<p><strong>ಬೆಂಗಳೂರು: </strong>ಜಗದೀಶ ಶೆಟ್ಟರ್ ನೇತೃತ್ವದ ಸರ್ಕಾರ ಬಹುಮತವನ್ನು ಹೊಂದಿದೆಯೋ, ಇಲ್ಲವೋ ಎಂಬ ಅನುಮಾನ ಇದೆ. ಆದ ಕಾರಣ ಮುಖ್ಯಮಂತ್ರಿಯವರು ಕೂಡಲೇ ಬಹುಮತ ಸಾಬೀತುಪಡಿಸಬೇಕು ಎಂದು ವಿರೋಧ ಪಕ್ಷದ ಉಪನಾಯಕ ಟಿ.ಬಿ. ಜಯಚಂದ್ರ ವಿಧಾನಸಭೆಯಲ್ಲಿ ಗುರುವಾರ ಒತ್ತಾಯಿಸಿದರು. <br /> <br /> ಶೆಟ್ಟರ್ ಅವರು ತಮ್ಮ ಸಂಪುಟ ಸದಸ್ಯರನ್ನು ಸದನಕ್ಕೆ ಪರಿಚಯಿಸಲು ಮುಂದಾಗುತ್ತಿದ್ದಂತೆಯೇ ಮಧ್ಯಪ್ರವೇಶಿದ ಜಯಚಂದ್ರ, `ಶೆಟ್ಟರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಅದು ನಿಜವಾಗಿದೆ. ಆದರೆ ಅವರಿಗೆ ಬಹುಮತ ಇಲ್ಲ ಎಂಬ ವಿಷಯ ಪತ್ರಿಕೆಗಳಲ್ಲಿ ಪ್ರಸ್ತಾಪವಾಗುತ್ತಿದೆ. ಹೀಗಾಗಿ ಬಹುಮತ ಸಾಬೀತುಪಡಿಸುವುದು ಒಳಿತು. ಅವರ ಕುರ್ಚಿ ಭದ್ರವಾಗಲಿ ಎಂಬ ಉದ್ದೇಶದಿಂದ ಈ ವಿಷಯ ಪ್ರಸ್ತಾಪಿಸಿದ್ದೇನೆ~ ಎಂದರು.<br /> <br /> ಇದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪಿಸಿದರು. ಶೆಟ್ಟರ್ ಮತ್ತೆ ಎದ್ದು ನಿಂತು ಸಚಿವರನ್ನು ಪರಿಚಯಿಸಲು ಮುಂದಾಗುತ್ತಿದ್ದಂತೆಯೇ ಜಯಚಂದ್ರ ಕ್ರಿಯಾಲೋಪ ಎತ್ತಿದರು. `ಅತೃಪ್ತ ಶಾಸಕರ ಸಂಖ್ಯೆ 25ಕ್ಕೆ ಏರಿದೆ. ಹೀಗಾಗಿ ಬಹುಮತಕ್ಕೆ ಅಗತ್ಯವಿರುವ ಸಂಖ್ಯಾಬಲ ಇದೆಯೋ, ಇಲ್ಲವೋ ಗೊತ್ತಿಲ್ಲ. ಬಹುಮತ ಸಾಬೀತುಪಡಿಸಿದ ನಂತರ ಸಚಿವರನ್ನು ಪರಿಚಯಿಸಲಿ. ಮುಖ್ಯಮಂತ್ರಿ ಸ್ವಯಂ ಪ್ರೇರಣೆಯಿಂದ ವಿಶ್ವಾಸಮತ ಯಾಚನೆ ನಿರ್ಣಯವನ್ನು ಮಂಡಿಸಬೇಕು~ ಎಂದರು.<br /> <br /> ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿಲ್ಲ. ಆದ್ದರಿಂದ ಆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದರು. `ನಾನು ಮೊದಲು ಸಚಿವರನ್ನು ಪರಿಚಯಿಸುತ್ತೇನೆ. ವಿಶ್ವಾಸ, ಅವಿಶ್ವಾಸದ ಬಗ್ಗೆ ನಂತರ ಪ್ರಸ್ತಾಪಿಸಲಿ~ ಎಂದು ಶೆಟ್ಟರ್ ಅವರು ಹೇಳಿ, ಸಚಿವರನ್ನು ಸದನಕ್ಕೆ ಪರಿಚಯಿಸಿದರು. ಬಳಿಕ ಈ ಬಗ್ಗೆ ಯಾರೂ ಪ್ರಸ್ತಾಪಿಸಲಿಲ್ಲ.<br /> <br /> <strong>ಅತೃಪ್ತರು ಜಾಸ್ತಿ: </strong>ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ಅಸ್ನೋಟಿಕರ್ ಸೇರಿದಂತೆ ಸುಮಾರು 20 ಶಾಸಕರು ಬೆಳಿಗ್ಗೆ 11.50ರ ಸುಮಾರಿಗೆ ಒಟ್ಟಾಗಿ ಸದನ ಪ್ರವೇಶಿಸಿದಾಗ ಸದಸ್ಯರು ಅಲ್ಲಲ್ಲಿ ಪಿಸುಗುಟ್ಟಲಾರಂಭಿಸಿದರು. ಇದನ್ನು ಗಮನಿಸಿದ ಸ್ಪೀಕರ್, ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಈ ರೀತಿ ಪಿಸುಮಾತಿನ ಚರ್ಚೆ ಸರಿಯಲ್ಲ ಎಂದು ಎಚ್ಚರಿಸಿದರು.<br /> <br /> `ಸದನ ಪ್ರವೇಶಿಸಿದವರು ಸೀಟುಗಳನ್ನು ಹುಡುಕುತ್ತಿದ್ದಾರೆ. ಹೀಗಾಗಿ ಸ್ವಲ್ಪ ಗದ್ದಲ ಆಗಿದೆ~ ಎಂದು ಜಯಚಂದ್ರ ಹೇಳಿದರೆ, ಬಿಜೆಪಿಯ ಎಚ್.ಎಸ್. ಶಂಕರಲಿಂಗೇಗೌಡ ಅವರು, `ಅತೃಪ್ತರ ಸಂಖ್ಯೆ ಜಾಸ್ತಿ ಆಗಿರುವುದರಿಂದ ಗದ್ದಲ ಕೇಳಿ ಬರುತ್ತಿದೆ~ ಎಂದು ಕಿಚಾಯಿಸಿದರು. `ಪಾಪ... ಶಂಕರಲಿಂಗೇಗೌಡ ಅವರಿಗೂ ಅನ್ಯಾಯವಾಗಿದೆ. ಅವರಿಗೆ ಸಚಿವ ಸ್ಥಾನ ನೀಡಿಲ್ಲ~ ಎಂದು ಸಿದ್ದರಾಮಯ್ಯ ಕೆಣಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಗದೀಶ ಶೆಟ್ಟರ್ ನೇತೃತ್ವದ ಸರ್ಕಾರ ಬಹುಮತವನ್ನು ಹೊಂದಿದೆಯೋ, ಇಲ್ಲವೋ ಎಂಬ ಅನುಮಾನ ಇದೆ. ಆದ ಕಾರಣ ಮುಖ್ಯಮಂತ್ರಿಯವರು ಕೂಡಲೇ ಬಹುಮತ ಸಾಬೀತುಪಡಿಸಬೇಕು ಎಂದು ವಿರೋಧ ಪಕ್ಷದ ಉಪನಾಯಕ ಟಿ.ಬಿ. ಜಯಚಂದ್ರ ವಿಧಾನಸಭೆಯಲ್ಲಿ ಗುರುವಾರ ಒತ್ತಾಯಿಸಿದರು. <br /> <br /> ಶೆಟ್ಟರ್ ಅವರು ತಮ್ಮ ಸಂಪುಟ ಸದಸ್ಯರನ್ನು ಸದನಕ್ಕೆ ಪರಿಚಯಿಸಲು ಮುಂದಾಗುತ್ತಿದ್ದಂತೆಯೇ ಮಧ್ಯಪ್ರವೇಶಿದ ಜಯಚಂದ್ರ, `ಶೆಟ್ಟರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಅದು ನಿಜವಾಗಿದೆ. ಆದರೆ ಅವರಿಗೆ ಬಹುಮತ ಇಲ್ಲ ಎಂಬ ವಿಷಯ ಪತ್ರಿಕೆಗಳಲ್ಲಿ ಪ್ರಸ್ತಾಪವಾಗುತ್ತಿದೆ. ಹೀಗಾಗಿ ಬಹುಮತ ಸಾಬೀತುಪಡಿಸುವುದು ಒಳಿತು. ಅವರ ಕುರ್ಚಿ ಭದ್ರವಾಗಲಿ ಎಂಬ ಉದ್ದೇಶದಿಂದ ಈ ವಿಷಯ ಪ್ರಸ್ತಾಪಿಸಿದ್ದೇನೆ~ ಎಂದರು.<br /> <br /> ಇದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪಿಸಿದರು. ಶೆಟ್ಟರ್ ಮತ್ತೆ ಎದ್ದು ನಿಂತು ಸಚಿವರನ್ನು ಪರಿಚಯಿಸಲು ಮುಂದಾಗುತ್ತಿದ್ದಂತೆಯೇ ಜಯಚಂದ್ರ ಕ್ರಿಯಾಲೋಪ ಎತ್ತಿದರು. `ಅತೃಪ್ತ ಶಾಸಕರ ಸಂಖ್ಯೆ 25ಕ್ಕೆ ಏರಿದೆ. ಹೀಗಾಗಿ ಬಹುಮತಕ್ಕೆ ಅಗತ್ಯವಿರುವ ಸಂಖ್ಯಾಬಲ ಇದೆಯೋ, ಇಲ್ಲವೋ ಗೊತ್ತಿಲ್ಲ. ಬಹುಮತ ಸಾಬೀತುಪಡಿಸಿದ ನಂತರ ಸಚಿವರನ್ನು ಪರಿಚಯಿಸಲಿ. ಮುಖ್ಯಮಂತ್ರಿ ಸ್ವಯಂ ಪ್ರೇರಣೆಯಿಂದ ವಿಶ್ವಾಸಮತ ಯಾಚನೆ ನಿರ್ಣಯವನ್ನು ಮಂಡಿಸಬೇಕು~ ಎಂದರು.<br /> <br /> ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿಲ್ಲ. ಆದ್ದರಿಂದ ಆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದರು. `ನಾನು ಮೊದಲು ಸಚಿವರನ್ನು ಪರಿಚಯಿಸುತ್ತೇನೆ. ವಿಶ್ವಾಸ, ಅವಿಶ್ವಾಸದ ಬಗ್ಗೆ ನಂತರ ಪ್ರಸ್ತಾಪಿಸಲಿ~ ಎಂದು ಶೆಟ್ಟರ್ ಅವರು ಹೇಳಿ, ಸಚಿವರನ್ನು ಸದನಕ್ಕೆ ಪರಿಚಯಿಸಿದರು. ಬಳಿಕ ಈ ಬಗ್ಗೆ ಯಾರೂ ಪ್ರಸ್ತಾಪಿಸಲಿಲ್ಲ.<br /> <br /> <strong>ಅತೃಪ್ತರು ಜಾಸ್ತಿ: </strong>ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ಅಸ್ನೋಟಿಕರ್ ಸೇರಿದಂತೆ ಸುಮಾರು 20 ಶಾಸಕರು ಬೆಳಿಗ್ಗೆ 11.50ರ ಸುಮಾರಿಗೆ ಒಟ್ಟಾಗಿ ಸದನ ಪ್ರವೇಶಿಸಿದಾಗ ಸದಸ್ಯರು ಅಲ್ಲಲ್ಲಿ ಪಿಸುಗುಟ್ಟಲಾರಂಭಿಸಿದರು. ಇದನ್ನು ಗಮನಿಸಿದ ಸ್ಪೀಕರ್, ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಈ ರೀತಿ ಪಿಸುಮಾತಿನ ಚರ್ಚೆ ಸರಿಯಲ್ಲ ಎಂದು ಎಚ್ಚರಿಸಿದರು.<br /> <br /> `ಸದನ ಪ್ರವೇಶಿಸಿದವರು ಸೀಟುಗಳನ್ನು ಹುಡುಕುತ್ತಿದ್ದಾರೆ. ಹೀಗಾಗಿ ಸ್ವಲ್ಪ ಗದ್ದಲ ಆಗಿದೆ~ ಎಂದು ಜಯಚಂದ್ರ ಹೇಳಿದರೆ, ಬಿಜೆಪಿಯ ಎಚ್.ಎಸ್. ಶಂಕರಲಿಂಗೇಗೌಡ ಅವರು, `ಅತೃಪ್ತರ ಸಂಖ್ಯೆ ಜಾಸ್ತಿ ಆಗಿರುವುದರಿಂದ ಗದ್ದಲ ಕೇಳಿ ಬರುತ್ತಿದೆ~ ಎಂದು ಕಿಚಾಯಿಸಿದರು. `ಪಾಪ... ಶಂಕರಲಿಂಗೇಗೌಡ ಅವರಿಗೂ ಅನ್ಯಾಯವಾಗಿದೆ. ಅವರಿಗೆ ಸಚಿವ ಸ್ಥಾನ ನೀಡಿಲ್ಲ~ ಎಂದು ಸಿದ್ದರಾಮಯ್ಯ ಕೆಣಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>