<p>ಬೆಂಗಳೂರು: `ಕೇಂದ್ರ ಸರ್ಕಾರ ಕಲ್ಲಿದ್ದಲು ನೀತಿಯನ್ನು ಬದಲಿಸಲಿರುವ ಲಕ್ಷಣಗಳು ಕಾಣುತ್ತಿದ್ದು ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆಗೆ ತೀವ್ರ ತೊಂದರೆಯಾಗಲಿದೆ. ಈ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು~ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. <br /> <br /> ನಗರದಲ್ಲಿ ಇತ್ತೀಚೆಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಆಯೋಜಿಸಿದ್ದ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಈ ಹಿಂದೆ ರಾಜ್ಯಕ್ಕೆ ಅಗತ್ಯವಿರುವಷ್ಟು ಕಲ್ಲಿದ್ದಲು ಪೂರೈಕೆಯ ಆಶ್ವಾಸನೆ ನೀಡಿದ್ದ ಕೇಂದ್ರ ಕಲ್ಲಿದ್ದಲು ಸಚಿವಾಲಯವು, ಈಗ ತನ್ನ ಕಲ್ಲಿದ್ದಲು ನೀತಿಯನ್ನೇ ಬದಲಿಸಿ ಖಾಸಗಿ ಕಂಪೆನಿಗಳಿಗೆ ಆದ್ಯತೆ ನೀಡಲು ಹೊರಟಿರುವ ಕ್ರಮ ಸರಿಯಲ್ಲ. <br /> <br /> ಇದರಿಂದ ರಾಜ್ಯ ಸರ್ಕಾರಗಳು ಖಾಸಗಿ ಕಂಪೆನಿಗಳ ಜೊತೆಗೆ ಬಿಡ್ನಲ್ಲಿ ಪಾಲ್ಗೊಳ್ಳಬೇಕಾದ್ದು ಅನಿವಾರ್ಯವಾಗಲಿದೆ. ಹೀಗಾಗಿ ಹೊಸ ಕಲ್ಲಿದ್ದಲು ನೀತಿಯನ್ನು ಕೈ ಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು~ ಎಂದರು.<br /> <br /> `ರಾಜ್ಯದ ಯಡ್ಲಾಪುರ ಹಾಗೂ ಬಳ್ಳಾರಿ ಮೂರನೇ ಘಟಕಕ್ಕೆ ಹೊಸ ಯಂತ್ರಗಳ ಖರೀದಿ ಈಗಾಗಲೇ ನಡೆದಿದ್ದು, ಅಗತ್ಯವಿರುವಷ್ಟು ಕಲ್ಲಿದ್ದಲು ಪೂರೈಕೆಯಾಗದೇ ಹೋದರೆ ರಾಜ್ಯದ ವಿದ್ಯುತ್ ಕೊರತೆ ಹೆಚ್ಚಾಗಲಿದೆ~ ಎಂದು ಅವರು ಹೇಳಿದರು.<br /> <br /> `ಉದ್ಯಮಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಮುಂದೆ ಬರಬೇಕು~ ಎಂದು ಅವರು ಕರೆ ನೀಡಿದರು.<br /> <br /> ಸಮಾರಂಭದಲ್ಲಿ ಲಲಿತಾ ರಾವ್ ಸಾಹಿಬ್ ಹಾಗೂ ರೇಖಾ ಜಿ. ಕಾಮತ್ ಅವರಿಗೆ 2012 ನೇ ಸಾಲಿನ `ಕಾಸಿಯಾ ಅತ್ಯುತ್ತಮ ಮಹಿಳಾ ಉದ್ಯಮಿ~ ಪ್ರಶಸ್ತಿಯನ್ನು ನೀಡಲಾಯಿತು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಪ್ರಕಾಶ್ ಎನ್. ರಾಯ್ಕರ್, ಮಹಿಳಾ ಉದ್ಯಮಿಗಳ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಲಲನ್ ಸನಾಡೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಕೇಂದ್ರ ಸರ್ಕಾರ ಕಲ್ಲಿದ್ದಲು ನೀತಿಯನ್ನು ಬದಲಿಸಲಿರುವ ಲಕ್ಷಣಗಳು ಕಾಣುತ್ತಿದ್ದು ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆಗೆ ತೀವ್ರ ತೊಂದರೆಯಾಗಲಿದೆ. ಈ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು~ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. <br /> <br /> ನಗರದಲ್ಲಿ ಇತ್ತೀಚೆಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಆಯೋಜಿಸಿದ್ದ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಈ ಹಿಂದೆ ರಾಜ್ಯಕ್ಕೆ ಅಗತ್ಯವಿರುವಷ್ಟು ಕಲ್ಲಿದ್ದಲು ಪೂರೈಕೆಯ ಆಶ್ವಾಸನೆ ನೀಡಿದ್ದ ಕೇಂದ್ರ ಕಲ್ಲಿದ್ದಲು ಸಚಿವಾಲಯವು, ಈಗ ತನ್ನ ಕಲ್ಲಿದ್ದಲು ನೀತಿಯನ್ನೇ ಬದಲಿಸಿ ಖಾಸಗಿ ಕಂಪೆನಿಗಳಿಗೆ ಆದ್ಯತೆ ನೀಡಲು ಹೊರಟಿರುವ ಕ್ರಮ ಸರಿಯಲ್ಲ. <br /> <br /> ಇದರಿಂದ ರಾಜ್ಯ ಸರ್ಕಾರಗಳು ಖಾಸಗಿ ಕಂಪೆನಿಗಳ ಜೊತೆಗೆ ಬಿಡ್ನಲ್ಲಿ ಪಾಲ್ಗೊಳ್ಳಬೇಕಾದ್ದು ಅನಿವಾರ್ಯವಾಗಲಿದೆ. ಹೀಗಾಗಿ ಹೊಸ ಕಲ್ಲಿದ್ದಲು ನೀತಿಯನ್ನು ಕೈ ಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು~ ಎಂದರು.<br /> <br /> `ರಾಜ್ಯದ ಯಡ್ಲಾಪುರ ಹಾಗೂ ಬಳ್ಳಾರಿ ಮೂರನೇ ಘಟಕಕ್ಕೆ ಹೊಸ ಯಂತ್ರಗಳ ಖರೀದಿ ಈಗಾಗಲೇ ನಡೆದಿದ್ದು, ಅಗತ್ಯವಿರುವಷ್ಟು ಕಲ್ಲಿದ್ದಲು ಪೂರೈಕೆಯಾಗದೇ ಹೋದರೆ ರಾಜ್ಯದ ವಿದ್ಯುತ್ ಕೊರತೆ ಹೆಚ್ಚಾಗಲಿದೆ~ ಎಂದು ಅವರು ಹೇಳಿದರು.<br /> <br /> `ಉದ್ಯಮಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಮುಂದೆ ಬರಬೇಕು~ ಎಂದು ಅವರು ಕರೆ ನೀಡಿದರು.<br /> <br /> ಸಮಾರಂಭದಲ್ಲಿ ಲಲಿತಾ ರಾವ್ ಸಾಹಿಬ್ ಹಾಗೂ ರೇಖಾ ಜಿ. ಕಾಮತ್ ಅವರಿಗೆ 2012 ನೇ ಸಾಲಿನ `ಕಾಸಿಯಾ ಅತ್ಯುತ್ತಮ ಮಹಿಳಾ ಉದ್ಯಮಿ~ ಪ್ರಶಸ್ತಿಯನ್ನು ನೀಡಲಾಯಿತು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಪ್ರಕಾಶ್ ಎನ್. ರಾಯ್ಕರ್, ಮಹಿಳಾ ಉದ್ಯಮಿಗಳ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಲಲನ್ ಸನಾಡೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>