<p><strong>ಬೆಂಗಳೂರು: </strong>ಕುದುರೆಮುಖ ಕಬ್ಬಿಣದ ಅದಿರು ಕಾರ್ಖಾನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶಕ್ಕೆ ಬಳಕೆಯಾಗಿದ್ದ 25 ಕಿ.ಮೀ. ಉದ್ದದ ಅರಣ್ಯ ಪ್ರದೇಶ ಈಗ ವನ್ಯಜೀವಿಗಳ ವಿಹಾರಕ್ಕೆ ಪುನಃ ದೊರೆಯಲಿದೆ.<br /> <br /> ಉಡುಪಿ ಬಳಿಯ ನಂದಿಕೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಿಂದ ವಿದ್ಯುತ್ ಸಾಗಿಸಲು ರಾಜ್ಯ ಸರ್ಕಾರ ಅರಣ್ಯ ಸಲಹಾ ಸಮಿತಿಯಿಂದ ಅನುಮತಿ ಕೋರಿತ್ತು. ಈ ಮಾರ್ಗ ಚಿಕ್ಕಮಗಳೂರಿನ ಬಾಳೂರು ರಾಜ್ಯ ಅರಣ್ಯ ಪ್ರದೇಶದ ಮೂಲಕ ಹಾದು ಹೋಗಲಿದೆ. ಈ ಪ್ರದೇಶದ ಒಟ್ಟು 8.3 ಕಿ.ಮೀ. ಉದ್ದದ ನಿತ್ಯಹರಿದ್ವರ್ಣದ ಕಾಡಿನ ಮೂಲಕ ಈ ಮಾರ್ಗ ಹಾದುಹೋಗಲಿದೆ.<br /> <br /> ಯೋಜನೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದ ಅರಣ್ಯ ಸಲಹಾ ಸಮಿತಿ, ಈ ಯೋಜನೆ ಅನುಷ್ಠಾನಗೊಳ್ಳುವ ಮೊದಲು, ಕೆಐಒಸಿಎಲ್ಗೆ ವಿದ್ಯುತ್ ಸಂಪರ್ಕ ನೀಡಲು ಕುದುರೆಮುಖ ರಾಷ್ಟ್ರೀಯ ಉದ್ಯಾನದ ಮೂಲಕ ಹಾದುಹೋಗಿರುವ ವಿದ್ಯುತ್ ಮಾರ್ಗವನ್ನು ತೆಗೆಯಬೇಕು ಎಂದು ಶಿಫಾರಸು ಮಾಡಿತ್ತು.<br /> <br /> ಶಿಫಾರಸಿನ ಅನ್ವಯ ಸರ್ಕಾರ, ಈ ವಿದ್ಯುತ್ ಮಾರ್ಗವನ್ನು ತೆಗೆಯುವ ಕಾರ್ಯವನ್ನು ಕಳೆದ ವಾರದಿಂದ ಆರಂಭಿಸಿದೆ. ಇದರಿಂದ ತೊಂದರೆಗೆ ಒಳಗಾಗುವ ಕುಟುಂಬಗಳಿಗೆ ಬದಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ವೈಲ್ಡ್ಲೈಫ್ ಕನ್ಸರ್ವೇಷನ್ ಸೊಸೈಟಿ ಆಫ್ ಇಂಡಿಯಾದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕುದುರೆಮುಖ ಕಬ್ಬಿಣದ ಅದಿರು ಕಾರ್ಖಾನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶಕ್ಕೆ ಬಳಕೆಯಾಗಿದ್ದ 25 ಕಿ.ಮೀ. ಉದ್ದದ ಅರಣ್ಯ ಪ್ರದೇಶ ಈಗ ವನ್ಯಜೀವಿಗಳ ವಿಹಾರಕ್ಕೆ ಪುನಃ ದೊರೆಯಲಿದೆ.<br /> <br /> ಉಡುಪಿ ಬಳಿಯ ನಂದಿಕೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಿಂದ ವಿದ್ಯುತ್ ಸಾಗಿಸಲು ರಾಜ್ಯ ಸರ್ಕಾರ ಅರಣ್ಯ ಸಲಹಾ ಸಮಿತಿಯಿಂದ ಅನುಮತಿ ಕೋರಿತ್ತು. ಈ ಮಾರ್ಗ ಚಿಕ್ಕಮಗಳೂರಿನ ಬಾಳೂರು ರಾಜ್ಯ ಅರಣ್ಯ ಪ್ರದೇಶದ ಮೂಲಕ ಹಾದು ಹೋಗಲಿದೆ. ಈ ಪ್ರದೇಶದ ಒಟ್ಟು 8.3 ಕಿ.ಮೀ. ಉದ್ದದ ನಿತ್ಯಹರಿದ್ವರ್ಣದ ಕಾಡಿನ ಮೂಲಕ ಈ ಮಾರ್ಗ ಹಾದುಹೋಗಲಿದೆ.<br /> <br /> ಯೋಜನೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದ ಅರಣ್ಯ ಸಲಹಾ ಸಮಿತಿ, ಈ ಯೋಜನೆ ಅನುಷ್ಠಾನಗೊಳ್ಳುವ ಮೊದಲು, ಕೆಐಒಸಿಎಲ್ಗೆ ವಿದ್ಯುತ್ ಸಂಪರ್ಕ ನೀಡಲು ಕುದುರೆಮುಖ ರಾಷ್ಟ್ರೀಯ ಉದ್ಯಾನದ ಮೂಲಕ ಹಾದುಹೋಗಿರುವ ವಿದ್ಯುತ್ ಮಾರ್ಗವನ್ನು ತೆಗೆಯಬೇಕು ಎಂದು ಶಿಫಾರಸು ಮಾಡಿತ್ತು.<br /> <br /> ಶಿಫಾರಸಿನ ಅನ್ವಯ ಸರ್ಕಾರ, ಈ ವಿದ್ಯುತ್ ಮಾರ್ಗವನ್ನು ತೆಗೆಯುವ ಕಾರ್ಯವನ್ನು ಕಳೆದ ವಾರದಿಂದ ಆರಂಭಿಸಿದೆ. ಇದರಿಂದ ತೊಂದರೆಗೆ ಒಳಗಾಗುವ ಕುಟುಂಬಗಳಿಗೆ ಬದಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ವೈಲ್ಡ್ಲೈಫ್ ಕನ್ಸರ್ವೇಷನ್ ಸೊಸೈಟಿ ಆಫ್ ಇಂಡಿಯಾದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>