<p>ಹುಬ್ಬಳ್ಳಿ: ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಏಕಸದಸ್ಯ ತನಿಖಾ ಆಯೋಗದ ಅಧಿಕಾರಿ ಶೀಘ್ರ ಸಂಸ್ಥೆಗೆ ಆಗಮಿಸಲಿದ್ದಾರೆ.<br /> <br /> ಆಯೋಗದ ಅಧಿಕಾರಿಯಾಗಿ ಬೆಂಗಳೂರಿನ ನಿವೃತ್ತ ನ್ಯಾಯಾಧೀಶರಾದ ನಾರಾಯಣ ಅವರು ನೇಮಕವಾಗುವ ಸಾಧ್ಯತೆಗಳಿದ್ದು ಒಂದೆರಡು ದಿನಗಳಲ್ಲಿ ಅವರು ಕಿಮ್ಸ್ಗೆ ಆಗಮಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.<br /> <br /> ಏ. 11ರಂದು ಕಿಮ್ಸ್ಗೆ ದಿಢೀರ್ ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್, ದಿನವಿಡೀ ಸಂಸ್ಥೆಯಲ್ಲಿದ್ದು ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಮಾಹಿತಿ ಹಾಗೂ ದಾಖಲೆಗಳನ್ನು ಪಡೆದುಕೊಂಡ ಅವರು ಅವ್ಯವಹಾರ ತನಿಖೆಗೆ ಏಕ ಸದಸ್ಯ ತನಿಖಾ ಆಯೋಗವನ್ನು ರಚಿಸುವುದಾಗಿ ಘೋಷಿಸಿದ್ದರು.<br /> <br /> ಎರಡು ದಿನಗಳ ಹಿಂದೆ ಶಿವಮೊಗ್ಗದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್)ಗೆ ಭೇಟಿ ನೀಡಿದ ಅವರು ಅಲ್ಲಿಗೂ ತನಿಖಾ ಆಯೋಗವನ್ನು ಕಳುಹಿಸುವುದಾಗಿ ತಿಳಿಸಿದ್ದರು. ನಾರಾಯಣ ಅವರೇ ‘ಸಿಮ್ಸ್’ಗೂ ತನಿಖಾಧಿಕಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.<br /> <br /> ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಸಚಿವ ರಾಮದಾಸ್, ‘ಆಯೋಗದ ತನಿಖಾಧಿಕಾರಿಯ ಹೆಸರನ್ನು ಸೋಮವಾರ ಅಂತಿಮಗೊಳಿಸಲಾಗುವುದು. ನಂತರ ಒಂದೆರಡು ದಿನಗಳಲ್ಲಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ’ ಎಂದು ತಿಳಿಸಿದರು.<br /> <br /> ತನಿಖಾಧಿಕಾರಿ ಹುಬ್ಬಳ್ಳಿಯಲ್ಲೇ ಉಳಿದುಕೊಂಡು ತನಿಖೆ ನಡೆಸಲಿದ್ದಾರೆ. ತನಿಖೆಗೆ ಬೇಕಾದ ಪೂರಕ ಮಾಹಿತಿಗಳನ್ನು ಅವರಿಗೆ ಒದಗಿಸಲಾಗುವುದು. 15 ದಿನಗಳ ಒಳಗೆ ವರದಿ ನೀಡಬೇಕೆಂದು ಅವರನ್ನು ಕೋರಲಾಗುವುದು ಎಂದು ರಾಮದಾಸ್ ತಿಳಿಸಿದರು.<br /> <br /> ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ಕಿಮ್ಸ್ಗೆ ದಿಢೀರ್ ಭೇಟಿ ನೀಡಿದ ಸಚಿವರು ಒಟ್ಟು ಆರು ಮಂದಿ ವೈದ್ಯೇತರ ಸಿಬ್ಬಂದಿಯನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದರು.<br /> <br /> ಜನನ ಪ್ರಮಾಣ ಪತ್ರ ನೀಡಲು, ಪ್ರಸೂತಿ ಆದ ಮೇಲೆ ಮಗುವನ್ನು ತೋರಿಸಲು ಹಾಗೂ ಮಗುವನ್ನು ಮನೆಗೆ ತೆಗೆದುಕೊಂಡು ಹೋಗುವ ಮುನ್ನ ವಿಳಂಬ ಮಾಡುವ ಅಥವಾ ಲಂಚ ಪಡೆಯುವ ಆರೋಪ ಹೆಚ್ಚಾಗಿ ಕೇಳಿ ಬಂದಿತ್ತು.<br /> <br /> ಹಾಜರಾತಿಯ ವಿಷಯದಲ್ಲೂ ಸಾಕಷ್ಟು ಗೊಂದಲಗಳು ಕಂಡು ಬಂದಿದ್ದವು. ಇಂದಿನ ಸಹಿಯನ್ನು ನಿನ್ನೆಯೇ ಮಾಡುವುದು, ಅನೇಕ ದಿನಗಳ ಸಹಿಯನ್ನು ಒಂದೇ ದಿನ ಮಾಡುವುದು, ಕೆಲಸಕ್ಕೆ ಹಾಜರಾಗದಿದ್ದರೂ ಸಹಿ ಮಾಡುವುದು ಇತ್ಯಾದಿ ‘ಅಕ್ರಮ’ಗಳನ್ನು ಸಚಿವರು ಪತ್ತೆ ಹಚ್ಚಿದ್ದರು.<br /> <br /> ಹೊರಗುತ್ತಿಗೆಗೆ ಸಂಬಂಧಿಸಿಯೂ ಸಮಸ್ಯೆಗಳನ್ನು ಪತ್ತೆ ಹಚ್ಚಿದ ಸಚಿವರು ಸಂಸ್ಥೆಗೆ ಖರೀದಿಸುವ ಔಷಧಿಯ ಗುಣಮಟ್ಟದ ಬಗ್ಗೆ ಹಾಗೂ ಔಷಧಿ ಖರೀದಿಗೆ ಸಂಬಂಧಿಸಿದ ಟೆಂಡರ್ ಬಗ್ಗೆಯೂ ದೂರುಗಳು ಬಂದಿವೆ ಎಂದು ತಿಳಿಸಿ ಇದಕ್ಕೆ ಸಂಬಂಧಿಸಿ ಕೂಡ ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು.<br /> <br /> <strong>ಸದ್ಯದಲ್ಲೇ ಹೊಸ ನಿರ್ದೇಶಕರು</strong><br /> ಕಿಮ್ಸ್ಗೆ ಹೊಸ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸೋಮವಾರ ಅಥವಾ ಮಂಗಳವಾರ ಹೊಸ ನಿರ್ದೇಶಕರ ಹೆಸರನ್ನು ಘೋಷಿಸಲಾಗುವುದು ಎಂದು ರಾಮದಾಸ್ ತಿಳಿಸಿದರು. <br /> <br /> ಏ. 28ರಂದು ನಿರ್ದೇಶಕರ ಹುದ್ದೆಗೆ ಸಂಬಂಧಿಸಿ ಸಂದರ್ಶನ ನಡೆಸಲಾಗಿತ್ತು. ಒಟ್ಟು ಹದಿನಾಲ್ಕು ಮಂದಿ ಸಂದರ್ಶನಕ್ಕೆ ಹಾಜರಾಗಿದ್ದರು. ಸೋಮವಾರ (ಮೇ 2) ಆಡಳಿತ ಮಂಡಳಿ ಸಭೆ ನಡೆಯಲಿದ್ದು ಅಲ್ಲಿ ಹೊಸ ನಿರ್ದೇಶಕರ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಏಕಸದಸ್ಯ ತನಿಖಾ ಆಯೋಗದ ಅಧಿಕಾರಿ ಶೀಘ್ರ ಸಂಸ್ಥೆಗೆ ಆಗಮಿಸಲಿದ್ದಾರೆ.<br /> <br /> ಆಯೋಗದ ಅಧಿಕಾರಿಯಾಗಿ ಬೆಂಗಳೂರಿನ ನಿವೃತ್ತ ನ್ಯಾಯಾಧೀಶರಾದ ನಾರಾಯಣ ಅವರು ನೇಮಕವಾಗುವ ಸಾಧ್ಯತೆಗಳಿದ್ದು ಒಂದೆರಡು ದಿನಗಳಲ್ಲಿ ಅವರು ಕಿಮ್ಸ್ಗೆ ಆಗಮಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.<br /> <br /> ಏ. 11ರಂದು ಕಿಮ್ಸ್ಗೆ ದಿಢೀರ್ ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್, ದಿನವಿಡೀ ಸಂಸ್ಥೆಯಲ್ಲಿದ್ದು ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಮಾಹಿತಿ ಹಾಗೂ ದಾಖಲೆಗಳನ್ನು ಪಡೆದುಕೊಂಡ ಅವರು ಅವ್ಯವಹಾರ ತನಿಖೆಗೆ ಏಕ ಸದಸ್ಯ ತನಿಖಾ ಆಯೋಗವನ್ನು ರಚಿಸುವುದಾಗಿ ಘೋಷಿಸಿದ್ದರು.<br /> <br /> ಎರಡು ದಿನಗಳ ಹಿಂದೆ ಶಿವಮೊಗ್ಗದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್)ಗೆ ಭೇಟಿ ನೀಡಿದ ಅವರು ಅಲ್ಲಿಗೂ ತನಿಖಾ ಆಯೋಗವನ್ನು ಕಳುಹಿಸುವುದಾಗಿ ತಿಳಿಸಿದ್ದರು. ನಾರಾಯಣ ಅವರೇ ‘ಸಿಮ್ಸ್’ಗೂ ತನಿಖಾಧಿಕಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.<br /> <br /> ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಸಚಿವ ರಾಮದಾಸ್, ‘ಆಯೋಗದ ತನಿಖಾಧಿಕಾರಿಯ ಹೆಸರನ್ನು ಸೋಮವಾರ ಅಂತಿಮಗೊಳಿಸಲಾಗುವುದು. ನಂತರ ಒಂದೆರಡು ದಿನಗಳಲ್ಲಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ’ ಎಂದು ತಿಳಿಸಿದರು.<br /> <br /> ತನಿಖಾಧಿಕಾರಿ ಹುಬ್ಬಳ್ಳಿಯಲ್ಲೇ ಉಳಿದುಕೊಂಡು ತನಿಖೆ ನಡೆಸಲಿದ್ದಾರೆ. ತನಿಖೆಗೆ ಬೇಕಾದ ಪೂರಕ ಮಾಹಿತಿಗಳನ್ನು ಅವರಿಗೆ ಒದಗಿಸಲಾಗುವುದು. 15 ದಿನಗಳ ಒಳಗೆ ವರದಿ ನೀಡಬೇಕೆಂದು ಅವರನ್ನು ಕೋರಲಾಗುವುದು ಎಂದು ರಾಮದಾಸ್ ತಿಳಿಸಿದರು.<br /> <br /> ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ಕಿಮ್ಸ್ಗೆ ದಿಢೀರ್ ಭೇಟಿ ನೀಡಿದ ಸಚಿವರು ಒಟ್ಟು ಆರು ಮಂದಿ ವೈದ್ಯೇತರ ಸಿಬ್ಬಂದಿಯನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದರು.<br /> <br /> ಜನನ ಪ್ರಮಾಣ ಪತ್ರ ನೀಡಲು, ಪ್ರಸೂತಿ ಆದ ಮೇಲೆ ಮಗುವನ್ನು ತೋರಿಸಲು ಹಾಗೂ ಮಗುವನ್ನು ಮನೆಗೆ ತೆಗೆದುಕೊಂಡು ಹೋಗುವ ಮುನ್ನ ವಿಳಂಬ ಮಾಡುವ ಅಥವಾ ಲಂಚ ಪಡೆಯುವ ಆರೋಪ ಹೆಚ್ಚಾಗಿ ಕೇಳಿ ಬಂದಿತ್ತು.<br /> <br /> ಹಾಜರಾತಿಯ ವಿಷಯದಲ್ಲೂ ಸಾಕಷ್ಟು ಗೊಂದಲಗಳು ಕಂಡು ಬಂದಿದ್ದವು. ಇಂದಿನ ಸಹಿಯನ್ನು ನಿನ್ನೆಯೇ ಮಾಡುವುದು, ಅನೇಕ ದಿನಗಳ ಸಹಿಯನ್ನು ಒಂದೇ ದಿನ ಮಾಡುವುದು, ಕೆಲಸಕ್ಕೆ ಹಾಜರಾಗದಿದ್ದರೂ ಸಹಿ ಮಾಡುವುದು ಇತ್ಯಾದಿ ‘ಅಕ್ರಮ’ಗಳನ್ನು ಸಚಿವರು ಪತ್ತೆ ಹಚ್ಚಿದ್ದರು.<br /> <br /> ಹೊರಗುತ್ತಿಗೆಗೆ ಸಂಬಂಧಿಸಿಯೂ ಸಮಸ್ಯೆಗಳನ್ನು ಪತ್ತೆ ಹಚ್ಚಿದ ಸಚಿವರು ಸಂಸ್ಥೆಗೆ ಖರೀದಿಸುವ ಔಷಧಿಯ ಗುಣಮಟ್ಟದ ಬಗ್ಗೆ ಹಾಗೂ ಔಷಧಿ ಖರೀದಿಗೆ ಸಂಬಂಧಿಸಿದ ಟೆಂಡರ್ ಬಗ್ಗೆಯೂ ದೂರುಗಳು ಬಂದಿವೆ ಎಂದು ತಿಳಿಸಿ ಇದಕ್ಕೆ ಸಂಬಂಧಿಸಿ ಕೂಡ ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು.<br /> <br /> <strong>ಸದ್ಯದಲ್ಲೇ ಹೊಸ ನಿರ್ದೇಶಕರು</strong><br /> ಕಿಮ್ಸ್ಗೆ ಹೊಸ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸೋಮವಾರ ಅಥವಾ ಮಂಗಳವಾರ ಹೊಸ ನಿರ್ದೇಶಕರ ಹೆಸರನ್ನು ಘೋಷಿಸಲಾಗುವುದು ಎಂದು ರಾಮದಾಸ್ ತಿಳಿಸಿದರು. <br /> <br /> ಏ. 28ರಂದು ನಿರ್ದೇಶಕರ ಹುದ್ದೆಗೆ ಸಂಬಂಧಿಸಿ ಸಂದರ್ಶನ ನಡೆಸಲಾಗಿತ್ತು. ಒಟ್ಟು ಹದಿನಾಲ್ಕು ಮಂದಿ ಸಂದರ್ಶನಕ್ಕೆ ಹಾಜರಾಗಿದ್ದರು. ಸೋಮವಾರ (ಮೇ 2) ಆಡಳಿತ ಮಂಡಳಿ ಸಭೆ ನಡೆಯಲಿದ್ದು ಅಲ್ಲಿ ಹೊಸ ನಿರ್ದೇಶಕರ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>