳು ಮಾತೃ ಭಾಷೆಯಾಗಿದ್ದರೂ, ಕನ್ನಡದ ಬಗ್ಗೆ ಅಪಾರ ಒಲವಿಟ್ಟುಕೊಂಡು, ಕಥನ ಕಾವ್ಯ, ಶಿಶು ಗೀತೆಗಳನ್ನು ರಚಿಸಿದ್ದಾರೆ’ ಎಂದು ಶ್ಲಾಘಿಸಿದರು.<br /> <br /> ವಿಮರ್ಶಕ ಡಾ.ಬಸವರಾಜ ಕಲ್ಗುಡಿ, ‘ತುಳು, ಕನ್ನಡ, ಸಂಸ್ಕೃತ ಭಾಷೆಗಳಲ್ಲಿ ಅಗಾಧ ಪಾಂಡಿತ್ಯ ಗಳಿಸಿದ್ದರೂ, ಮಕ್ಕಳ ಭಾವಕೋಶವನ್ನು ತೀಡುವಂತಹ ಸರಳ ಶಿಶುಗೀತೆಗಳನ್ನು ರಚಿಸಿದ್ದಾರೆ’ ಎಂದು ಹೇಳಿದರು.‘ಕುವೆಂಪು, ಬೇಂದ್ರೆ ಅವರಿಗಿಂತ ವಿಭಿನ್ನ ಪರಿಕಲ್ಪನೆಯಿಟ್ಟುಕೊಂಡು ಕಾವ್ಯ ಕ್ಷೇತ್ರದಲ್ಲಿ ತೊಡಗಿಕೊಂಡರು.</p>.<p>ಕನ್ನಡಕ್ಕೂ ಅನ್ವಯಿಸುವಂತಹ ತುಳುವಿನ ಘನಾತ್ಮಕ ಕಲ್ಪನೆಯನ್ನು ಕೊಡುಗೆಯಾಗಿ ನೀಡಿದ್ದಾರೆ’ ಎಂದರು. ಮಂಗಳೂರು ಆಕಾಶವಾಣಿ ನಿರ್ದೇಶಕ ಡಾ.ವಸಂತಕುಮಾರ ಪೆರ್ಲ, ‘ಬಹು ಸಂಸ್ಕೃತಿಗೆ ಹೆಸರಾದ ದಕ್ಷಿಣ ಕನ್ನಡದಲ್ಲಿ ಸಮನ್ವಯತೆ ಸಾಧಿಸಿದ ಅದ್ಬುತ ಕವಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>