<p><strong>ಬಳ್ಳಾರಿ: </strong>ಬಳ್ಳಾರಿ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸಲೆಂದೇ ಆರಂಭಿಸಲಾಗಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನ ರೂ 98 ಕೋಟಿ ವೆಚ್ಚದ ಕಾಮಗಾರಿಯು ಇದೇ ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದರು.<br /> <br /> ತಾಲ್ಲೂಕಿನ ಮೋಕಾ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಜಾಕ್ವೆಲ್, ಸಂಗನಕಲ್ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕ, ಪೈಪ್ಲೈನ್ ಕಾಮಗಾರಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.<br /> <br /> ಮೋಕಾದಿಂದ ಬಳ್ಳಾರಿ ನಗರದವರೆಗೆ ಪೈಪ್ಲೈನ್ ಕಾಮಗಾರಿ ಹಾಗೂ ಜಾಕ್ವೆಲ್ ಕಾಮಗಾರಿಯು ಮುಕ್ತಾಯದ ಹಂತ ತಲುಪಿದೆ. ನೀರು ಶುದ್ಧೀಕರಣ ಘಟಕದ ಕಾಮಗಾರಿಯು ಪ್ರಗತಿ ಹಂತದಲ್ಲಿದೆ, ಅಲ್ಲಿಪುರದ ಬಳಿಯಿರುವ ಕೆರೆಗೆ ಇಲ್ಲಿಂದ ನೀರು ಪೂರೈಸಲೆಂದೇ ಪೈಪ್ಲೈನ್ ಅಳವಡಿಸುವ ಕಾಮಗಾರಿ ಆಗಸ್ಟ್ ಒಳಗಾಗಿ ಪೂರ್ಣಗೊಳ್ಳಲಿದೆ.<br /> <br /> 1219 ಎಂಎಂ ಸುತ್ತಳತೆಯ ಪೈಪ್ಗಳನ್ನು ಬಳಸಲಾಗುತ್ತಿದೆ. ಈ ಪೈಪ್ಗಳು ಅನೇಕ ದಶಕಗಳವರೆಗೆ ಬಾಳಿಕೆ ಬರುವಂತೆ ರೂಪಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ನೀರು ಪೂರೈಕೆ ಆರಂಭವಾಗಲಿದೆ ಎಂದರು.<br /> <br /> ನೀರಿನ ಸಂಗ್ರಹದ ಕೊರತೆ ಇರುವುದರಿಂದಲೇ ಪ್ರಸಕ್ತ ಬೇಸಿಗೆಯಲ್ಲಿ ನಗರಕ್ಕೆ ನೀರು ಪೂರೈಸುವಲ್ಲಿ ವ್ಯತ್ಯಯ ಉಂಟಾಗಲಿದೆ. ಆದರೂ ಜನತೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಪ್ರಸ್ತುತ ಕಾಮಗಾರಿ ಪೂರ್ಣಗೊಂಡ ಬಳಿಕ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ಉಪಮೇಯರ್ ಇಬ್ರಾಹಿಂ ಬಾಬು, ಪಾಲಿಕೆ ಸದಸ್ಯರಾದ ಕೆ. ಬಸವರಾಜ್, ಮಲ್ಲನಗೌಡ, ಪೌರಾಯುಕ್ತ ಡಿ.ಎಲ್. ನಾರಾಯಣ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳಾದ ಯಾಸಿನ್, ನಾರಾಯಣ್ ರಾವ್, ಗಂಗಾಧರ ಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಬಳ್ಳಾರಿ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸಲೆಂದೇ ಆರಂಭಿಸಲಾಗಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನ ರೂ 98 ಕೋಟಿ ವೆಚ್ಚದ ಕಾಮಗಾರಿಯು ಇದೇ ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದರು.<br /> <br /> ತಾಲ್ಲೂಕಿನ ಮೋಕಾ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಜಾಕ್ವೆಲ್, ಸಂಗನಕಲ್ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕ, ಪೈಪ್ಲೈನ್ ಕಾಮಗಾರಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.<br /> <br /> ಮೋಕಾದಿಂದ ಬಳ್ಳಾರಿ ನಗರದವರೆಗೆ ಪೈಪ್ಲೈನ್ ಕಾಮಗಾರಿ ಹಾಗೂ ಜಾಕ್ವೆಲ್ ಕಾಮಗಾರಿಯು ಮುಕ್ತಾಯದ ಹಂತ ತಲುಪಿದೆ. ನೀರು ಶುದ್ಧೀಕರಣ ಘಟಕದ ಕಾಮಗಾರಿಯು ಪ್ರಗತಿ ಹಂತದಲ್ಲಿದೆ, ಅಲ್ಲಿಪುರದ ಬಳಿಯಿರುವ ಕೆರೆಗೆ ಇಲ್ಲಿಂದ ನೀರು ಪೂರೈಸಲೆಂದೇ ಪೈಪ್ಲೈನ್ ಅಳವಡಿಸುವ ಕಾಮಗಾರಿ ಆಗಸ್ಟ್ ಒಳಗಾಗಿ ಪೂರ್ಣಗೊಳ್ಳಲಿದೆ.<br /> <br /> 1219 ಎಂಎಂ ಸುತ್ತಳತೆಯ ಪೈಪ್ಗಳನ್ನು ಬಳಸಲಾಗುತ್ತಿದೆ. ಈ ಪೈಪ್ಗಳು ಅನೇಕ ದಶಕಗಳವರೆಗೆ ಬಾಳಿಕೆ ಬರುವಂತೆ ರೂಪಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ನೀರು ಪೂರೈಕೆ ಆರಂಭವಾಗಲಿದೆ ಎಂದರು.<br /> <br /> ನೀರಿನ ಸಂಗ್ರಹದ ಕೊರತೆ ಇರುವುದರಿಂದಲೇ ಪ್ರಸಕ್ತ ಬೇಸಿಗೆಯಲ್ಲಿ ನಗರಕ್ಕೆ ನೀರು ಪೂರೈಸುವಲ್ಲಿ ವ್ಯತ್ಯಯ ಉಂಟಾಗಲಿದೆ. ಆದರೂ ಜನತೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಪ್ರಸ್ತುತ ಕಾಮಗಾರಿ ಪೂರ್ಣಗೊಂಡ ಬಳಿಕ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ಉಪಮೇಯರ್ ಇಬ್ರಾಹಿಂ ಬಾಬು, ಪಾಲಿಕೆ ಸದಸ್ಯರಾದ ಕೆ. ಬಸವರಾಜ್, ಮಲ್ಲನಗೌಡ, ಪೌರಾಯುಕ್ತ ಡಿ.ಎಲ್. ನಾರಾಯಣ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳಾದ ಯಾಸಿನ್, ನಾರಾಯಣ್ ರಾವ್, ಗಂಗಾಧರ ಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>