<p><strong>ಬೆಂಗಳೂರು: </strong>ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆ.ಐ.ಒ.ಸಿ.ಎಲ್) ರೂ 805 ಕೋಟಿ ವೆಚ್ಚದಲ್ಲಿ ಪರಿಸರ ಪ್ರವಾಸೋದ್ಯಮ ಆರಂಭಿಸಲು ಉದ್ದೇಶಿಸಿದ್ದು, ಯೋಜನೆಗೆ ಸರ್ಕಾರದಿಂದ ತಾತ್ವಿಕ ಒಪ್ಪಿಗೆಯನ್ನೂ ಪಡೆಯಲಾಗಿದೆ ಎಂದು ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಮಲಯ್ ಚಟರ್ಜಿ ತಿಳಿಸಿದರು.<br /> <br /> ನಗರದ ಕೋರಮಂಗಲದ ಕೆ.ಐ.ಒ.ಸಿ.ಎಲ್ ಪ್ರಧಾನ ಕಚೇರಿ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕುದುರೆಮುಖದಲ್ಲಿ ಕಲ್ಪಿಸಲಾದ ಸೌಕರ್ಯಗಳ ಪ್ರಯೋಜನ ಪಡೆಯಲು ಈ ಯೋಜನೆ ರೂಪಿಸಲಾಗಿದೆ. ವಿವಿಧ ಹಂತಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದೆ' ಎಂದು ಹೇಳಿದರು.<br /> <br /> `ಕುದುರೆಮುಖದಲ್ಲಿ ಲಭ್ಯವಿರುವ 1,622 ಎಕರೆ ಪ್ರದೇಶದಲ್ಲಿ ಯೋಜನೆ ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ. 99 ವರ್ಷ ಅವಧಿಗೆ ಭೂಗುತ್ತಿಗೆಯನ್ನು ನವೀಕರಣ ಮಾಡಬೇಕು ಎಂಬ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಆದಾಯ ಸಿಗುವುದಲ್ಲದೆ, ಉದ್ಯೋಗ ಸೃಷ್ಟಿಯೂ ಆಗಲಿದೆ' ಎಂದು ವಿವರಿಸಿದರು.<br /> <br /> ಸಂಸ್ಥೆಯ ನಿರ್ದೇಶಕ (ವಾಣಿಜ್ಯ) ಎಂ.ವಿ. ಸುಬ್ಬರಾವ್, ಮುಖ್ಯ ವಿಚಕ್ಷಣಾ ಅಧಿಕಾರಿ ಶ್ರೀನಿವಾಸ ಗಲಗಲಿ, ಪ್ರಧಾನ ವ್ಯವಸ್ಥಾಪಕ (ಮಾನವ ಸಂಪನ್ಮೂಲ) ಎಸ್. ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆ.ಐ.ಒ.ಸಿ.ಎಲ್) ರೂ 805 ಕೋಟಿ ವೆಚ್ಚದಲ್ಲಿ ಪರಿಸರ ಪ್ರವಾಸೋದ್ಯಮ ಆರಂಭಿಸಲು ಉದ್ದೇಶಿಸಿದ್ದು, ಯೋಜನೆಗೆ ಸರ್ಕಾರದಿಂದ ತಾತ್ವಿಕ ಒಪ್ಪಿಗೆಯನ್ನೂ ಪಡೆಯಲಾಗಿದೆ ಎಂದು ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಮಲಯ್ ಚಟರ್ಜಿ ತಿಳಿಸಿದರು.<br /> <br /> ನಗರದ ಕೋರಮಂಗಲದ ಕೆ.ಐ.ಒ.ಸಿ.ಎಲ್ ಪ್ರಧಾನ ಕಚೇರಿ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕುದುರೆಮುಖದಲ್ಲಿ ಕಲ್ಪಿಸಲಾದ ಸೌಕರ್ಯಗಳ ಪ್ರಯೋಜನ ಪಡೆಯಲು ಈ ಯೋಜನೆ ರೂಪಿಸಲಾಗಿದೆ. ವಿವಿಧ ಹಂತಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದೆ' ಎಂದು ಹೇಳಿದರು.<br /> <br /> `ಕುದುರೆಮುಖದಲ್ಲಿ ಲಭ್ಯವಿರುವ 1,622 ಎಕರೆ ಪ್ರದೇಶದಲ್ಲಿ ಯೋಜನೆ ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ. 99 ವರ್ಷ ಅವಧಿಗೆ ಭೂಗುತ್ತಿಗೆಯನ್ನು ನವೀಕರಣ ಮಾಡಬೇಕು ಎಂಬ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಆದಾಯ ಸಿಗುವುದಲ್ಲದೆ, ಉದ್ಯೋಗ ಸೃಷ್ಟಿಯೂ ಆಗಲಿದೆ' ಎಂದು ವಿವರಿಸಿದರು.<br /> <br /> ಸಂಸ್ಥೆಯ ನಿರ್ದೇಶಕ (ವಾಣಿಜ್ಯ) ಎಂ.ವಿ. ಸುಬ್ಬರಾವ್, ಮುಖ್ಯ ವಿಚಕ್ಷಣಾ ಅಧಿಕಾರಿ ಶ್ರೀನಿವಾಸ ಗಲಗಲಿ, ಪ್ರಧಾನ ವ್ಯವಸ್ಥಾಪಕ (ಮಾನವ ಸಂಪನ್ಮೂಲ) ಎಸ್. ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>