<p><strong>ಚಿಕ್ಕಮಗಳೂರು: </strong>ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ವಾಸಿಸುತ್ತಿ ರುವ 350 ಕುಟುಂಬಗಳಿಗೆ ಪರಿಹಾರ ನೀಡಿ ಸ್ಥಳಾಂತರಿಸಲು ಕೇಂದ್ರ ಸರ್ಕಾರ 35 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಚನ್ನಪ್ಪಗೌಡ ಹೇಳಿದರು.<br /> <br /> ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರತಿ ಕುಟುಂಬಕ್ಕೆ ಗರಿಷ್ಠ 10 ಲಕ್ಷ ರೂ ಪರಿಹಾರ ದೊರಕುವ ಸಾಧ್ಯತೆ ಇದೆ. ಪರಿಹಾರದ ಮೊತ್ತ ವನ್ನು ಕುಟುಂಬ ಹೊಂದಿರುವ ಆಸ್ತಿಯನ್ನು ಆಧರಿಸಿ ನಿಗದಿಪಡಿಸಲಾಗುವುದು ಎಂದರು.<br /> <br /> ಉದ್ಯಾನದಿಂದ ಯಾವುದೇ ಕುಟುಂಬವನ್ನು ಬಲವಂತರವಾಗಿ ಹೊರಗೆ ತರುವ ಆಲೋಚನೆ ಜಿಲ್ಲಾಡಳಿತಕ್ಕೆ ಇಲ್ಲ. ಸ್ವಯಂ ಪ್ರೇರಣೆಯಿಂದ ಹೊರಗೆ ಬರಲು ಇಚ್ಛಿಸುವ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗುವುದು. ಸರ್ಕಾರ ನಗದು ಪರಿಹಾರವನ್ನು ಮಾತ್ರ ನೀಡುತ್ತದೆ. ಈ ಹಣದಿಂದ ಕುಟುಂಬಗಳು ಜಮೀನು ಖರೀದಿಸಬಹುದಾಗಿದೆ ಎಂದು ಅವರು ನುಡಿದರು.<br /> <br /> ಕುದುರೆಮುಖ ಉದ್ಯಾನ ವ್ಯಾಪ್ತಿಯಲ್ಲಿ ಸುಮಾರು 1200 ಕುಟುಂಬಗಳು ವಾಸವಾಗಿವೆ. ಸ್ವ ಇಚ್ಛೆಯಿಂದ ಹೊರಗೆ ಬರುವ ಕುಟುಂಬಗಳ ಸ್ಥಳಾಂತರದ ಬಗ್ಗೆ ಕಾರ್ಕಳ ವನ್ಯಜೀವಿ ವಿಭಾಗದ ಡಿಎಫ್ಓ ಅವರೊಂದಿಗೆ ಚರ್ಚಿಸಿದ ನಂತರ ಪ್ರಸ್ತಾವನೆ ತಯಾರಿಸ ಲಾಗುವುದು ಎಂದು ಅವರು ಮಾಹಿತಿ ನೀಡಿದರು.<br /> <br /> ಕೆಮ್ಮಣ್ಣುಗುಂಡಿ: ತರೀಕೆರೆ ತಾಲ್ಲೂಕಿನ ಕೆಮ್ಮಣ್ಣುಗುಂಡಿ ಕೃಷ್ಣರಾಜೇಂದ್ರ ಗಿರಿಧಾಮದ ಅಭಿವೃದ್ಧಿಗೆ ಕೇಂದ್ರ ಸರ್ಕಾರ 49.5 ಕೋಟಿ ರೂ ಬಿಡುಗಡೆ ಮಾಡಿದೆ. ಈ ಹಣ ಬಳಸಿ ಕೆಮ್ಮಣ್ಣುಗುಂಡಿಯಲ್ಲಿ ಪ್ರವಾಸಿಗರಿಗೆ ಹಲವು ಸೌಕರ್ಯ ಒದಗಿಸಲಾ ಗುವುದು ಎಂದು ಅವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ವಾಸಿಸುತ್ತಿ ರುವ 350 ಕುಟುಂಬಗಳಿಗೆ ಪರಿಹಾರ ನೀಡಿ ಸ್ಥಳಾಂತರಿಸಲು ಕೇಂದ್ರ ಸರ್ಕಾರ 35 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಚನ್ನಪ್ಪಗೌಡ ಹೇಳಿದರು.<br /> <br /> ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರತಿ ಕುಟುಂಬಕ್ಕೆ ಗರಿಷ್ಠ 10 ಲಕ್ಷ ರೂ ಪರಿಹಾರ ದೊರಕುವ ಸಾಧ್ಯತೆ ಇದೆ. ಪರಿಹಾರದ ಮೊತ್ತ ವನ್ನು ಕುಟುಂಬ ಹೊಂದಿರುವ ಆಸ್ತಿಯನ್ನು ಆಧರಿಸಿ ನಿಗದಿಪಡಿಸಲಾಗುವುದು ಎಂದರು.<br /> <br /> ಉದ್ಯಾನದಿಂದ ಯಾವುದೇ ಕುಟುಂಬವನ್ನು ಬಲವಂತರವಾಗಿ ಹೊರಗೆ ತರುವ ಆಲೋಚನೆ ಜಿಲ್ಲಾಡಳಿತಕ್ಕೆ ಇಲ್ಲ. ಸ್ವಯಂ ಪ್ರೇರಣೆಯಿಂದ ಹೊರಗೆ ಬರಲು ಇಚ್ಛಿಸುವ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗುವುದು. ಸರ್ಕಾರ ನಗದು ಪರಿಹಾರವನ್ನು ಮಾತ್ರ ನೀಡುತ್ತದೆ. ಈ ಹಣದಿಂದ ಕುಟುಂಬಗಳು ಜಮೀನು ಖರೀದಿಸಬಹುದಾಗಿದೆ ಎಂದು ಅವರು ನುಡಿದರು.<br /> <br /> ಕುದುರೆಮುಖ ಉದ್ಯಾನ ವ್ಯಾಪ್ತಿಯಲ್ಲಿ ಸುಮಾರು 1200 ಕುಟುಂಬಗಳು ವಾಸವಾಗಿವೆ. ಸ್ವ ಇಚ್ಛೆಯಿಂದ ಹೊರಗೆ ಬರುವ ಕುಟುಂಬಗಳ ಸ್ಥಳಾಂತರದ ಬಗ್ಗೆ ಕಾರ್ಕಳ ವನ್ಯಜೀವಿ ವಿಭಾಗದ ಡಿಎಫ್ಓ ಅವರೊಂದಿಗೆ ಚರ್ಚಿಸಿದ ನಂತರ ಪ್ರಸ್ತಾವನೆ ತಯಾರಿಸ ಲಾಗುವುದು ಎಂದು ಅವರು ಮಾಹಿತಿ ನೀಡಿದರು.<br /> <br /> ಕೆಮ್ಮಣ್ಣುಗುಂಡಿ: ತರೀಕೆರೆ ತಾಲ್ಲೂಕಿನ ಕೆಮ್ಮಣ್ಣುಗುಂಡಿ ಕೃಷ್ಣರಾಜೇಂದ್ರ ಗಿರಿಧಾಮದ ಅಭಿವೃದ್ಧಿಗೆ ಕೇಂದ್ರ ಸರ್ಕಾರ 49.5 ಕೋಟಿ ರೂ ಬಿಡುಗಡೆ ಮಾಡಿದೆ. ಈ ಹಣ ಬಳಸಿ ಕೆಮ್ಮಣ್ಣುಗುಂಡಿಯಲ್ಲಿ ಪ್ರವಾಸಿಗರಿಗೆ ಹಲವು ಸೌಕರ್ಯ ಒದಗಿಸಲಾ ಗುವುದು ಎಂದು ಅವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>