<p>ಚಾಮರಾಜನಗರ: `ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು~ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರದೀಪ್ಸಿಂಗ್ ಖರೋಲ ಸೂಚಿಸಿದರು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬರಪರಿಹಾರ ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಈಗಾಗಲೇ, ಬೇಸಿಗೆ ಆರಂಭವಾಗಿದೆ. ಗ್ರಾಮ ಮತ್ತು ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ತೆಗೆದುಕೊಳ್ಳಬೇಕು. ಹೋಬಳಿಮಟ್ಟದ ನೋಡೆಲ್ ಅಧಿಕಾರಿಗಳು ಪ್ರವಾಸ ಮಾಡಿ ಕುಡಿಯುವ ನೀರು, ಆರೋಗ್ಯ, ಜಾನುವಾರುಗಳಿಗೆ ಮೇವಿನ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಬೇಕು ಎಂದರು.<br /> <br /> ಜಿಲ್ಲಾಧಿಕಾರಿಗಳು ಪ್ರತಿವಾರ ನೋಡೆಲ್ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯ ಯಾವ ಭಾಗದಲ್ಲಿ ಕಾಣಿಸಿಕೊಳ್ಳಲಿದೆ ಎಂಬ ಬಗ್ಗೆ ಪೂರ್ವ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.<br /> <br /> ಜಿ.ಪಂ. ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಕೆ. ರಾಜು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪರಿಹರಿಸಲು 262 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ 91 ಕಾಮಗಾರಿ ಪೂರ್ಣಗೊಂಡಿವೆ. ಈ ಮಾಸಾಂತ್ಯದೊಳಗೆ ಉಳಿದ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್ ಮಾತನಾಡಿ, ಗುಂಡ್ಲುಪೇಟೆ ತಾಲ್ಲೂಕು ಬರಗಿ ಫಾರಂನಲ್ಲಿ 100 ಟನ್, ಕೊಳ್ಳೇಗಾಲ ತಾಲ್ಲೂಕಿನ ಹನೂರು ಎಪಿಎಂಸಿಯಲ್ಲಿ 60 ಟನ್ ಮೇವು ಶೇಖರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿಗೆ ಮೇವು ಖರೀದಿಗೆ ಹಣ ಬಿಡುಗಡೆಯಾಗಿದ್ದು, ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.<br /> <br /> ಬರಪರಿಹಾರ ಯೋಜನೆಯಡಿ 468.55 ಲಕ್ಷ ರೂ ವೆಚ್ಚದಡಿ 294 ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಹೆಚ್ಚುವರಿಯಾಗಿ 12 ಕೋಟಿ ರೂ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.<br /> <br /> ಜಿಲ್ಲಾ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಸುಂದರರಾಜು ಮಾತನಾಡಿ, ಜಿಲ್ಲೆಯಲ್ಲಿ ಬರಪರಿಹಾರ ಯೋಜನೆಯಡಿ ಜನವರಿ ತಿಂಗಳಲ್ಲಿ 8 ಸಾವಿರ ಮೇವಿನ ಬೀಜದ ಕಿರುಪೊಟ್ಟಣ ವಿತರಿಸಲಾಗಿದೆ. ಒಟ್ಟು 2,050 ಹೆಕ್ಟೇರ್ ಪ್ರದೇಶದಲ್ಲಿ ಮೇವು ಉತ್ಪಾದನೆಗೆ ಕ್ರಮಕೈಗೊಳ್ಳಲಾಗಿದೆ ಎಂದರು.<br /> <br /> ಜಿಲ್ಲೆಯಲ್ಲಿ ಗೋಶಾಲೆ ತೆರೆಯುವ ಅಗತ್ಯ ಕಂಡುಬಂದಿಲ್ಲ. ಹಾಲಿನ ಉತ್ಪಾದನೆಯೂ ಕಡಿಮೆಯಾಗಿಲ್ಲ. ಪ್ರಸ್ತುತ ನಾಲ್ಕು ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ. ನವೆಂಬರ್ ತಿಂಗಳಿನಲ್ಲಿ ವಿತರಿಸಲಾದ ಮೇವಿನ ಬೀಜದ ಕಿರುಪೊಟ್ಟಣಗಳಿಂದ 13,600 ಟನ್ ಮೇವು ಉತ್ಪಾದಿಸಲಾಗಿದೆ ಎಂದು ವಿವರಿಸಿದರು.<br /> <br /> ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ, ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು~ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರದೀಪ್ಸಿಂಗ್ ಖರೋಲ ಸೂಚಿಸಿದರು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬರಪರಿಹಾರ ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಈಗಾಗಲೇ, ಬೇಸಿಗೆ ಆರಂಭವಾಗಿದೆ. ಗ್ರಾಮ ಮತ್ತು ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ತೆಗೆದುಕೊಳ್ಳಬೇಕು. ಹೋಬಳಿಮಟ್ಟದ ನೋಡೆಲ್ ಅಧಿಕಾರಿಗಳು ಪ್ರವಾಸ ಮಾಡಿ ಕುಡಿಯುವ ನೀರು, ಆರೋಗ್ಯ, ಜಾನುವಾರುಗಳಿಗೆ ಮೇವಿನ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಬೇಕು ಎಂದರು.<br /> <br /> ಜಿಲ್ಲಾಧಿಕಾರಿಗಳು ಪ್ರತಿವಾರ ನೋಡೆಲ್ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯ ಯಾವ ಭಾಗದಲ್ಲಿ ಕಾಣಿಸಿಕೊಳ್ಳಲಿದೆ ಎಂಬ ಬಗ್ಗೆ ಪೂರ್ವ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.<br /> <br /> ಜಿ.ಪಂ. ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಕೆ. ರಾಜು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪರಿಹರಿಸಲು 262 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ 91 ಕಾಮಗಾರಿ ಪೂರ್ಣಗೊಂಡಿವೆ. ಈ ಮಾಸಾಂತ್ಯದೊಳಗೆ ಉಳಿದ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್ ಮಾತನಾಡಿ, ಗುಂಡ್ಲುಪೇಟೆ ತಾಲ್ಲೂಕು ಬರಗಿ ಫಾರಂನಲ್ಲಿ 100 ಟನ್, ಕೊಳ್ಳೇಗಾಲ ತಾಲ್ಲೂಕಿನ ಹನೂರು ಎಪಿಎಂಸಿಯಲ್ಲಿ 60 ಟನ್ ಮೇವು ಶೇಖರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿಗೆ ಮೇವು ಖರೀದಿಗೆ ಹಣ ಬಿಡುಗಡೆಯಾಗಿದ್ದು, ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.<br /> <br /> ಬರಪರಿಹಾರ ಯೋಜನೆಯಡಿ 468.55 ಲಕ್ಷ ರೂ ವೆಚ್ಚದಡಿ 294 ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಹೆಚ್ಚುವರಿಯಾಗಿ 12 ಕೋಟಿ ರೂ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.<br /> <br /> ಜಿಲ್ಲಾ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಸುಂದರರಾಜು ಮಾತನಾಡಿ, ಜಿಲ್ಲೆಯಲ್ಲಿ ಬರಪರಿಹಾರ ಯೋಜನೆಯಡಿ ಜನವರಿ ತಿಂಗಳಲ್ಲಿ 8 ಸಾವಿರ ಮೇವಿನ ಬೀಜದ ಕಿರುಪೊಟ್ಟಣ ವಿತರಿಸಲಾಗಿದೆ. ಒಟ್ಟು 2,050 ಹೆಕ್ಟೇರ್ ಪ್ರದೇಶದಲ್ಲಿ ಮೇವು ಉತ್ಪಾದನೆಗೆ ಕ್ರಮಕೈಗೊಳ್ಳಲಾಗಿದೆ ಎಂದರು.<br /> <br /> ಜಿಲ್ಲೆಯಲ್ಲಿ ಗೋಶಾಲೆ ತೆರೆಯುವ ಅಗತ್ಯ ಕಂಡುಬಂದಿಲ್ಲ. ಹಾಲಿನ ಉತ್ಪಾದನೆಯೂ ಕಡಿಮೆಯಾಗಿಲ್ಲ. ಪ್ರಸ್ತುತ ನಾಲ್ಕು ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ. ನವೆಂಬರ್ ತಿಂಗಳಿನಲ್ಲಿ ವಿತರಿಸಲಾದ ಮೇವಿನ ಬೀಜದ ಕಿರುಪೊಟ್ಟಣಗಳಿಂದ 13,600 ಟನ್ ಮೇವು ಉತ್ಪಾದಿಸಲಾಗಿದೆ ಎಂದು ವಿವರಿಸಿದರು.<br /> <br /> ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ, ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>