<p>ಚಿತ್ರದುರ್ಗ: ಕಾಮಗಾರಿಯೊಂದರ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಪಂಚಾಯತ್ರಾಜ್ ಎಂಜಿನಿಯರ್ ವಿಭಾಗದ ಕಿರಿಯ ಎಂಜಿನಿಯರ್ ಆರ್. ಜಯಪ್ಪ ಅವರನ್ನು ಅಮಾನತು ಮಾಡಲಾಗಿದೆ.<br /> <br /> ಮೊಳಕಾಲ್ಮುರು ತಾಲ್ಲೂಕು ಚಿಕ್ಕೇರಹಳ್ಳಿ ಗ್ರಾಮದಲ್ಲಿ ಅಂತರ್ಜಲ ಅಭಿವೃದ್ಧಿ ಕಾಮಗಾರಿಯನ್ನು ರೂ. 5 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿತ್ತು. ಆದರೆ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. 2010ರ ಡಿಸೆಂಬರ್ 23 ಕೊನೆಯ ದಿನವಾಗಿದ್ದರೂ, ಡಿ. 27ರತನಕ ಮುಂದೂಡಿ ಅಂತರ್ಜಾಲದಲ್ಲಿ ತಿದ್ದುಪಡಿ ಮಾಡಲಾಗಿತ್ತು.<br /> <br /> ಈ ಅಕ್ರಮವನ್ನು ದಿನಗೂಲಿ ನೌಕರ ಶಕೀಲ್ ಅಹಮ್ಮದ್ ಹಾಗೂ ಕಿರಿಯ ಎಂಜಿನಿಯರ್ ಆರ್. ಜಯಪ್ಪ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಚಿಕ್ಕೇರಹಳ್ಳಿಯ ಗೋವಿಂದಪ್ಪ ಡಿಸೆಂಬರ್ 29ರಂದು ದೂರು ದಾಖಲಿಸಿದ್ದರು.<br /> ಈ ಪ್ರಕರಣದ ಹಿನ್ನೆಲೆಯಲ್ಲಿ ಶಕೀಲ್ ಅಹಮದ್ ಅವರನ್ನು ಸರ್ಕಾರಿ ಸೇವೆಯಿಂದ ಕೈಬಿಡಲಾಗಿದೆ. ಜತೆಗೆ, ಜವಾಬ್ದಾರಿಯುತ ವಿಭಾಗದ ಅಧಿಕಾರಿಯಾಗಿದ್ದ ಆರ್. ಜಯಪ್ಪ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ಮೇರೆಗೆ ಅಮಾನತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಒ ರಂಗೇಗೌಡ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಕಾಮಗಾರಿಯೊಂದರ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಪಂಚಾಯತ್ರಾಜ್ ಎಂಜಿನಿಯರ್ ವಿಭಾಗದ ಕಿರಿಯ ಎಂಜಿನಿಯರ್ ಆರ್. ಜಯಪ್ಪ ಅವರನ್ನು ಅಮಾನತು ಮಾಡಲಾಗಿದೆ.<br /> <br /> ಮೊಳಕಾಲ್ಮುರು ತಾಲ್ಲೂಕು ಚಿಕ್ಕೇರಹಳ್ಳಿ ಗ್ರಾಮದಲ್ಲಿ ಅಂತರ್ಜಲ ಅಭಿವೃದ್ಧಿ ಕಾಮಗಾರಿಯನ್ನು ರೂ. 5 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿತ್ತು. ಆದರೆ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. 2010ರ ಡಿಸೆಂಬರ್ 23 ಕೊನೆಯ ದಿನವಾಗಿದ್ದರೂ, ಡಿ. 27ರತನಕ ಮುಂದೂಡಿ ಅಂತರ್ಜಾಲದಲ್ಲಿ ತಿದ್ದುಪಡಿ ಮಾಡಲಾಗಿತ್ತು.<br /> <br /> ಈ ಅಕ್ರಮವನ್ನು ದಿನಗೂಲಿ ನೌಕರ ಶಕೀಲ್ ಅಹಮ್ಮದ್ ಹಾಗೂ ಕಿರಿಯ ಎಂಜಿನಿಯರ್ ಆರ್. ಜಯಪ್ಪ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಚಿಕ್ಕೇರಹಳ್ಳಿಯ ಗೋವಿಂದಪ್ಪ ಡಿಸೆಂಬರ್ 29ರಂದು ದೂರು ದಾಖಲಿಸಿದ್ದರು.<br /> ಈ ಪ್ರಕರಣದ ಹಿನ್ನೆಲೆಯಲ್ಲಿ ಶಕೀಲ್ ಅಹಮದ್ ಅವರನ್ನು ಸರ್ಕಾರಿ ಸೇವೆಯಿಂದ ಕೈಬಿಡಲಾಗಿದೆ. ಜತೆಗೆ, ಜವಾಬ್ದಾರಿಯುತ ವಿಭಾಗದ ಅಧಿಕಾರಿಯಾಗಿದ್ದ ಆರ್. ಜಯಪ್ಪ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ಮೇರೆಗೆ ಅಮಾನತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಒ ರಂಗೇಗೌಡ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>