<p>ಗೌರಿಬಿದನೂರು: ಭೀಕರ ಬರಗಾಲ ಮತ್ತು ಇತರ ಕಾರಣಗಳಿಂದಾಗಿ ಕೆಲ ಕುರಿಗಳು ಸಾವನ್ನಪ್ಪುತ್ತಿದ್ದರೆ, ಇನ್ನೂ ಕೆಲ ಮೇಕೆಗಳು ಅಪೌಷ್ಟಿಕತೆಯಿಂದ ಬಳಲುತ್ತಿವೆ. ಕೃಷಿಯನ್ನು ಬಿಟ್ಟು ಕುರಿ ಸಾಕಾಣಿಕೆಯನ್ನೇ ಅವಲಂಬಿಸಿದ್ದ ಬಹುತೇಕ ಮಂದಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.<br /> <br /> ಸರ್ಕಾರ ಕೂಡಲೇ ಕಾರ್ಯಪ್ರವೃತ್ತಗೊಂಡು ಕುರಿ ಸಾಕಾಣಿಕೆದಾರರ ಸಮಸ್ಯೆ ಯನ್ನು ಪರಿಹರಿಸದಿದ್ದಲ್ಲಿ, ಗಂಭೀರ ಪರಿಸ್ಥಿತಿಗೆ ತುತ್ತಾಗ ಬೇಕಾಗುತ್ತದೆ ಎಂದು ತಾಲ್ಲೂಕು ಮೇಕೆ ಮತ್ತು ಕುರಿ ಸಾಕಾಣಿಕೆದಾರರ ಸಂಘದ ಅಧ್ಯಕ್ಷ ನಂಜೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> `ಕೆಲ ತಿಂಗಳು ಹಿಂದೆಯಷ್ಟೇ ನಬಾರ್ಡ್ ಮತ್ತು ಸರ್ಕಾರ ಕುರಿ ಸಾಕಾಣಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದವು. ಆರ್ಥಿಕ ನೆರವನ್ನೂ ಸಹ ನೀಡಲಾಗಿತ್ತು. ಆದರೆ ಈಗಿನ ಬರಗಾಲದಲ್ಲಿ ನೀರಿಲ್ಲದೇ ಮತ್ತು ಪೌಷ್ಟಿಕ ಆಹಾರವೂ ಇಲ್ಲದೇ ಕುರಿ ಮತ್ತು ಮೇಕೆಗಳು ಅಪೌಷ್ಟಿಕತೆಗೆ ತುತ್ತಾಗುತ್ತಿವೆ.<br /> <br /> ಏನೂ ಇಲ್ಲದೇ ನಿತ್ರಾಣಗೊಳ್ಳುವ ಕುರಿ ಮತ್ತು ಮೇಕೆಗಳು ಸಾವನ್ನಪ್ಪುತ್ತಿವೆ. ಕುರಿಗಳು ಹೀಗೆ ಸಾವನ್ನಪ್ಪುತ್ತಿದ್ದರೆ, ಕುರಿ ಮತ್ತು ಮೇಕೆ ಸಾಕಾಣಿಕೆ ಕಸುಬನ್ನು ಮುಂದುವರೆಸುವುದು ಹೇಗೆ~ ಎಂದು ಅವರು ಪ್ರಶ್ನಿಸಿದ್ದಾರೆ.<br /> <br /> `ಬರಗಾಲ ಮತ್ತು ಬೇರೆ ಬೇರೆ ಕಾರಣಗಳಿಂದ ಕುರಿ ಸಾಕಾಣಿಕೆ ಫಾರ್ಮಗಳನ್ನು ಮುಚ್ಚಲಾಗುತ್ತಿದೆ. ಆರ್ಥಿಕ ನಷ್ಟಕ್ಕೆ ತುತ್ತಾಗುತ್ತಿರುವ ರೈತರು ದಿಕ್ಕು ತೋಚದೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಯಲ್ಲಿದ್ದಾರೆ.<br /> <br /> ಕುರಿ ಸಾಕಾಣಿಕೆ ದಾರರ ಸ್ಥಿತಿಯನ್ನರಿತು ಬ್ಯಾಂಕುಗಳು ಅವರ ಸಾಲ ಮನ್ನಾ ಮಾಡಬೇಕು~ ಎಂದು ಸಂಘದ ಕಾರ್ಯದರ್ಶಿ ನವೀನ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಭೀಕರ ಬರಗಾಲ ಮತ್ತು ಇತರ ಕಾರಣಗಳಿಂದಾಗಿ ಕೆಲ ಕುರಿಗಳು ಸಾವನ್ನಪ್ಪುತ್ತಿದ್ದರೆ, ಇನ್ನೂ ಕೆಲ ಮೇಕೆಗಳು ಅಪೌಷ್ಟಿಕತೆಯಿಂದ ಬಳಲುತ್ತಿವೆ. ಕೃಷಿಯನ್ನು ಬಿಟ್ಟು ಕುರಿ ಸಾಕಾಣಿಕೆಯನ್ನೇ ಅವಲಂಬಿಸಿದ್ದ ಬಹುತೇಕ ಮಂದಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.<br /> <br /> ಸರ್ಕಾರ ಕೂಡಲೇ ಕಾರ್ಯಪ್ರವೃತ್ತಗೊಂಡು ಕುರಿ ಸಾಕಾಣಿಕೆದಾರರ ಸಮಸ್ಯೆ ಯನ್ನು ಪರಿಹರಿಸದಿದ್ದಲ್ಲಿ, ಗಂಭೀರ ಪರಿಸ್ಥಿತಿಗೆ ತುತ್ತಾಗ ಬೇಕಾಗುತ್ತದೆ ಎಂದು ತಾಲ್ಲೂಕು ಮೇಕೆ ಮತ್ತು ಕುರಿ ಸಾಕಾಣಿಕೆದಾರರ ಸಂಘದ ಅಧ್ಯಕ್ಷ ನಂಜೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> `ಕೆಲ ತಿಂಗಳು ಹಿಂದೆಯಷ್ಟೇ ನಬಾರ್ಡ್ ಮತ್ತು ಸರ್ಕಾರ ಕುರಿ ಸಾಕಾಣಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದವು. ಆರ್ಥಿಕ ನೆರವನ್ನೂ ಸಹ ನೀಡಲಾಗಿತ್ತು. ಆದರೆ ಈಗಿನ ಬರಗಾಲದಲ್ಲಿ ನೀರಿಲ್ಲದೇ ಮತ್ತು ಪೌಷ್ಟಿಕ ಆಹಾರವೂ ಇಲ್ಲದೇ ಕುರಿ ಮತ್ತು ಮೇಕೆಗಳು ಅಪೌಷ್ಟಿಕತೆಗೆ ತುತ್ತಾಗುತ್ತಿವೆ.<br /> <br /> ಏನೂ ಇಲ್ಲದೇ ನಿತ್ರಾಣಗೊಳ್ಳುವ ಕುರಿ ಮತ್ತು ಮೇಕೆಗಳು ಸಾವನ್ನಪ್ಪುತ್ತಿವೆ. ಕುರಿಗಳು ಹೀಗೆ ಸಾವನ್ನಪ್ಪುತ್ತಿದ್ದರೆ, ಕುರಿ ಮತ್ತು ಮೇಕೆ ಸಾಕಾಣಿಕೆ ಕಸುಬನ್ನು ಮುಂದುವರೆಸುವುದು ಹೇಗೆ~ ಎಂದು ಅವರು ಪ್ರಶ್ನಿಸಿದ್ದಾರೆ.<br /> <br /> `ಬರಗಾಲ ಮತ್ತು ಬೇರೆ ಬೇರೆ ಕಾರಣಗಳಿಂದ ಕುರಿ ಸಾಕಾಣಿಕೆ ಫಾರ್ಮಗಳನ್ನು ಮುಚ್ಚಲಾಗುತ್ತಿದೆ. ಆರ್ಥಿಕ ನಷ್ಟಕ್ಕೆ ತುತ್ತಾಗುತ್ತಿರುವ ರೈತರು ದಿಕ್ಕು ತೋಚದೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಯಲ್ಲಿದ್ದಾರೆ.<br /> <br /> ಕುರಿ ಸಾಕಾಣಿಕೆ ದಾರರ ಸ್ಥಿತಿಯನ್ನರಿತು ಬ್ಯಾಂಕುಗಳು ಅವರ ಸಾಲ ಮನ್ನಾ ಮಾಡಬೇಕು~ ಎಂದು ಸಂಘದ ಕಾರ್ಯದರ್ಶಿ ನವೀನ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>