<p>ಚಿಕ್ಕಮಗಳೂರು: ತಾಲ್ಲೂಕಿನ ಕುರುವಂಗಿ ಕ್ಷೇತ್ರದಲ್ಲಿ ಮಳೆಯಿಲ್ಲದೆ ಬೆಳೆಹಾನಿಯಾದ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯಾ ರಂಗನಾಥ್ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. <br /> <br /> ಸಂಕಷ್ಟಕ್ಕೆ ಒಳಗಾಗಿರುವ ರೈತರ ಸಮಸ್ಯೆಗಳನ್ನು ಅವರು ಆಲಿಸಿದರು. ಈ ಭಾಗದಲ್ಲಿ 700 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಆಲೂಗಡ್ಡೆ, ಬಟಾಣಿ, ತಿಂಗಳವರೆ, ಹುರುಳಿ, ಕೋಸು ಸೇರಿದಂತೆ ವಿವಿಧ ಬೆಳೆ ಬಿತ್ತನೆ ಮಾಡಿದ್ದರು. ಎಲ್ಲ ಬೆಳೆಗಳು ನಾಶವಾಗಿವೆ. <br /> <br /> ಕರ್ತಿಕೆರೆ, ತೇಗೂರು, ಬೀಕನಹಳ್ಳಿ ಭಾಗದಲ್ಲಿ ರೈತರು ಮಳೆ ಆಶ್ರಯಿಸಿ ಆಲೂಗಡ್ಡೆ ಬಿತ್ತಿದ್ದಾರೆ. ಕೃಷಿಗೆ ಬಂಡವಾಳ ಹೊಂದಿಸಿಕೊಳ್ಳಲು ಚಿನ್ನಾಭರಣ ಅಡವಿಟ್ಟು ಸಾಲ ತಂದಿದ್ದಾರೆ. ಈಗ ಎಲ್ಲವೂ ಮಣ್ಣುಪಾಲಾಗಿದೆ.<br /> <br /> ಶೇ 10 ರಿಂದ 15ರಷ್ಟು ರೈತರು ಮಾತ್ರ ನೀರಾವರಿ ಸೌಲಭ್ಯ ಹೊಂದಿದ್ದು, ಉಳಿದಂತೆ ಶೇ 85ರಷ್ಟು ರೈತರು ಮಳೆ ಇಲ್ಲದೆ ಬೆಳೆ ಕಳೆದುಕೊಂಡಿದ್ದಾರೆ ಎಂದು ರೈತರು ಸಮಸ್ಯೆ ವಿವರಿಸಿದರು.<br /> <br /> ತಾಲ್ಲೂಕಿನಲ್ಲಿ 1500 ಹೆಕ್ಟೇರ್ ಪ್ರದೇಶ ವಾಡಿಕೆ ವಿಸ್ತೀರ್ಣವಿದ್ದು, 750 ಹೆಕ್ಟೇರ್ ಪ್ರದೇಶದಲ್ಲಿ ಮಳೆ ನಂಬಿ ಬಿತ್ತನೆ ಮಾಡಲಾಗಿದೆ. ಇದರಲ್ಲಿ ಶೇ 20 ಭಾಗ ನೀರಾವರಿ ಜಮೀನಿದ್ದು, ಬೆಳೆ ಸ್ವಲ್ಪ ಸುಸ್ಥಿತಿಯಲ್ಲಿದೆ. ಉಳಿದ ಬೆಳೆಗಳು ಒಣಗಿ ಹಿಡುವಳಿಯೇ ಇಲ್ಲದಂತಾಗಿದೆ ಎಂದರು.<br /> <br /> ಸಿಡಿಎ ಮಾಜಿ ಅಧ್ಯಕ್ಷ ಸಿ.ಎಸ್.ರಂಗನಾಥ್, ತಾ.ಪಂ. ಮಾಜಿ ಅಧ್ಯಕ್ಷ ಕನಕರಾಜ್, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಉಮೇಶ್, ಸದಸ್ಯ ಕೆ.ಪಿ.ನಾಗರಾಜ್, ಪಾಂಡುರಂಗ ಶೆಟ್ಟಿ, ಚನ್ನೇಗೌಡ, ಶೇಖರಪ್ಪ ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ತಾಲ್ಲೂಕಿನ ಕುರುವಂಗಿ ಕ್ಷೇತ್ರದಲ್ಲಿ ಮಳೆಯಿಲ್ಲದೆ ಬೆಳೆಹಾನಿಯಾದ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯಾ ರಂಗನಾಥ್ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. <br /> <br /> ಸಂಕಷ್ಟಕ್ಕೆ ಒಳಗಾಗಿರುವ ರೈತರ ಸಮಸ್ಯೆಗಳನ್ನು ಅವರು ಆಲಿಸಿದರು. ಈ ಭಾಗದಲ್ಲಿ 700 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಆಲೂಗಡ್ಡೆ, ಬಟಾಣಿ, ತಿಂಗಳವರೆ, ಹುರುಳಿ, ಕೋಸು ಸೇರಿದಂತೆ ವಿವಿಧ ಬೆಳೆ ಬಿತ್ತನೆ ಮಾಡಿದ್ದರು. ಎಲ್ಲ ಬೆಳೆಗಳು ನಾಶವಾಗಿವೆ. <br /> <br /> ಕರ್ತಿಕೆರೆ, ತೇಗೂರು, ಬೀಕನಹಳ್ಳಿ ಭಾಗದಲ್ಲಿ ರೈತರು ಮಳೆ ಆಶ್ರಯಿಸಿ ಆಲೂಗಡ್ಡೆ ಬಿತ್ತಿದ್ದಾರೆ. ಕೃಷಿಗೆ ಬಂಡವಾಳ ಹೊಂದಿಸಿಕೊಳ್ಳಲು ಚಿನ್ನಾಭರಣ ಅಡವಿಟ್ಟು ಸಾಲ ತಂದಿದ್ದಾರೆ. ಈಗ ಎಲ್ಲವೂ ಮಣ್ಣುಪಾಲಾಗಿದೆ.<br /> <br /> ಶೇ 10 ರಿಂದ 15ರಷ್ಟು ರೈತರು ಮಾತ್ರ ನೀರಾವರಿ ಸೌಲಭ್ಯ ಹೊಂದಿದ್ದು, ಉಳಿದಂತೆ ಶೇ 85ರಷ್ಟು ರೈತರು ಮಳೆ ಇಲ್ಲದೆ ಬೆಳೆ ಕಳೆದುಕೊಂಡಿದ್ದಾರೆ ಎಂದು ರೈತರು ಸಮಸ್ಯೆ ವಿವರಿಸಿದರು.<br /> <br /> ತಾಲ್ಲೂಕಿನಲ್ಲಿ 1500 ಹೆಕ್ಟೇರ್ ಪ್ರದೇಶ ವಾಡಿಕೆ ವಿಸ್ತೀರ್ಣವಿದ್ದು, 750 ಹೆಕ್ಟೇರ್ ಪ್ರದೇಶದಲ್ಲಿ ಮಳೆ ನಂಬಿ ಬಿತ್ತನೆ ಮಾಡಲಾಗಿದೆ. ಇದರಲ್ಲಿ ಶೇ 20 ಭಾಗ ನೀರಾವರಿ ಜಮೀನಿದ್ದು, ಬೆಳೆ ಸ್ವಲ್ಪ ಸುಸ್ಥಿತಿಯಲ್ಲಿದೆ. ಉಳಿದ ಬೆಳೆಗಳು ಒಣಗಿ ಹಿಡುವಳಿಯೇ ಇಲ್ಲದಂತಾಗಿದೆ ಎಂದರು.<br /> <br /> ಸಿಡಿಎ ಮಾಜಿ ಅಧ್ಯಕ್ಷ ಸಿ.ಎಸ್.ರಂಗನಾಥ್, ತಾ.ಪಂ. ಮಾಜಿ ಅಧ್ಯಕ್ಷ ಕನಕರಾಜ್, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಉಮೇಶ್, ಸದಸ್ಯ ಕೆ.ಪಿ.ನಾಗರಾಜ್, ಪಾಂಡುರಂಗ ಶೆಟ್ಟಿ, ಚನ್ನೇಗೌಡ, ಶೇಖರಪ್ಪ ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>