<p><strong>ಭಟ್ಕಳ: </strong>ತಾಲ್ಲೂಕಿನಾದ್ಯಂತ ತೀವ್ರಗೊಂಡಿರುವ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತ ಅನುದಾನ ಕಲ್ಪಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಜೆ.ಡಿ.ನಾಯ್ಕ ಇಲ್ಲಿನ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮುಖ್ಯಮಂತ್ರಿಗಳು ಕುಡಿಯುವ ನೀರಿನ ಬವಣೆ ನೀಗಿಸಲು ಪ್ರತಿ ತಾಲ್ಲೂಕಿಗೆ 30 ಲಕ್ಷ ರೂಪಾಯಿ ಅನುದಾನ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನು ಹೇಳಿ ಹಲವು ದಿನಗಳು ಕಳೆದರೂ ಈವರೆಗೆ ಹಣ ಮಂಜೂರಾಗಿಲ್ಲ ಎಂದುಆರೋಪಿಸಿದರು.<br /> <br /> ಭಟ್ಕಳ ತಾಲ್ಲೂಕಿನ ಮಾವಿನಕುರ್ವೆ, ಬೆಳಕೆ, ಬಂದರ್, ಮುಂಡಳ್ಳಿ ಸೇರಿದಂತೆ ಹಲವು ಗ್ರಾಮೀಣ ಪ್ರದೇಶ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದೆ. ನೀರಿಗಾಗಿ ಜನರಲ್ಲಿ ಹಾಹಾಕಾರ ಉಂಟಾಗಿದೆ ಎಂದು ಅವರು ಹೇಳಿದರು.<br /> <br /> ಪ್ರತಿವರ್ಷ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ ಅವರು, ನೀರಿನ ಅಭಾವವಿರುವ ಪ್ರದೇಶಗಳಲ್ಲಿ ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಕೋರಿದರು. <br /> <br /> ಭಟ್ಕಳ ತಾಲ್ಲೂಕಿನಲ್ಲಿನ ನೀರಿನ ಸಮಸ್ಯೆ ಪರಿಹರಿಸಲು ಹೆಚ್ಚಿನ ಅನುದಾನ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.ಉಪವಿಭಾಗಾಧಿಕಾರಿ ಅನುಪಸ್ಥಿತಿಯಲ್ಲಿ ಕಛೇರಿಯ ವ್ಯವಸ್ಥಾಪಕ ಎಂ.ಎ.ಘನಿ ಮನವಿ ಸ್ವೀಕರಿಸಿದರು. <br /> <br /> ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಠ್ಠಲ ನಾಯ್ಕ, ಜಿ.ಪಂ.ಸದಸ್ಯೆ ಜಯಶ್ರೆ ಮೊಗೇರ್, ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ ನಾಯ್ಕ, ಜಿ.ಪಂ. ಮಾಜಿ ಉಪಾಧ್ಯಕ್ಷ ರಾಮ ಮೊಗೇರ್ಮತ್ತಿತರರು ಭಾಗವಹಿಸಿದ್ದರು.<br /> <br /> ಪ್ರಮುಖರಾದ ವೆಂಕ್ಟಯ್ಯ ಭೈರುಮನೆ, ಸಾದುಲ್ಲಾ ದಾಮ್ದಾ, ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಮಹಾಬಲೇಶ್ವರ ನಾಯ್ಕ, ಶ್ರೀಧರ ನಾಯ್ಕ, ತಾ.ಪಂ.ಸದಸ್ಯೆ ಉಷಾ ನಾಯ್ಕ, ಎಂ.ಪಿ. ಶೈಲೇಂದ್ರಕುಮಾರ್ನಾರಾಯಣ ನಾಯ್ಕ, ರಾಜೇಶ ನಾಯ್ಕ, ಮಾಜಿ ತಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿಗೊಂಡ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ: </strong>ತಾಲ್ಲೂಕಿನಾದ್ಯಂತ ತೀವ್ರಗೊಂಡಿರುವ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತ ಅನುದಾನ ಕಲ್ಪಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಜೆ.ಡಿ.ನಾಯ್ಕ ಇಲ್ಲಿನ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮುಖ್ಯಮಂತ್ರಿಗಳು ಕುಡಿಯುವ ನೀರಿನ ಬವಣೆ ನೀಗಿಸಲು ಪ್ರತಿ ತಾಲ್ಲೂಕಿಗೆ 30 ಲಕ್ಷ ರೂಪಾಯಿ ಅನುದಾನ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನು ಹೇಳಿ ಹಲವು ದಿನಗಳು ಕಳೆದರೂ ಈವರೆಗೆ ಹಣ ಮಂಜೂರಾಗಿಲ್ಲ ಎಂದುಆರೋಪಿಸಿದರು.<br /> <br /> ಭಟ್ಕಳ ತಾಲ್ಲೂಕಿನ ಮಾವಿನಕುರ್ವೆ, ಬೆಳಕೆ, ಬಂದರ್, ಮುಂಡಳ್ಳಿ ಸೇರಿದಂತೆ ಹಲವು ಗ್ರಾಮೀಣ ಪ್ರದೇಶ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದೆ. ನೀರಿಗಾಗಿ ಜನರಲ್ಲಿ ಹಾಹಾಕಾರ ಉಂಟಾಗಿದೆ ಎಂದು ಅವರು ಹೇಳಿದರು.<br /> <br /> ಪ್ರತಿವರ್ಷ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ ಅವರು, ನೀರಿನ ಅಭಾವವಿರುವ ಪ್ರದೇಶಗಳಲ್ಲಿ ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಕೋರಿದರು. <br /> <br /> ಭಟ್ಕಳ ತಾಲ್ಲೂಕಿನಲ್ಲಿನ ನೀರಿನ ಸಮಸ್ಯೆ ಪರಿಹರಿಸಲು ಹೆಚ್ಚಿನ ಅನುದಾನ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.ಉಪವಿಭಾಗಾಧಿಕಾರಿ ಅನುಪಸ್ಥಿತಿಯಲ್ಲಿ ಕಛೇರಿಯ ವ್ಯವಸ್ಥಾಪಕ ಎಂ.ಎ.ಘನಿ ಮನವಿ ಸ್ವೀಕರಿಸಿದರು. <br /> <br /> ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಠ್ಠಲ ನಾಯ್ಕ, ಜಿ.ಪಂ.ಸದಸ್ಯೆ ಜಯಶ್ರೆ ಮೊಗೇರ್, ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ ನಾಯ್ಕ, ಜಿ.ಪಂ. ಮಾಜಿ ಉಪಾಧ್ಯಕ್ಷ ರಾಮ ಮೊಗೇರ್ಮತ್ತಿತರರು ಭಾಗವಹಿಸಿದ್ದರು.<br /> <br /> ಪ್ರಮುಖರಾದ ವೆಂಕ್ಟಯ್ಯ ಭೈರುಮನೆ, ಸಾದುಲ್ಲಾ ದಾಮ್ದಾ, ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಮಹಾಬಲೇಶ್ವರ ನಾಯ್ಕ, ಶ್ರೀಧರ ನಾಯ್ಕ, ತಾ.ಪಂ.ಸದಸ್ಯೆ ಉಷಾ ನಾಯ್ಕ, ಎಂ.ಪಿ. ಶೈಲೇಂದ್ರಕುಮಾರ್ನಾರಾಯಣ ನಾಯ್ಕ, ರಾಜೇಶ ನಾಯ್ಕ, ಮಾಜಿ ತಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿಗೊಂಡ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>