<p><strong>ಹುಬ್ಬಳ್ಳಿ: </strong>‘ಹಲವಾರು ವರ್ಷಗಳಿಂದ ಕಿಮ್ಸ್ದಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಎಕ್ಸರೇ ತಂತ್ರಜ್ಞರ ಕಾಯಮಾತಿಗೆ ಯತ್ನಿಸಲಾಗುತ್ತದೆ. ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಕಿಮ್ಸ್ ನಿರ್ದೇಶಕ ಡಾ. ಬಿ.ಎಸ್. ಮದಕಟ್ಟಿ ಭರವಸೆ ನೀಡಿದರು.<br /> <br /> ಅಪಘಾತ ಚಿಕಿತ್ಸಾ ಕೇಂದ್ರಕ್ಕೆ 20 ಶುಶ್ರೂಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ನಡೆಯುವ ಸಂದರ್ಶನವನ್ನು ರದ್ದುಗೊಳಿಸಬೇಕು ಮತ್ತು ತಮ್ಮನ್ನು ಕಾಯಂ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಎಕ್ಸರೆ ತಂತ್ರಜ್ಞರು ಕಿಮ್ಸ್ ನಿರ್ದೇಶಕರ ಕೊಠಡಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದಾಗ ಡಾ. ಮದಕಟ್ಟಿಯವರು ಮಾತನಾಡಿದರು.<br /> <br /> ‘ಕೇಂದ್ರ ಸರ್ಕಾರದ ಯೋಜನೆಯನ್ವಯ ಅಪಘಾತ ಚಿಕಿತ್ಸಾ ಕೇಂದ್ರಕ್ಕೆ 20 ಶುಶ್ರೂಷಕರನ್ನು ನೇಮಿಸುವ ಸಂಬಂಧ ಶುಕ್ರವಾರ ಸಂದರ್ಶನವನ್ನು ನಿಗದಿಗೊಳಿಸಲಾಗಿದೆ. ಈ ನೇಮಕ ಕೇವಲ 11 ತಿಂಗಳು ಮಾತ್ರ. ನಂತರ ಅವರನ್ನು ಮರುನೇಮಕಗೊಳಿಸುವುದಿಲ್ಲ. ಈ ನೇಮಕಾತಿಗೂ ಗುತ್ತಿಗೆ ಆಧಾರದ ನೌಕರರಿಗೂ ಸಂಬಂಧ ಇರುವುದಿಲ್ಲ’ ಎಂದು ಅವರು ಹೇಳಿದರು. <br /> <br /> ‘ಹತ್ತು ವರ್ಷಗಳ ಹಿಂದೆ ವೃತ್ತಿ ತರಬೇತಿದಾರರಾಗಿ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಎಕ್ಸರೆ ತಂತ್ರಜ್ಞರನ್ನು ರೂ. 1500 ಸಂಬಳಕ್ಕೆ ನೇಮಿಸಿಕೊಳ್ಳಲಾಯಿತು. ನಂತರ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಯಿತು. <br /> <br /> ಈಗ ಅವರೆಲ್ಲ ಆರು ಸಾವಿರ ಸಂಬಳ ಪಡೆಯುತ್ತಿದ್ದಾರೆ. ಜೊತೆಗೆ ಅವರನ್ನೆಲ್ಲ ಕಾಯಂಗೊಳಿಸಬೇಕೆಂದು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತದೆ. ಅವರಿಗೆ ಅನ್ಯಾಯ ಮಾಡುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಎಸ್.ಎ. ಮಠದ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಹಲವಾರು ವರ್ಷಗಳಿಂದ ಕಿಮ್ಸ್ದಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಎಕ್ಸರೇ ತಂತ್ರಜ್ಞರ ಕಾಯಮಾತಿಗೆ ಯತ್ನಿಸಲಾಗುತ್ತದೆ. ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಕಿಮ್ಸ್ ನಿರ್ದೇಶಕ ಡಾ. ಬಿ.ಎಸ್. ಮದಕಟ್ಟಿ ಭರವಸೆ ನೀಡಿದರು.<br /> <br /> ಅಪಘಾತ ಚಿಕಿತ್ಸಾ ಕೇಂದ್ರಕ್ಕೆ 20 ಶುಶ್ರೂಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ನಡೆಯುವ ಸಂದರ್ಶನವನ್ನು ರದ್ದುಗೊಳಿಸಬೇಕು ಮತ್ತು ತಮ್ಮನ್ನು ಕಾಯಂ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಎಕ್ಸರೆ ತಂತ್ರಜ್ಞರು ಕಿಮ್ಸ್ ನಿರ್ದೇಶಕರ ಕೊಠಡಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದಾಗ ಡಾ. ಮದಕಟ್ಟಿಯವರು ಮಾತನಾಡಿದರು.<br /> <br /> ‘ಕೇಂದ್ರ ಸರ್ಕಾರದ ಯೋಜನೆಯನ್ವಯ ಅಪಘಾತ ಚಿಕಿತ್ಸಾ ಕೇಂದ್ರಕ್ಕೆ 20 ಶುಶ್ರೂಷಕರನ್ನು ನೇಮಿಸುವ ಸಂಬಂಧ ಶುಕ್ರವಾರ ಸಂದರ್ಶನವನ್ನು ನಿಗದಿಗೊಳಿಸಲಾಗಿದೆ. ಈ ನೇಮಕ ಕೇವಲ 11 ತಿಂಗಳು ಮಾತ್ರ. ನಂತರ ಅವರನ್ನು ಮರುನೇಮಕಗೊಳಿಸುವುದಿಲ್ಲ. ಈ ನೇಮಕಾತಿಗೂ ಗುತ್ತಿಗೆ ಆಧಾರದ ನೌಕರರಿಗೂ ಸಂಬಂಧ ಇರುವುದಿಲ್ಲ’ ಎಂದು ಅವರು ಹೇಳಿದರು. <br /> <br /> ‘ಹತ್ತು ವರ್ಷಗಳ ಹಿಂದೆ ವೃತ್ತಿ ತರಬೇತಿದಾರರಾಗಿ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಎಕ್ಸರೆ ತಂತ್ರಜ್ಞರನ್ನು ರೂ. 1500 ಸಂಬಳಕ್ಕೆ ನೇಮಿಸಿಕೊಳ್ಳಲಾಯಿತು. ನಂತರ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಯಿತು. <br /> <br /> ಈಗ ಅವರೆಲ್ಲ ಆರು ಸಾವಿರ ಸಂಬಳ ಪಡೆಯುತ್ತಿದ್ದಾರೆ. ಜೊತೆಗೆ ಅವರನ್ನೆಲ್ಲ ಕಾಯಂಗೊಳಿಸಬೇಕೆಂದು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತದೆ. ಅವರಿಗೆ ಅನ್ಯಾಯ ಮಾಡುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಎಸ್.ಎ. ಮಠದ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>