<p><strong>ಬಳ್ಳಾರಿ:</strong> ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಜೆಡಿಎಸ್ ಹಾಗೂ ಎಸ್ಯುಸಿಐ ಪಕ್ಷಗಳ ವತಿಯಿಂದ ನಗರದ ವಿವಿಧೆಡೆ ಶುಕ್ರವಾರ ಪ್ರತ್ಯೇಕ ಪ್ರತಿಭಟನೆಗಳು ನಡೆದವು.<br /> <br /> ಸ್ಥಳೀಯ ಮೇದಾರ ಓಣಿ, ಬಸವನಕುಂಟೆ, ಕೌಲ್ಬಝಾರ್ ಮೊದಲ ಗೇಟ್, ತಾಳೂರು ರಸ್ತೆ ಮತ್ತಿತರ ಕಡೆ ಖಾಲಿ ಕೊಡಗಳೊಂದಿಗೆ ಪ್ರತಿಭಟನೆಗಳು ನಡೆಸಲಾಯಿತು.<br /> <br /> ಜೆಡಿಎಸ್ನ ಜಿಲ್ಲಾ ಘಟಕದ ನೇತೃತ್ವದಲ್ಲಿ ಕೌಲ್ ಬಝಾರ್ನಲ್ಲಿ ಪ್ರತಿಭಟನೆಗೆ ಇಳಿದ ಸಾರ್ವಜನಿಕರು, ಕುಡಿಯುವ ನೀರು ನೀಡಲು ಸಾದ್ಯವಾಗದ ಪಾಲಿಕೆ ಆಡಳಿತ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.<br /> ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮೀನಳ್ಳಿ ತಾಯಣ್ಣ ಹಾಗೂ ಮುಂಡ್ರಿಗಿ ನಾಗರಾಜ್ ಮಾತನಾಡಿ, ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದ್ದು, 10-15 ದಿನ ಕಳೆದರೂ ಸಾರ್ವಜನಿಕರಿಗೆ ನೀರು ಪೂರೈಕೆಯಾಗುತ್ತಿಲ್ಲ. ಎಂದರು.<br /> <br /> ಪಕ್ಷದ ಮುಖಂಡರಾದ ಖುದ್ದೂಸ್, ರಸೂಲ್ಸಾಬ್, ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಳಮ್ಮ, ಜ್ಯೋತಿ ಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ಪಿ.ಭಾಸ್ಕರ ರೆಡ್ಡಿ, ವೈ.ದೂರ್ವಾಸ್, ಪಿ.ಜಗದೀಶ್ವರ ರೆಡ್ಡಿ, ಶ್ರೀಕಾಂತ ರೆಡ್ಡಿ, ಕೃಷ್ಣ, ವೆಂಕಟೇಶ್, ಸಂಜೀವ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. <br /> <strong><br /> ಎಸ್ಯುಸಿಐನಿಂದ:</strong> ಎಸ್ಯುಸಿಐ ನೇತೃತ್ವದಲ್ಲಿ ಶುಕ್ರವಾರ ನಗರದ ಕೌಲ್ಬಝಾರ್ನ ರೈಲ್ವೆ ಗೇಟ್ ಬಳಿಯರಸ್ತೆಮೇಲೆ ಖಾಲಿ ಕೊಡ ಇರಿಸಿ ಪ್ರತಿಭಟನೆಗಿಳಿದ ಸಾರ್ವಜನಿಕರು, ನೀರು ಪೂರೈಸುವಂತೆ ಆಗ್ರಹಿಸಿದರು.<br /> <br /> ಮೂಲ ಸೌಲಭ್ಯ ಒದಗಿಸುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದ್ದು, ಬೇಸಿಗೆ ವೇಳೆ ನೀರಿನ ಕೊರತೆ ನೀಗಿಸಲು ಪಾಲಿಕೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಸಾರ್ವಜನಿಕರು ತೊಂದರೆ ಎದುರಿಸುವಂತಾಗಿದೆ ಎಂದು ತಿಳಿಸಲಾಯಿತು.<br /> <br /> ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಕೆ.ಸೋಮಶೇಖರ್, ಮಂಜುಳಾ, ಶಾಂತಾ, ಎ.ದೇವದಾಸ್, ನಾಗಲಕ್ಷ್ಮಿ ಮತ್ತು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಜೆಡಿಎಸ್ ಹಾಗೂ ಎಸ್ಯುಸಿಐ ಪಕ್ಷಗಳ ವತಿಯಿಂದ ನಗರದ ವಿವಿಧೆಡೆ ಶುಕ್ರವಾರ ಪ್ರತ್ಯೇಕ ಪ್ರತಿಭಟನೆಗಳು ನಡೆದವು.<br /> <br /> ಸ್ಥಳೀಯ ಮೇದಾರ ಓಣಿ, ಬಸವನಕುಂಟೆ, ಕೌಲ್ಬಝಾರ್ ಮೊದಲ ಗೇಟ್, ತಾಳೂರು ರಸ್ತೆ ಮತ್ತಿತರ ಕಡೆ ಖಾಲಿ ಕೊಡಗಳೊಂದಿಗೆ ಪ್ರತಿಭಟನೆಗಳು ನಡೆಸಲಾಯಿತು.<br /> <br /> ಜೆಡಿಎಸ್ನ ಜಿಲ್ಲಾ ಘಟಕದ ನೇತೃತ್ವದಲ್ಲಿ ಕೌಲ್ ಬಝಾರ್ನಲ್ಲಿ ಪ್ರತಿಭಟನೆಗೆ ಇಳಿದ ಸಾರ್ವಜನಿಕರು, ಕುಡಿಯುವ ನೀರು ನೀಡಲು ಸಾದ್ಯವಾಗದ ಪಾಲಿಕೆ ಆಡಳಿತ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.<br /> ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮೀನಳ್ಳಿ ತಾಯಣ್ಣ ಹಾಗೂ ಮುಂಡ್ರಿಗಿ ನಾಗರಾಜ್ ಮಾತನಾಡಿ, ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದ್ದು, 10-15 ದಿನ ಕಳೆದರೂ ಸಾರ್ವಜನಿಕರಿಗೆ ನೀರು ಪೂರೈಕೆಯಾಗುತ್ತಿಲ್ಲ. ಎಂದರು.<br /> <br /> ಪಕ್ಷದ ಮುಖಂಡರಾದ ಖುದ್ದೂಸ್, ರಸೂಲ್ಸಾಬ್, ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಳಮ್ಮ, ಜ್ಯೋತಿ ಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ಪಿ.ಭಾಸ್ಕರ ರೆಡ್ಡಿ, ವೈ.ದೂರ್ವಾಸ್, ಪಿ.ಜಗದೀಶ್ವರ ರೆಡ್ಡಿ, ಶ್ರೀಕಾಂತ ರೆಡ್ಡಿ, ಕೃಷ್ಣ, ವೆಂಕಟೇಶ್, ಸಂಜೀವ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. <br /> <strong><br /> ಎಸ್ಯುಸಿಐನಿಂದ:</strong> ಎಸ್ಯುಸಿಐ ನೇತೃತ್ವದಲ್ಲಿ ಶುಕ್ರವಾರ ನಗರದ ಕೌಲ್ಬಝಾರ್ನ ರೈಲ್ವೆ ಗೇಟ್ ಬಳಿಯರಸ್ತೆಮೇಲೆ ಖಾಲಿ ಕೊಡ ಇರಿಸಿ ಪ್ರತಿಭಟನೆಗಿಳಿದ ಸಾರ್ವಜನಿಕರು, ನೀರು ಪೂರೈಸುವಂತೆ ಆಗ್ರಹಿಸಿದರು.<br /> <br /> ಮೂಲ ಸೌಲಭ್ಯ ಒದಗಿಸುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದ್ದು, ಬೇಸಿಗೆ ವೇಳೆ ನೀರಿನ ಕೊರತೆ ನೀಗಿಸಲು ಪಾಲಿಕೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಸಾರ್ವಜನಿಕರು ತೊಂದರೆ ಎದುರಿಸುವಂತಾಗಿದೆ ಎಂದು ತಿಳಿಸಲಾಯಿತು.<br /> <br /> ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಕೆ.ಸೋಮಶೇಖರ್, ಮಂಜುಳಾ, ಶಾಂತಾ, ಎ.ದೇವದಾಸ್, ನಾಗಲಕ್ಷ್ಮಿ ಮತ್ತು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>