<p><strong>ಬಾಗೇಪಲ್ಲಿ:</strong> ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್, ಕೊಳವೆ ಬಾವಿ ಹಾಗೂ ಮೋಟರ್ ಕೆಟ್ಟಿರುವುದರಿಂದ ನೀರು ದೊರೆ ಯುತ್ತಿಲ್ಲ. ಕೂಡಲೇ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ನೀರು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. <br /> <br /> ಪ್ರತಿಭಟನಾ ವೇಳೆ ಮಾತನಾಡಿದ ಪ್ರತಿಭಟನಾ ಕಾರರು, ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಿ 2-3 ವರ್ಷಗಳು ಕಳೆದಿವೆ. ಆದರೆ ಅವುಗಳು ಈಗ ಕೆಟ್ಟು ನಿಂತರು ದುರಸ್ತಿ ಕೈಗೊಳ್ಳುವಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಫಲವಾಗಿದ್ದಾರೆ ಎಂದು ದೂರಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯೆ ಬಿ.ಸಾವಿತ್ರಮ್ಮ ಮಾತನಾಡಿ, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಜನತೆ ನಮ್ಮನ್ನು ಪ್ರಶ್ನಿ ಸುತ್ತಿದ್ದಾರೆ. ಅಧಿಕಾರಿಗಳು ತಮಗೆ ಏನೂ ಸಂಬಂಧ ಇಲ್ಲವೆಂಬಂತೆ ಕುಳಿತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆಯಲಾಗುವುದು ಎಂದರು.<br /> ಸಿಪಿಎಂ ಯುವಮುಖಂಡ ಮಂಜುನಾಥರೆಡ್ಡಿ , ಕುಡಿ ಯುವ ನೀರಿಗೆ ಇರುವ ಅನುದಾನ ಬಳಕೆಯಾಗುತ್ತಿಲ್ಲ ಎಂದು ದೂರಿದರು.<br /> <br /> ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯರಾದ ನಾರಾಯಣಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾರಾಣಿ, ಸದಸ್ಯ ರಾದ ಶಂಕರರೆಡ್ಡಿ, ನಾರಾಯಣಪ್ಪ, ನಾರಾಯಣ್ ನಾಯಕ್, ಮಾಜಿ ಸದಸ್ಯ ವೆಂಕಟೇಶ್, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ರಘುರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್, ಕೊಳವೆ ಬಾವಿ ಹಾಗೂ ಮೋಟರ್ ಕೆಟ್ಟಿರುವುದರಿಂದ ನೀರು ದೊರೆ ಯುತ್ತಿಲ್ಲ. ಕೂಡಲೇ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ನೀರು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. <br /> <br /> ಪ್ರತಿಭಟನಾ ವೇಳೆ ಮಾತನಾಡಿದ ಪ್ರತಿಭಟನಾ ಕಾರರು, ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಿ 2-3 ವರ್ಷಗಳು ಕಳೆದಿವೆ. ಆದರೆ ಅವುಗಳು ಈಗ ಕೆಟ್ಟು ನಿಂತರು ದುರಸ್ತಿ ಕೈಗೊಳ್ಳುವಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಫಲವಾಗಿದ್ದಾರೆ ಎಂದು ದೂರಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯೆ ಬಿ.ಸಾವಿತ್ರಮ್ಮ ಮಾತನಾಡಿ, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಜನತೆ ನಮ್ಮನ್ನು ಪ್ರಶ್ನಿ ಸುತ್ತಿದ್ದಾರೆ. ಅಧಿಕಾರಿಗಳು ತಮಗೆ ಏನೂ ಸಂಬಂಧ ಇಲ್ಲವೆಂಬಂತೆ ಕುಳಿತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆಯಲಾಗುವುದು ಎಂದರು.<br /> ಸಿಪಿಎಂ ಯುವಮುಖಂಡ ಮಂಜುನಾಥರೆಡ್ಡಿ , ಕುಡಿ ಯುವ ನೀರಿಗೆ ಇರುವ ಅನುದಾನ ಬಳಕೆಯಾಗುತ್ತಿಲ್ಲ ಎಂದು ದೂರಿದರು.<br /> <br /> ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯರಾದ ನಾರಾಯಣಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾರಾಣಿ, ಸದಸ್ಯ ರಾದ ಶಂಕರರೆಡ್ಡಿ, ನಾರಾಯಣಪ್ಪ, ನಾರಾಯಣ್ ನಾಯಕ್, ಮಾಜಿ ಸದಸ್ಯ ವೆಂಕಟೇಶ್, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ರಘುರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>