<p><span style="font-size: 26px;"><strong>ವಿಜಾಪುರ: </strong>`ಮಹಾರಾಷ್ಟ್ರದಲ್ಲಿ ಅಂಬೇಡ್ಕರ್ಮತ್ತು ಕರ್ನಾಟಕದಲ್ಲಿ ಬಸವಣ್ಣನವರು ಸಮಾನತೆಗೆ ಸಾಕಷ್ಟು ಶ್ರಮಿಸಿದ್ದಾರೆ. ಅಂತಹ ನೆಲದ ನಾವು ಸಾಮರಸ್ಯದಿಂದ ಬದುಕಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</span><br /> <br /> ಮಹಾರಾಷ್ಟ್ರದ ಸೋಲಾಪುರದಲ್ಲಿ ಅಲ್ಲಿಯ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಭಾನುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.<br /> <br /> `ಇತರ ರಾಜ್ಯಗಳಲ್ಲಿ ಧನಗರ ಎಂದು ಕರೆಯುವ ಕುರುಬ ಸಮಾಜದಿಂದ ಮುಖ್ಯಮಂತ್ರಿ ಹುದ್ದೆಗೆ ಏರಿದ ದೇಶದ ಮೊದಲ ವ್ಯಕ್ತಿ ನಾನು. ಇಂತಹ ಹಿಂದುಳಿದ ಜಾತಿಗಳಿಗೂ ಪ್ರಾತಿನಿಧ್ಯ ನೀಡಿದ್ದು ಕಾಂಗ್ರೆಸ್ ಪಕ್ಷ ಮಾತ್ರ. <br /> <br /> ಕರ್ನಾಟಕದಲ್ಲಿ ವೀರಪ್ಪ ಮೊಯ್ಲಿ, ಧರ್ಮಸಿಂಗ್, ಎಸ್.ಬಂಗಾರಪ್ಪ ಮತ್ತು ಮಹಾರಾಷ್ಟ್ರದಲ್ಲಿ ಸುಶೀಲ್ಕುಮಾರ ಶಿಂಧೆ ಅವರು ಮುಖ್ಯಮಂತ್ರಿ ಆಗಿದ್ದು ಇದಕ್ಕೆ ನಿದರ್ಶನ' ಎಂದರು.<br /> <br /> `ದೇಶದ ಭದ್ರತೆ ಮತ್ತು ಜಾತ್ಯತೀತ ವ್ಯವಸ್ಥೆಯ ರಕ್ಷಣೆ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ನಾನು ಮೂಲತಃ ಕಾಂಗ್ರೆಸ್ಸಿಗನಲ್ಲ. ಸಮಾಜವಾದಿ ಹಿನ್ನೆಲೆಯ ನಾನು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ 2007ರಲ್ಲಿ ಕಾಂಗ್ರೆಸ್ ಸೇರಿದೆ. ಪಕ್ಷದ ಹೈಕಮಾಂಡ್ ನನಗೆ ಅತ್ಯುನ್ನತ ಹುದ್ದೆ ನೀಡಿದೆ' ಎಂದು ಹೇಳಿದರು.<br /> <br /> `ಬಡವ-ಬಲ್ಲಿದ, ಜಾತಿ ತಾರತಮ್ಯ ಇಲ್ಲದ ಸಮಾನತೆಯ ಸಮಾಜ ನಿರ್ಮಿಸುವ ಮೂಲಕ ದೇಶದಲ್ಲಿ ಪರಿವರ್ತನೆ ತರಲು ಕಾಂಗ್ರೆಸ್ ಮುಂದಾಗಿದೆ. ಹಿಂದುಳಿದ ವರ್ಗದವರಿಗೆ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ನೀಡಿ ಅವರ ಅಭ್ಯುದಯಕ್ಕೆ ನಾಂದಿ ಹಾಡಿದ್ದೇ ಕಾಂಗ್ರೆಸ್' ಎಂದು ಸ್ಮರಸಿದರು.<br /> <br /> ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಶಾಸಕರಾದ ರಾಜು ಆಲಗೂರ, ಎಂ.ಎಂ. ಬಾಗವಾನ, ರೇವಣ್ಣ, ಮಹಾರಾಷ್ಟ್ರದ ಸಚಿವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ವಿಜಾಪುರ: </strong>`ಮಹಾರಾಷ್ಟ್ರದಲ್ಲಿ ಅಂಬೇಡ್ಕರ್ಮತ್ತು ಕರ್ನಾಟಕದಲ್ಲಿ ಬಸವಣ್ಣನವರು ಸಮಾನತೆಗೆ ಸಾಕಷ್ಟು ಶ್ರಮಿಸಿದ್ದಾರೆ. ಅಂತಹ ನೆಲದ ನಾವು ಸಾಮರಸ್ಯದಿಂದ ಬದುಕಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</span><br /> <br /> ಮಹಾರಾಷ್ಟ್ರದ ಸೋಲಾಪುರದಲ್ಲಿ ಅಲ್ಲಿಯ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಭಾನುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.<br /> <br /> `ಇತರ ರಾಜ್ಯಗಳಲ್ಲಿ ಧನಗರ ಎಂದು ಕರೆಯುವ ಕುರುಬ ಸಮಾಜದಿಂದ ಮುಖ್ಯಮಂತ್ರಿ ಹುದ್ದೆಗೆ ಏರಿದ ದೇಶದ ಮೊದಲ ವ್ಯಕ್ತಿ ನಾನು. ಇಂತಹ ಹಿಂದುಳಿದ ಜಾತಿಗಳಿಗೂ ಪ್ರಾತಿನಿಧ್ಯ ನೀಡಿದ್ದು ಕಾಂಗ್ರೆಸ್ ಪಕ್ಷ ಮಾತ್ರ. <br /> <br /> ಕರ್ನಾಟಕದಲ್ಲಿ ವೀರಪ್ಪ ಮೊಯ್ಲಿ, ಧರ್ಮಸಿಂಗ್, ಎಸ್.ಬಂಗಾರಪ್ಪ ಮತ್ತು ಮಹಾರಾಷ್ಟ್ರದಲ್ಲಿ ಸುಶೀಲ್ಕುಮಾರ ಶಿಂಧೆ ಅವರು ಮುಖ್ಯಮಂತ್ರಿ ಆಗಿದ್ದು ಇದಕ್ಕೆ ನಿದರ್ಶನ' ಎಂದರು.<br /> <br /> `ದೇಶದ ಭದ್ರತೆ ಮತ್ತು ಜಾತ್ಯತೀತ ವ್ಯವಸ್ಥೆಯ ರಕ್ಷಣೆ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ನಾನು ಮೂಲತಃ ಕಾಂಗ್ರೆಸ್ಸಿಗನಲ್ಲ. ಸಮಾಜವಾದಿ ಹಿನ್ನೆಲೆಯ ನಾನು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ 2007ರಲ್ಲಿ ಕಾಂಗ್ರೆಸ್ ಸೇರಿದೆ. ಪಕ್ಷದ ಹೈಕಮಾಂಡ್ ನನಗೆ ಅತ್ಯುನ್ನತ ಹುದ್ದೆ ನೀಡಿದೆ' ಎಂದು ಹೇಳಿದರು.<br /> <br /> `ಬಡವ-ಬಲ್ಲಿದ, ಜಾತಿ ತಾರತಮ್ಯ ಇಲ್ಲದ ಸಮಾನತೆಯ ಸಮಾಜ ನಿರ್ಮಿಸುವ ಮೂಲಕ ದೇಶದಲ್ಲಿ ಪರಿವರ್ತನೆ ತರಲು ಕಾಂಗ್ರೆಸ್ ಮುಂದಾಗಿದೆ. ಹಿಂದುಳಿದ ವರ್ಗದವರಿಗೆ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ನೀಡಿ ಅವರ ಅಭ್ಯುದಯಕ್ಕೆ ನಾಂದಿ ಹಾಡಿದ್ದೇ ಕಾಂಗ್ರೆಸ್' ಎಂದು ಸ್ಮರಸಿದರು.<br /> <br /> ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಶಾಸಕರಾದ ರಾಜು ಆಲಗೂರ, ಎಂ.ಎಂ. ಬಾಗವಾನ, ರೇವಣ್ಣ, ಮಹಾರಾಷ್ಟ್ರದ ಸಚಿವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>