<p><strong>ಶಿವಮೊಗ್ಗ: </strong>ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಕುಡಿಯುವ ನೀರು ಪೂರೈಕೆಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಕುರಿತ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಗೆ ಶಿವಮೊಗ್ಗ ಜಿಲ್ಲಾ ಪಂಚಾಯ್ತಿಗೆ ಸರ್ಕಾರ ₨3 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅನುದಾನವನ್ನು ಪರಿಣಾಮಕಾರಿ ಯಾಗಿ ಬಳಸಿಕೊಂಡು, ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.<br /> <br /> ಸಾಗರ ತಾಲ್ಲೂಕು ಸೇರಿದಂತೆ ಮಲೆನಾಡು ಭಾಗದಲ್ಲಿ ಕುಡಿಯುವ ನೀರು ಸಮಸ್ಯೆ ಸೃಷ್ಟಿಯಾಗಿದೆ. ಬೋರ್ ವೆಲ್, ಬತ್ತಿ ಹೋಗಿದ್ದು, ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಿಯಾ ಯೋಜನೆ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು ಎಂದರು. <br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತದಲ್ಲಿ ಪಾರದರ್ಶಕತೆ ತರುವುದಾಗಿ ಹೇಳುತ್ತಾರೆ. ಆದರೆ, ಇಂದಿನ ದಿನಗಳಲ್ಲಿ ಪಾರದರ್ಶಕವಾದ ಆಡಳಿತ ಇಲ್ಲವಾಗಿದ್ದು, ಅನುಷ್ಠಾನ ಮಾಡುವುದು ಕಷ್ಟ–ಸಾಧ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ವಿದೇಶ ಪ್ರವಾಸಕ್ಕೆ ತೆರಳುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.<br /> <br /> ತಾವು ವಿಧಾನಸಭಾಧ್ಯಕ್ಷರಾದ ನಂತರ ಶಾಸಕರ ಎರಡು ತಂಡಕ್ಕೆ ವಿದೇಶ ಪ್ರವಾಸಕ್ಕೆ ಕಳುಹಿಸಿಕೊಡಲಾಗಿದೆ. ಇಂದು, ಶಾಸಕರ ವಿದೇಶ ಪ್ರವಾಸಕ್ಕೆ ಟೀಕೆ–ಟಿಪ್ಪಣಿಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕರ ವಿದೇಶಿ ಪ್ರವಾಸ ಕೈಗೊಳ್ಳುವ ಕುರಿತಂತೆ ಮಾರ್ಗದರ್ಶಿ ಸೂತ್ರ ಸಿದ್ದಪಡಿಸುವುದಕ್ಕೆ ಸಮಿತಿ ಯೊಂದನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಉದ್ಯೋಗ ಖಾತ್ರಿ ಯೋಜನೆ (ಎನ್ಆರ್ಇಜಿ)ಯು ಜನರಿಗೆ ಉದ್ಯೋಗದ ಹಕ್ಕು ನೀಡುವ ಯೋಜನೆಯಾಗಿದೆ. ಆದರೆ, ಈ ಯೋಜನೆ ಅನುಷ್ಠಾನ ಪರಿಣಾಮ ಕಾರಿಯಾಗಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಗೆ ಎನ್ಆರ್ಇಜಿ ಯೋಜನೆಯ ಅಡಿ ಪ್ರಸ್ತುತ ಸಾಲಿನಲ್ಲಿ ₨175ಕೋಟಿ ರೂ. ಅನುದಾನ ಮಂಜೂರಾಗಿದೆ.<br /> <br /> ಆದರೆ, ಕೇವಲ ₨60ಕೋಟಿ ಮಾತ್ರ ಬಳಕೆ ಯಾಗಿದೆ. ಇದಕ್ಕೆ ಆಯಾ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಿಡಿಒಗಳ ನಿರ್ಲಕ್ಷ್ಯತನವೇ ಕಾರಣ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಸಭೆಯಲ್ಲಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.</p>.<p><strong>ನೂತನ ವಿವಿಗೆ ಜಾಗ</strong></p>.<p>ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಮಾನಕ್ಕಿ -ಹಾಗೂ ಇರುವಕ್ಕಿ ಗ್ರಾಮದ ಸುತ್ತಮುತ್ತ ಜಾಗ ಗುರುತಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.</p>.<p>ಕೃಷಿ ವಿವಿಗೆ 1,000 ಎಕರೆ ಜಾಗದ ಅವಶ್ಯಕತೆಯಿದ್ದು, ಆನಂದಪುರಂ ಬಳಿಯ ಮಾನಕ್ಕಿ –ಇರುವಕ್ಕಿ ಸುತ್ತಮುತ್ತಲು ಸುಮಾರು 600 ಎಕರೆ ಭೂಮಿ ಲಭ್ಯವಿದೆ. <br /> <br /> ಉಳಿದ ಭೂಮಿಯ ಲಭ್ಯತೆಯ ಕುರಿತಂತೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಪರಿಶೀಲಿಸಲಿದ್ದಾರೆ ಎಂದರು. ಕೃಷಿ ವಿ.ವಿ.ಗೆ ಗುರುತಿಸಲಾಗಿರುವ ಸ್ಥಳದಲ್ಲಿಯೇ ಸಣ್ಣ ಪ್ರಮಾಣದ ಹಳ್ಳವೊಂದಿದ್ದು, ಇದಕ್ಕೆ ಬ್ಯಾರೇಜ್ ನಿರ್ಮಿಸಿ, ವಿ.ವಿ. ಚಟುವಟಿಕೆಗಳಿಗೆ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಕುಡಿಯುವ ನೀರು ಪೂರೈಕೆಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.<br /> <br /> ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳ ಕುರಿತ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಗೆ ಶಿವಮೊಗ್ಗ ಜಿಲ್ಲಾ ಪಂಚಾಯ್ತಿಗೆ ಸರ್ಕಾರ ₨3 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅನುದಾನವನ್ನು ಪರಿಣಾಮಕಾರಿ ಯಾಗಿ ಬಳಸಿಕೊಂಡು, ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.<br /> <br /> ಸಾಗರ ತಾಲ್ಲೂಕು ಸೇರಿದಂತೆ ಮಲೆನಾಡು ಭಾಗದಲ್ಲಿ ಕುಡಿಯುವ ನೀರು ಸಮಸ್ಯೆ ಸೃಷ್ಟಿಯಾಗಿದೆ. ಬೋರ್ ವೆಲ್, ಬತ್ತಿ ಹೋಗಿದ್ದು, ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಿಯಾ ಯೋಜನೆ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು ಎಂದರು. <br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತದಲ್ಲಿ ಪಾರದರ್ಶಕತೆ ತರುವುದಾಗಿ ಹೇಳುತ್ತಾರೆ. ಆದರೆ, ಇಂದಿನ ದಿನಗಳಲ್ಲಿ ಪಾರದರ್ಶಕವಾದ ಆಡಳಿತ ಇಲ್ಲವಾಗಿದ್ದು, ಅನುಷ್ಠಾನ ಮಾಡುವುದು ಕಷ್ಟ–ಸಾಧ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ವಿದೇಶ ಪ್ರವಾಸಕ್ಕೆ ತೆರಳುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.<br /> <br /> ತಾವು ವಿಧಾನಸಭಾಧ್ಯಕ್ಷರಾದ ನಂತರ ಶಾಸಕರ ಎರಡು ತಂಡಕ್ಕೆ ವಿದೇಶ ಪ್ರವಾಸಕ್ಕೆ ಕಳುಹಿಸಿಕೊಡಲಾಗಿದೆ. ಇಂದು, ಶಾಸಕರ ವಿದೇಶ ಪ್ರವಾಸಕ್ಕೆ ಟೀಕೆ–ಟಿಪ್ಪಣಿಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕರ ವಿದೇಶಿ ಪ್ರವಾಸ ಕೈಗೊಳ್ಳುವ ಕುರಿತಂತೆ ಮಾರ್ಗದರ್ಶಿ ಸೂತ್ರ ಸಿದ್ದಪಡಿಸುವುದಕ್ಕೆ ಸಮಿತಿ ಯೊಂದನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> ಉದ್ಯೋಗ ಖಾತ್ರಿ ಯೋಜನೆ (ಎನ್ಆರ್ಇಜಿ)ಯು ಜನರಿಗೆ ಉದ್ಯೋಗದ ಹಕ್ಕು ನೀಡುವ ಯೋಜನೆಯಾಗಿದೆ. ಆದರೆ, ಈ ಯೋಜನೆ ಅನುಷ್ಠಾನ ಪರಿಣಾಮ ಕಾರಿಯಾಗಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಗೆ ಎನ್ಆರ್ಇಜಿ ಯೋಜನೆಯ ಅಡಿ ಪ್ರಸ್ತುತ ಸಾಲಿನಲ್ಲಿ ₨175ಕೋಟಿ ರೂ. ಅನುದಾನ ಮಂಜೂರಾಗಿದೆ.<br /> <br /> ಆದರೆ, ಕೇವಲ ₨60ಕೋಟಿ ಮಾತ್ರ ಬಳಕೆ ಯಾಗಿದೆ. ಇದಕ್ಕೆ ಆಯಾ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಿಡಿಒಗಳ ನಿರ್ಲಕ್ಷ್ಯತನವೇ ಕಾರಣ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಸಭೆಯಲ್ಲಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.</p>.<p><strong>ನೂತನ ವಿವಿಗೆ ಜಾಗ</strong></p>.<p>ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಮಾನಕ್ಕಿ -ಹಾಗೂ ಇರುವಕ್ಕಿ ಗ್ರಾಮದ ಸುತ್ತಮುತ್ತ ಜಾಗ ಗುರುತಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.</p>.<p>ಕೃಷಿ ವಿವಿಗೆ 1,000 ಎಕರೆ ಜಾಗದ ಅವಶ್ಯಕತೆಯಿದ್ದು, ಆನಂದಪುರಂ ಬಳಿಯ ಮಾನಕ್ಕಿ –ಇರುವಕ್ಕಿ ಸುತ್ತಮುತ್ತಲು ಸುಮಾರು 600 ಎಕರೆ ಭೂಮಿ ಲಭ್ಯವಿದೆ. <br /> <br /> ಉಳಿದ ಭೂಮಿಯ ಲಭ್ಯತೆಯ ಕುರಿತಂತೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಪರಿಶೀಲಿಸಲಿದ್ದಾರೆ ಎಂದರು. ಕೃಷಿ ವಿ.ವಿ.ಗೆ ಗುರುತಿಸಲಾಗಿರುವ ಸ್ಥಳದಲ್ಲಿಯೇ ಸಣ್ಣ ಪ್ರಮಾಣದ ಹಳ್ಳವೊಂದಿದ್ದು, ಇದಕ್ಕೆ ಬ್ಯಾರೇಜ್ ನಿರ್ಮಿಸಿ, ವಿ.ವಿ. ಚಟುವಟಿಕೆಗಳಿಗೆ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>