<p>ದೇವನಹಳ್ಳಿ: ಪುರಸಭೆ ವ್ಯಾಪ್ತಿಯ 23ವಾರ್ಡುಗಳ ನಾಗರಿಕರ ಕುಂದು ಕೊರತೆ ತಿಳಿಯಲು ಪ್ರತಿ ವಾರ್ಡ್ಗಳಿಗೆ ಭೇಟಿ ನೀಡಲಾಗುವುದು ಎಂದು ಶಾಸಕ ಕೆ.ವೆಂಕಟಸ್ವಾಮಿ ತಿಳಿಸಿದರು.<br /> <br /> ಪಟ್ಟಣದ 6ನೇ ವಾರ್ಡಿನ ಗಾಣಿಗರ ಬೀದಿಯಲ್ಲಿ ಗುರುವಾರ ನಾಗರಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಪ್ರದೇಶಕ್ಕಿಂತ ಪಟ್ಟಣದಲ್ಲಿ ಹೆಚ್ಚಾಗಿದೆ.<br /> <br /> ಇಲ್ಲಿ ಪ್ರತಿ 10 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಕೊಳಚೆ ಪ್ರದೇಶದಲ್ಲಿ ಸೂಕ್ತ ಚರಂಡಿ ನಿರ್ವಹಣೆ ಆಗಬೇಕಾಗಿದೆ. ಅನೇಕ ಬೀದಿಗಳಲ್ಲಿರುವ ಹಳೆಯ ವಿದ್ಯುತ್ ಕಂಬಗಳನ್ನು ತೆರೆವುಗೊಳಿಸಿ ಹೊಸ ಕಂಬ ಅಳವಡಿಸಬೇಕಿದೆ ಎಂದರು. <br /> <br /> ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಪುರಸಭೆಯ ಸಿ.ಆರ್.ಎಫ್ ಯೋಜನೆಯಲ್ಲಿ 5ಕೋಟಿ ರೂಪಾಯಿ ಅನುದಾನವಿದ್ದು, ಅಗತ್ಯವಿರುವ ಪ್ರತಿ ವಾರ್ಡಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು. <br /> <br /> 6 ದಿನಗಳ ಕಾಲ ಎಲ್ಲ ವಾರ್ಡುಗಳಿಗೆ ತೆರಳಿ ಅಲ್ಲಿರುವ ಸಮಸ್ಯೆಗಳನ್ನು ತಿಳಿದು ನಿವಾರಣೆ ಮಾಡಬೇಕು. ಅಲ್ಲದೆ ಹೆಚ್ಚುವರಿಯಾಗಿ ಶಾಸಕರ ಅನುದಾನದಲ್ಲಿ 4ಕೊಳವೆ ಬಾವಿ ಕೊರೆಸಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.<br /> <br /> ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಪುರಸಭೆ ಸದಸ್ಯ ಹಂಸರಾಜಣ್ಣ, ಜಿ.ಎನ್.ವೇಣುಗೋಪಾಲ್, ವಿಎಸ್ಎಸ್ಎನ್ ಬ್ಯಾಂಕ್ ಅಧ್ಯಕ್ಷ ಎನ್.ರಘು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್.ಸಿ.ಚಂದ್ರಪ್ಪ, ಶಂಕರ್, ಸೊಸೈಟಿ ನಂಜಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಪುರಸಭೆ ವ್ಯಾಪ್ತಿಯ 23ವಾರ್ಡುಗಳ ನಾಗರಿಕರ ಕುಂದು ಕೊರತೆ ತಿಳಿಯಲು ಪ್ರತಿ ವಾರ್ಡ್ಗಳಿಗೆ ಭೇಟಿ ನೀಡಲಾಗುವುದು ಎಂದು ಶಾಸಕ ಕೆ.ವೆಂಕಟಸ್ವಾಮಿ ತಿಳಿಸಿದರು.<br /> <br /> ಪಟ್ಟಣದ 6ನೇ ವಾರ್ಡಿನ ಗಾಣಿಗರ ಬೀದಿಯಲ್ಲಿ ಗುರುವಾರ ನಾಗರಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಪ್ರದೇಶಕ್ಕಿಂತ ಪಟ್ಟಣದಲ್ಲಿ ಹೆಚ್ಚಾಗಿದೆ.<br /> <br /> ಇಲ್ಲಿ ಪ್ರತಿ 10 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಕೊಳಚೆ ಪ್ರದೇಶದಲ್ಲಿ ಸೂಕ್ತ ಚರಂಡಿ ನಿರ್ವಹಣೆ ಆಗಬೇಕಾಗಿದೆ. ಅನೇಕ ಬೀದಿಗಳಲ್ಲಿರುವ ಹಳೆಯ ವಿದ್ಯುತ್ ಕಂಬಗಳನ್ನು ತೆರೆವುಗೊಳಿಸಿ ಹೊಸ ಕಂಬ ಅಳವಡಿಸಬೇಕಿದೆ ಎಂದರು. <br /> <br /> ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಪುರಸಭೆಯ ಸಿ.ಆರ್.ಎಫ್ ಯೋಜನೆಯಲ್ಲಿ 5ಕೋಟಿ ರೂಪಾಯಿ ಅನುದಾನವಿದ್ದು, ಅಗತ್ಯವಿರುವ ಪ್ರತಿ ವಾರ್ಡಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು. <br /> <br /> 6 ದಿನಗಳ ಕಾಲ ಎಲ್ಲ ವಾರ್ಡುಗಳಿಗೆ ತೆರಳಿ ಅಲ್ಲಿರುವ ಸಮಸ್ಯೆಗಳನ್ನು ತಿಳಿದು ನಿವಾರಣೆ ಮಾಡಬೇಕು. ಅಲ್ಲದೆ ಹೆಚ್ಚುವರಿಯಾಗಿ ಶಾಸಕರ ಅನುದಾನದಲ್ಲಿ 4ಕೊಳವೆ ಬಾವಿ ಕೊರೆಸಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.<br /> <br /> ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಪುರಸಭೆ ಸದಸ್ಯ ಹಂಸರಾಜಣ್ಣ, ಜಿ.ಎನ್.ವೇಣುಗೋಪಾಲ್, ವಿಎಸ್ಎಸ್ಎನ್ ಬ್ಯಾಂಕ್ ಅಧ್ಯಕ್ಷ ಎನ್.ರಘು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್.ಸಿ.ಚಂದ್ರಪ್ಪ, ಶಂಕರ್, ಸೊಸೈಟಿ ನಂಜಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>