<p>ಚಾಮರಾಜನಗರ: `ಸರ್ಕಾರದ ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಲಾಗುವುದು' ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.<br /> <br /> ತಾಲ್ಲೂಕಿನ ಬಂದಿಗೌಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ನಿರ್ಮಿಸುವ ಓವರ್ಹೆಡ್ ಟ್ಯಾಂಕ್ನ ನಿರ್ಮಾಣಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ ಬರ ಪರಿಹಾರ ಯೋಜನೆಯಡಿ ಈಗಾಗಲೇ 80ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಯೋಜನೆಯಡಿ ಅನುಧಾನ ಲಭ್ಯವಿದ್ದು ಕುಡಿಯುವ ನೀರಿಗೆ ಕೊರತೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.<br /> <br /> `ತಾಲ್ಲೂಕಿನ ಗಡಿ ಪ್ರದೇಶಗಳ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದ್ದು ಶೀಘ್ರವೇ ಚಿಕ್ಕಹೊಳೆ- ಎಲ್ಲೆಕಟ್ಟೆ, ಅರಕಲವಾಡಿ- ಎತ್ತಿಗಟ್ಟಿಬೆಟ್ಟ, ಕೋಡಿಉಗನೆ-ಬಂದಿಗೌಡನಹಳ್ಳಿ ರಸ್ತೆಗಳನ್ನು ತ್ವರಿತವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.<br /> ಬಿಸಲವಾಡಿ ಗ್ರಾಮದಲ್ಲಿ ಗಿರಿಜನ ಉಪಯೋಜನೆಯಡಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದರು.<br /> <br /> ಮುಂದಿನ ರಾಜ್ಯ ಬಜೆಟ್ ನಂತರ ದೊರಕುವ ಅನುದಾನದಲ್ಲಿ ತಾಲ್ಲೂಕಿನಾದ್ಯಂತ ಹಿಂದುಳಿದ ವರ್ಗದವರು ವಾಸಿಸುವ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ನಿರ್ಮಿಸಿ ಅವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಮಾಜಿ ಅಧ್ಯಕ್ಷ ಬಿ. ಶಾಂತಮಲ್ಲಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ನಾಯಕ, ಗುತ್ತಿಗೆದಾರ ಉಮೇಶ್, ಮುಖಂಡರಾದ ಪ್ರಭುಸ್ವಾಮಿ, ಬಾಬು, ಮಹದೇವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಸರ್ಕಾರದ ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಲಾಗುವುದು' ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.<br /> <br /> ತಾಲ್ಲೂಕಿನ ಬಂದಿಗೌಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ನಿರ್ಮಿಸುವ ಓವರ್ಹೆಡ್ ಟ್ಯಾಂಕ್ನ ನಿರ್ಮಾಣಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ ಬರ ಪರಿಹಾರ ಯೋಜನೆಯಡಿ ಈಗಾಗಲೇ 80ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಯೋಜನೆಯಡಿ ಅನುಧಾನ ಲಭ್ಯವಿದ್ದು ಕುಡಿಯುವ ನೀರಿಗೆ ಕೊರತೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.<br /> <br /> `ತಾಲ್ಲೂಕಿನ ಗಡಿ ಪ್ರದೇಶಗಳ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದ್ದು ಶೀಘ್ರವೇ ಚಿಕ್ಕಹೊಳೆ- ಎಲ್ಲೆಕಟ್ಟೆ, ಅರಕಲವಾಡಿ- ಎತ್ತಿಗಟ್ಟಿಬೆಟ್ಟ, ಕೋಡಿಉಗನೆ-ಬಂದಿಗೌಡನಹಳ್ಳಿ ರಸ್ತೆಗಳನ್ನು ತ್ವರಿತವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.<br /> ಬಿಸಲವಾಡಿ ಗ್ರಾಮದಲ್ಲಿ ಗಿರಿಜನ ಉಪಯೋಜನೆಯಡಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದರು.<br /> <br /> ಮುಂದಿನ ರಾಜ್ಯ ಬಜೆಟ್ ನಂತರ ದೊರಕುವ ಅನುದಾನದಲ್ಲಿ ತಾಲ್ಲೂಕಿನಾದ್ಯಂತ ಹಿಂದುಳಿದ ವರ್ಗದವರು ವಾಸಿಸುವ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ನಿರ್ಮಿಸಿ ಅವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಮಾಜಿ ಅಧ್ಯಕ್ಷ ಬಿ. ಶಾಂತಮಲ್ಲಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ನಾಯಕ, ಗುತ್ತಿಗೆದಾರ ಉಮೇಶ್, ಮುಖಂಡರಾದ ಪ್ರಭುಸ್ವಾಮಿ, ಬಾಬು, ಮಹದೇವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>