<p><strong>ಬೆಂಗಳೂರು:</strong> ಕೆಂಗೇರಿ ಹೋಬಳಿ ಹಲಗೆವಡೇರಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ 2.24 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು ಸಲ್ಲಿಕೆಯಾಗಿದೆ.<br /> <br /> ಥಣಿಸಂದ್ರ ಗ್ರಾಮದ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕುಮಾರಸ್ವಾಮಿ ವಿರುದ್ಧ ದೂರು ಸಲ್ಲಿಸಿದ್ದ ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಮಹದೇವಸ್ವಾಮಿ ಅವರೇ ಈ ದೂರನ್ನು ಸಲ್ಲಿಸಿದ್ದಾರೆ.<br /> <br /> ಗುರುವಾರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ಎದುರು ಹಾಜರಾದ ಅವರು, ಖಾಸಗಿ ದೂರು ಸಲ್ಲಿಸಿದರು. ದೂರನ್ನು ಅಂಗೀಕರಿಸುವ ಸಂಬಂಧ ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಪ್ರಕಟಿಸಿದರು.<br /> <br /> <strong>ದೂರಿನಲ್ಲಿರುವ ಆರೋಪ: </strong>ಬನಶಂಕರಿ ಐದನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1995ರಲ್ಲಿ ಹಲಗೆವಡೇರಹಳ್ಳಿಯ ಸರ್ವೆ ನಂಬರ್ 128ರ 1.10 ಎಕರೆ ಮತ್ತು ಸರ್ವೆ ನಂಬರ್ 137ರ 1.14 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಕ್ಕೆ ಅರ್ಜಿ ಸಲ್ಲಿಸುವ ಮುನ್ನವೇ ಭೂಮಿಯ ಮಾಲೀಕರಾದ ಪದ್ಮಾ, ಶ್ರೀದೇವಿ ಮತ್ತು ಚೇತನ್ಕುಮಾರ್ ಅವರು ಶಾಂತಮ್ಮ ಹಾಗೂ ರೇಖಾ ಚಂದ್ರಶೇಖರ್ ಎಂಬುವರಿಗೆ ಮಾರಾಟ ಮಾಡಿದ್ದರು.<br /> <br /> 2004ರಲ್ಲಿ ಭೂಮಿ ಮಾರಿ, 2005ರಲ್ಲಿ ಈ 2.24 ಎಕರೆ ಭೂಮಿಯನ್ನೂ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿದ್ದರು. <br /> <br /> ಆ ಬಳಿಕ ಶಾಂತಮ್ಮ ಮತ್ತು ರೇಖಾ ಅವರು ಇತರೆ ಎಂಟು ಜನರಿಗೆ ಭೂಮಿಯನ್ನು ಮಾರಿದರು. ಈ ಎಂಟು ಜನರು ನಾಲ್ಕು ರಿಯಲ್ ಎಸ್ಟೇಟ್ ಕಂಪೆನಿಗಳನ್ನು ಸ್ಥಾಪಿಸಿ, ಅವುಗಳ ಹೆಸರಿಗೆ ಭೂಮಿಯನ್ನು ವರ್ಗಾಯಿಸಿದ್ದಾರೆ.<br /> <br /> ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕಡತವನ್ನು ಮೂರು ಬಾರಿ ವಾಪಸ್ ಕಳುಹಿಸಲಾಯಿತು. ಮತ್ತೊಮ್ಮೆ ಈ ಪ್ರಕರಣದಲ್ಲಿ ಅರ್ಜಿದಾರರ ಬೇಡಿಕೆಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂಬ ತೀರ್ಮಾನದೊಂದಿಗೆ, ಕಡತವನ್ನು ಮುಕ್ತಾಯಗೊಳಿಸಲಾಯಿತು. <br /> <br /> ಆದರೆ, 2007ರ ಸೆಪ್ಟೆಂಬರ್ 25ರಂದು ದಿಢೀರನೆ ಕಡತ ವಾಪಸ್ ತರಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ, ಅರ್ಜಿದಾರರ ಪರವಾಗಿ ಆದೇಶ ಹೊರಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.<br /> <br /> `ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ 12 ದಿನಗಳ ಮುನ್ನ ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವ ಆದೇಶ ಹೊರಡಿಸಿದ್ದರು. ಅವರು ವೈಯಕ್ತಿಕ ಲಾಭಕ್ಕಾಗಿ ಇಂತಹ ಕ್ರಮ ಕೈಗೊಂಡಿದ್ದರು. ಭೂಮಿಯ ಮೂಲ ಮಾಲೀಕರು ಇಂತಹ ಸಂಚು ರೂಪಿಸಿ, ಮೊದಲೇ ಈ ಭೂಮಿಯನ್ನು ಮಾರಿದ್ದರು. ಇದರಿಂದ ಸರ್ಕಾರಕ್ಕೆ ಅಪಾರ ನಷ್ಟ ಉಂಟಾಗಿದೆ~ ಎಂದು ದೂರಿದ್ದಾರೆ.<br /> <br /> ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ, ಭೂ ಪರಭಾರೆ ನಿಯಂತ್ರಣ ಕಾಯ್ದೆಗಳ ವಿವಿಧ ಕಲಮುಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಹದೇವಸ್ವಾಮಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಂಗೇರಿ ಹೋಬಳಿ ಹಲಗೆವಡೇರಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ 2.24 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು ಸಲ್ಲಿಕೆಯಾಗಿದೆ.<br /> <br /> ಥಣಿಸಂದ್ರ ಗ್ರಾಮದ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕುಮಾರಸ್ವಾಮಿ ವಿರುದ್ಧ ದೂರು ಸಲ್ಲಿಸಿದ್ದ ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಮಹದೇವಸ್ವಾಮಿ ಅವರೇ ಈ ದೂರನ್ನು ಸಲ್ಲಿಸಿದ್ದಾರೆ.<br /> <br /> ಗುರುವಾರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ಎದುರು ಹಾಜರಾದ ಅವರು, ಖಾಸಗಿ ದೂರು ಸಲ್ಲಿಸಿದರು. ದೂರನ್ನು ಅಂಗೀಕರಿಸುವ ಸಂಬಂಧ ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಪ್ರಕಟಿಸಿದರು.<br /> <br /> <strong>ದೂರಿನಲ್ಲಿರುವ ಆರೋಪ: </strong>ಬನಶಂಕರಿ ಐದನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1995ರಲ್ಲಿ ಹಲಗೆವಡೇರಹಳ್ಳಿಯ ಸರ್ವೆ ನಂಬರ್ 128ರ 1.10 ಎಕರೆ ಮತ್ತು ಸರ್ವೆ ನಂಬರ್ 137ರ 1.14 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಕ್ಕೆ ಅರ್ಜಿ ಸಲ್ಲಿಸುವ ಮುನ್ನವೇ ಭೂಮಿಯ ಮಾಲೀಕರಾದ ಪದ್ಮಾ, ಶ್ರೀದೇವಿ ಮತ್ತು ಚೇತನ್ಕುಮಾರ್ ಅವರು ಶಾಂತಮ್ಮ ಹಾಗೂ ರೇಖಾ ಚಂದ್ರಶೇಖರ್ ಎಂಬುವರಿಗೆ ಮಾರಾಟ ಮಾಡಿದ್ದರು.<br /> <br /> 2004ರಲ್ಲಿ ಭೂಮಿ ಮಾರಿ, 2005ರಲ್ಲಿ ಈ 2.24 ಎಕರೆ ಭೂಮಿಯನ್ನೂ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿದ್ದರು. <br /> <br /> ಆ ಬಳಿಕ ಶಾಂತಮ್ಮ ಮತ್ತು ರೇಖಾ ಅವರು ಇತರೆ ಎಂಟು ಜನರಿಗೆ ಭೂಮಿಯನ್ನು ಮಾರಿದರು. ಈ ಎಂಟು ಜನರು ನಾಲ್ಕು ರಿಯಲ್ ಎಸ್ಟೇಟ್ ಕಂಪೆನಿಗಳನ್ನು ಸ್ಥಾಪಿಸಿ, ಅವುಗಳ ಹೆಸರಿಗೆ ಭೂಮಿಯನ್ನು ವರ್ಗಾಯಿಸಿದ್ದಾರೆ.<br /> <br /> ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕಡತವನ್ನು ಮೂರು ಬಾರಿ ವಾಪಸ್ ಕಳುಹಿಸಲಾಯಿತು. ಮತ್ತೊಮ್ಮೆ ಈ ಪ್ರಕರಣದಲ್ಲಿ ಅರ್ಜಿದಾರರ ಬೇಡಿಕೆಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂಬ ತೀರ್ಮಾನದೊಂದಿಗೆ, ಕಡತವನ್ನು ಮುಕ್ತಾಯಗೊಳಿಸಲಾಯಿತು. <br /> <br /> ಆದರೆ, 2007ರ ಸೆಪ್ಟೆಂಬರ್ 25ರಂದು ದಿಢೀರನೆ ಕಡತ ವಾಪಸ್ ತರಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ, ಅರ್ಜಿದಾರರ ಪರವಾಗಿ ಆದೇಶ ಹೊರಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.<br /> <br /> `ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ 12 ದಿನಗಳ ಮುನ್ನ ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವ ಆದೇಶ ಹೊರಡಿಸಿದ್ದರು. ಅವರು ವೈಯಕ್ತಿಕ ಲಾಭಕ್ಕಾಗಿ ಇಂತಹ ಕ್ರಮ ಕೈಗೊಂಡಿದ್ದರು. ಭೂಮಿಯ ಮೂಲ ಮಾಲೀಕರು ಇಂತಹ ಸಂಚು ರೂಪಿಸಿ, ಮೊದಲೇ ಈ ಭೂಮಿಯನ್ನು ಮಾರಿದ್ದರು. ಇದರಿಂದ ಸರ್ಕಾರಕ್ಕೆ ಅಪಾರ ನಷ್ಟ ಉಂಟಾಗಿದೆ~ ಎಂದು ದೂರಿದ್ದಾರೆ.<br /> <br /> ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ, ಭೂ ಪರಭಾರೆ ನಿಯಂತ್ರಣ ಕಾಯ್ದೆಗಳ ವಿವಿಧ ಕಲಮುಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಹದೇವಸ್ವಾಮಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>