<p><strong>ಬೆಂಗಳೂರು:</strong> ರಾಜ್ಯದಲ್ಲಿ ‘ಆಪರೇಷನ್ ಕಮಲ’ ಎಲ್ಲಿಯವರೆಗೆ ನಡೆಯುತ್ತದೆ ಎಂಬ ವಿರೋಧ ಪಕ್ಷಗಳ ಪ್ರಶ್ನೆಗೆ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಂಗಳವಾರ ಉತ್ತರ ನೀಡಿದ್ದಾರೆ!<br /> <br /> ಪ್ರೇರಣಾ ಶೈಕ್ಷಣಿಕ ಟ್ರಸ್ಟ್ಗೆ ಬಂದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಕುರಿತು ಪರಿಷತ್ತಿನಲ್ಲಿ ನಿಯಮ 68ರ ಅಡಿ ಕಾಂಗ್ರೆಸ್ನ ವಿ.ಆರ್. ಸುದರ್ಶನ್ ಚರ್ಚೆ ಆರಂಭಿಸಿದಾಗ ಬಿಜೆಪಿಯ ಭಾರತಿ ಶೆಟ್ಟಿ ಮತ್ತು ಇತರ ಸದಸ್ಯರು ಮುಖ್ಯಮಂತ್ರಿಗಳ ಪರವಾಗಿ ವಾದಿಸಿದರು.<br /> <br /> ‘ಮುಖ್ಯಮಂತ್ರಿಗಳು ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಘೋಷಿಸಿರುವುದರಿಂದ ಇಷ್ಟೊಂದು ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರು ಅವರನ್ನು ಸಮರ್ಥಿಸಿಕೊಂಡು ಮಾತನಾಡುತ್ತಿದ್ದಾರೆ’ ಎಂದು ಸುದರ್ಶನ್ ಆಡಳಿತ ಪಕ್ಷದ ಸದಸ್ಯರನ್ನು ಛೇಡಿಸಿದರು.<br /> <br /> ಮಧ್ಯಪ್ರವೇಶಿಸಿದ ಜೆಡಿಎಸ್ನ ಎಂ.ಸಿ. ನಾಣಯ್ಯ, ‘ಮುಖ್ಯಮಂತ್ರಿಗಳು ಸದ್ಯಕ್ಕಂತೂ ಸಂಪುಟ ವಿಸ್ತರಣೆ ಮಾಡಲ್ಲ, ಉಪಚುನಾವಣೆಗಳು ಮುಗಿಯಲಿ ಎಂದು ದಿನ ದೂಡುತ್ತಾರೆ’ ಎಂದು ವ್ಯಂಗ್ಯವಾಡಿದರು.<br /> <br /> ಆಗ ಸುದರ್ಶನ್, ‘ಈ ಆಪರೇಷನ್ ಕಮಲ, ಉಪಚುನಾವಣೆಗಳು ಎಷ್ಟು ದಿನ’ ಎಂದು ಪ್ರಶ್ನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಭಾರತಿ ಶೆಟ್ಟಿ, ‘ನೀವು ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡಿಸುವುದನ್ನು ಬಿಡುವವರೆಗೆ’ ಎಂದು ಹೇಳಿದಾಗ ಪರಿಷತ್ತಿನ ಸದಸ್ಯರೆಲ್ಲ ಅರೆಕ್ಷಣ ಪಕ್ಷಬೇಧ ಮರೆತು ನಕ್ಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ‘ಆಪರೇಷನ್ ಕಮಲ’ ಎಲ್ಲಿಯವರೆಗೆ ನಡೆಯುತ್ತದೆ ಎಂಬ ವಿರೋಧ ಪಕ್ಷಗಳ ಪ್ರಶ್ನೆಗೆ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಂಗಳವಾರ ಉತ್ತರ ನೀಡಿದ್ದಾರೆ!<br /> <br /> ಪ್ರೇರಣಾ ಶೈಕ್ಷಣಿಕ ಟ್ರಸ್ಟ್ಗೆ ಬಂದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಕುರಿತು ಪರಿಷತ್ತಿನಲ್ಲಿ ನಿಯಮ 68ರ ಅಡಿ ಕಾಂಗ್ರೆಸ್ನ ವಿ.ಆರ್. ಸುದರ್ಶನ್ ಚರ್ಚೆ ಆರಂಭಿಸಿದಾಗ ಬಿಜೆಪಿಯ ಭಾರತಿ ಶೆಟ್ಟಿ ಮತ್ತು ಇತರ ಸದಸ್ಯರು ಮುಖ್ಯಮಂತ್ರಿಗಳ ಪರವಾಗಿ ವಾದಿಸಿದರು.<br /> <br /> ‘ಮುಖ್ಯಮಂತ್ರಿಗಳು ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಘೋಷಿಸಿರುವುದರಿಂದ ಇಷ್ಟೊಂದು ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರು ಅವರನ್ನು ಸಮರ್ಥಿಸಿಕೊಂಡು ಮಾತನಾಡುತ್ತಿದ್ದಾರೆ’ ಎಂದು ಸುದರ್ಶನ್ ಆಡಳಿತ ಪಕ್ಷದ ಸದಸ್ಯರನ್ನು ಛೇಡಿಸಿದರು.<br /> <br /> ಮಧ್ಯಪ್ರವೇಶಿಸಿದ ಜೆಡಿಎಸ್ನ ಎಂ.ಸಿ. ನಾಣಯ್ಯ, ‘ಮುಖ್ಯಮಂತ್ರಿಗಳು ಸದ್ಯಕ್ಕಂತೂ ಸಂಪುಟ ವಿಸ್ತರಣೆ ಮಾಡಲ್ಲ, ಉಪಚುನಾವಣೆಗಳು ಮುಗಿಯಲಿ ಎಂದು ದಿನ ದೂಡುತ್ತಾರೆ’ ಎಂದು ವ್ಯಂಗ್ಯವಾಡಿದರು.<br /> <br /> ಆಗ ಸುದರ್ಶನ್, ‘ಈ ಆಪರೇಷನ್ ಕಮಲ, ಉಪಚುನಾವಣೆಗಳು ಎಷ್ಟು ದಿನ’ ಎಂದು ಪ್ರಶ್ನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಭಾರತಿ ಶೆಟ್ಟಿ, ‘ನೀವು ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡಿಸುವುದನ್ನು ಬಿಡುವವರೆಗೆ’ ಎಂದು ಹೇಳಿದಾಗ ಪರಿಷತ್ತಿನ ಸದಸ್ಯರೆಲ್ಲ ಅರೆಕ್ಷಣ ಪಕ್ಷಬೇಧ ಮರೆತು ನಕ್ಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>