<p><strong>ಕುಂದಾಪುರ: </strong>ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮಂಗಳವಾರ ಬೆಳಿಗ್ಗೆಯಿಂದ ಬಿರುಸುಗೊಂಡಿತ್ತು.ಬೆಳಿಗ್ಗೆಯಿಂದ ಎಡೆಬಿಡದೆ ಸುರಿದ ಮಳೆಯಿಂದ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.<br /> <br /> ಗಾಳಿ- ಮಳೆಗೆ ಮರದ ಗೆಲ್ಲು ಧರಶಾಹಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿಯಿಂದಾಗಿ ಕೋಟೇಶ್ವರ, ಕುಂದಾಪುರ ಹಾಗೂ ತೆಕ್ಕಟ್ಟೆ ಪರಿಸರದಲ್ಲಿ ಕೃತಕ ನೆರೆ ಉಂಟಾಗಿದೆ. ನೀರಿನ ರಭಸದಲ್ಲಿ ಸಾಗಿ ಬರುವ ಕಸ-ಕಡ್ಡಿ, ತ್ಯಾಜ್ಯ ಅಲ್ಲಲ್ಲಿ ನಿಂತು ಸೊಳ್ಳೆ ಉತ್ಪತ್ತಿಯಾಗಿ ರೋಗ ಭೀತಿ ಉಂಟಾಗಿದೆ. <br /> <br /> ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕ-ಪಕ್ಕದಲ್ಲಿರುವ ಚರಂಡಿ ಇಲ್ಲದೆ ಇರುವುದರಿಂದ ಮಳೆ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದಾಗಿ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಕೆಸರು ರಾಚುವ ಭೀತಿಯಲ್ಲೇ ಸಾಗಬೇಕಾದ ಪರಿಸ್ಥಿತಿ ಮುಂದಾಗಿದೆ. <br /> <br /> ಮಳೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕೋಟೇಶ್ವರ, ಸೇನಾಪುರ, ಹೆಮ್ಮಾಡಿ, ಕುಂದಾಪುರ ಮುಂತಾದ ಕಡೆಗಳಲ್ಲಿ ವಾಹನಗಳು ರಸ್ತೆ ಬದಿ ಹೂತುಹೋಗಿವೆ. ರಾಷ್ಟ್ರೀಯ ಹೆದ್ದಾರಿ ವಿಸ್ಥರಣೆ ಕಾಮಗಾರಿಗಾಗಿ ಕಡಿದಿರುವ ಮರಗಳು ಚರಂಡಿಗೆ ಬಿದ್ದು, ನೀರಿನ ಸರಾಗ ಹರಿವಿಗೆ ತಡೆ ಒಡ್ಡುತ್ತಿವೆ. <br /> <br /> ತಾಲ್ಲೂಕಿನ ಕುಂಭಾಸಿಯ ಮಂಜುನಾಥ ಮೊಗವೀರ ಎಂಬವರ ಪುತ್ರ ನಾಗರಾಜ್ ಮನೆಯ ಮೇಲೆ ಮರ ಬಿದ್ದು ಸಾವಿರಾರು ರೂ.ನಷ್ಟವಾಗಿರುವ ಕುರಿತು ತಹಸೀಲ್ದಾರ್ ಕಚೇರಿಗೆ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ: </strong>ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮಂಗಳವಾರ ಬೆಳಿಗ್ಗೆಯಿಂದ ಬಿರುಸುಗೊಂಡಿತ್ತು.ಬೆಳಿಗ್ಗೆಯಿಂದ ಎಡೆಬಿಡದೆ ಸುರಿದ ಮಳೆಯಿಂದ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.<br /> <br /> ಗಾಳಿ- ಮಳೆಗೆ ಮರದ ಗೆಲ್ಲು ಧರಶಾಹಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿಯಿಂದಾಗಿ ಕೋಟೇಶ್ವರ, ಕುಂದಾಪುರ ಹಾಗೂ ತೆಕ್ಕಟ್ಟೆ ಪರಿಸರದಲ್ಲಿ ಕೃತಕ ನೆರೆ ಉಂಟಾಗಿದೆ. ನೀರಿನ ರಭಸದಲ್ಲಿ ಸಾಗಿ ಬರುವ ಕಸ-ಕಡ್ಡಿ, ತ್ಯಾಜ್ಯ ಅಲ್ಲಲ್ಲಿ ನಿಂತು ಸೊಳ್ಳೆ ಉತ್ಪತ್ತಿಯಾಗಿ ರೋಗ ಭೀತಿ ಉಂಟಾಗಿದೆ. <br /> <br /> ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕ-ಪಕ್ಕದಲ್ಲಿರುವ ಚರಂಡಿ ಇಲ್ಲದೆ ಇರುವುದರಿಂದ ಮಳೆ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದಾಗಿ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಕೆಸರು ರಾಚುವ ಭೀತಿಯಲ್ಲೇ ಸಾಗಬೇಕಾದ ಪರಿಸ್ಥಿತಿ ಮುಂದಾಗಿದೆ. <br /> <br /> ಮಳೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕೋಟೇಶ್ವರ, ಸೇನಾಪುರ, ಹೆಮ್ಮಾಡಿ, ಕುಂದಾಪುರ ಮುಂತಾದ ಕಡೆಗಳಲ್ಲಿ ವಾಹನಗಳು ರಸ್ತೆ ಬದಿ ಹೂತುಹೋಗಿವೆ. ರಾಷ್ಟ್ರೀಯ ಹೆದ್ದಾರಿ ವಿಸ್ಥರಣೆ ಕಾಮಗಾರಿಗಾಗಿ ಕಡಿದಿರುವ ಮರಗಳು ಚರಂಡಿಗೆ ಬಿದ್ದು, ನೀರಿನ ಸರಾಗ ಹರಿವಿಗೆ ತಡೆ ಒಡ್ಡುತ್ತಿವೆ. <br /> <br /> ತಾಲ್ಲೂಕಿನ ಕುಂಭಾಸಿಯ ಮಂಜುನಾಥ ಮೊಗವೀರ ಎಂಬವರ ಪುತ್ರ ನಾಗರಾಜ್ ಮನೆಯ ಮೇಲೆ ಮರ ಬಿದ್ದು ಸಾವಿರಾರು ರೂ.ನಷ್ಟವಾಗಿರುವ ಕುರಿತು ತಹಸೀಲ್ದಾರ್ ಕಚೇರಿಗೆ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>