<p>ಬಳ್ಳಾರಿ: ನಗರದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಶಾಶ್ವತ ಕುಡಿಯುವ ನೀರು ಸರಬರಾಜು ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.<br /> <br /> ತಾಲ್ಲೂಕಿನ ಮೋಕ ರಸ್ತೆಯಲ್ಲಿರುವ ಶಿವಪುರ ಗ್ರಾಮದ ಬಳಿ ಸೋಮವಾರ ರೂ 98.66 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರದ ಕುಡಿಯುವ ನೀರು ಸರಬರಾಜು ಅಭಿವೃದ್ಧಿ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರೆವೇರಿಸಿದ ಬಳಿಕ ಅವರು ಮಾತನಾಡಿದರು.<br /> <br /> ಮುಂದಿನ 15 ವರ್ಷಗಳ ಜನಸಂಖ್ಯೆಯನ್ನು ಅಂದಾಜಿಸಿ ಈ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಗನಕಲ್ಲು ಘಟಕದಿಂದ ಶುದ್ಧೀಕರಿಸಿದ ನೀರನ್ನು ನಾರಾಯಣರಾವ್ ಪಾರ್ಕ್ನಲ್ಲಿರುವ ಜಲ ಸಂಗ್ರಹಗಾರಕ್ಕೆ ಸಾಗಿಸುವ ಯಂತ್ರಗಳು ಹಾಗೂ ಪೈಪ್ ಅಳವಡಿಸಲಾಗುವುದು ಎಂದು ಅವರು ಹೇಳಿದರು.<br /> <br /> ಪಾಲಿಕೆಯಿಂದ ಈಗಾಗಲೇ ನಗರದ ಒಟ್ಟು 27 ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದರು.<br /> <br /> ಬಳ್ಳಾರಿ ನಗರದ ರಸ್ತೆ, ಕುಡಿಯುವ ನೀರು ವ್ಯವಸ್ಥೆ ಸುಧಾರಿಸಲಾಗಿದ್ದು, ಅನೇಕ ಅಬಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಬಳ್ಳಾರಿಯನ್ನು ಸುಂದರ ಹಾಗೂ ಸ್ವಚ್ಛ ನಗರವನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಕೋರಿದರು.<br /> <br /> ಸಂಸದೆ ಜೆ. ಶಾಂತ, ಶಾಸಕ ಮೃತ್ಯುಂಜಯ ಜಿನಿಗಾ, ಜಿ.ಪಂ. ಅಧ್ಯಕ್ಷೆ ಅರುಣಾ, ಮೇಯರ್ ಪಾರ್ವತಿ, ಉಪಮೇಯರ್ ಶಶಿಕಲಾ, ಸ್ಥಾಯಿ ಸಮಿತಿ ಅಧ್ಯಕ್ಷ ಗೋನಾಳ್ ರಾಜಶೇಖರಗೌಡ, ಪೌರಾಯುಕ್ತ ಡಿ.ಎಲ್. ನಾರಾಯಣ್, ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ನಗರದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಶಾಶ್ವತ ಕುಡಿಯುವ ನೀರು ಸರಬರಾಜು ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.<br /> <br /> ತಾಲ್ಲೂಕಿನ ಮೋಕ ರಸ್ತೆಯಲ್ಲಿರುವ ಶಿವಪುರ ಗ್ರಾಮದ ಬಳಿ ಸೋಮವಾರ ರೂ 98.66 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರದ ಕುಡಿಯುವ ನೀರು ಸರಬರಾಜು ಅಭಿವೃದ್ಧಿ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರೆವೇರಿಸಿದ ಬಳಿಕ ಅವರು ಮಾತನಾಡಿದರು.<br /> <br /> ಮುಂದಿನ 15 ವರ್ಷಗಳ ಜನಸಂಖ್ಯೆಯನ್ನು ಅಂದಾಜಿಸಿ ಈ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಗನಕಲ್ಲು ಘಟಕದಿಂದ ಶುದ್ಧೀಕರಿಸಿದ ನೀರನ್ನು ನಾರಾಯಣರಾವ್ ಪಾರ್ಕ್ನಲ್ಲಿರುವ ಜಲ ಸಂಗ್ರಹಗಾರಕ್ಕೆ ಸಾಗಿಸುವ ಯಂತ್ರಗಳು ಹಾಗೂ ಪೈಪ್ ಅಳವಡಿಸಲಾಗುವುದು ಎಂದು ಅವರು ಹೇಳಿದರು.<br /> <br /> ಪಾಲಿಕೆಯಿಂದ ಈಗಾಗಲೇ ನಗರದ ಒಟ್ಟು 27 ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದರು.<br /> <br /> ಬಳ್ಳಾರಿ ನಗರದ ರಸ್ತೆ, ಕುಡಿಯುವ ನೀರು ವ್ಯವಸ್ಥೆ ಸುಧಾರಿಸಲಾಗಿದ್ದು, ಅನೇಕ ಅಬಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಬಳ್ಳಾರಿಯನ್ನು ಸುಂದರ ಹಾಗೂ ಸ್ವಚ್ಛ ನಗರವನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಕೋರಿದರು.<br /> <br /> ಸಂಸದೆ ಜೆ. ಶಾಂತ, ಶಾಸಕ ಮೃತ್ಯುಂಜಯ ಜಿನಿಗಾ, ಜಿ.ಪಂ. ಅಧ್ಯಕ್ಷೆ ಅರುಣಾ, ಮೇಯರ್ ಪಾರ್ವತಿ, ಉಪಮೇಯರ್ ಶಶಿಕಲಾ, ಸ್ಥಾಯಿ ಸಮಿತಿ ಅಧ್ಯಕ್ಷ ಗೋನಾಳ್ ರಾಜಶೇಖರಗೌಡ, ಪೌರಾಯುಕ್ತ ಡಿ.ಎಲ್. ನಾರಾಯಣ್, ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>