<p><strong>ಕಾರವಾರ: </strong>ರಾಜ್ಯದಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯ ಹೊರತು ಪಡಿಸಿದರೆ ಉಳಿದ ಯಾವ ವಿಶ್ವವಿದ್ಯಾಲಯದಲ್ಲಿಯೂ ಕುಲಪತಿ ಹುದ್ದೆ ಖಾಲಿ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಆರ್. ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.<br /> <br /> ಶುಕ್ರವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆಗಾಗಿ ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅಧ್ಯಕ್ಷತೆಯಲ್ಲಿ ‘ಸರ್ಚ್ ಕಮಿಟಿ‘ ನೇಮಕ ಮಾಡಲಾಗಿದೆ. ಈ ಸಮಿತಿ ಯಾರನ್ನು ಆಯ್ಕೆಮಾಡಿ ಸೂಚಿಸುತ್ತದೆಯೋ ಅವರನ್ನು ನೇಮಕ ಮಾಡುತ್ತೇವೆ ಎಂದರು.<br /> <br /> ಇವರನ್ನೇ ಕುಲಪತಿ ಹುದ್ದೆಗೆ ಆಯ್ಕೆ ಮಾಡಿ ಎಂದು ಹೇಳುವ ಅಧಿಕಾರ ನನಗಿಲ್ಲ ಎಂದು ಸಚಿವ ಆರ್.ವಿ. ದೇಶಪಾಂಡೆ ಸ್ಪಷ್ಟಪಡಿಸಿದರು.<br /> ಕುಲಪತಿಗಳ ನೇಮಕಾತಿಗೂ ನಮಗೂ ಯಾವುದೇ ಸಂಬಂಧಇಲ್ಲ. ರಾಜ್ಯಪಾಲ ಎಚ್.ಆರ್. ಭಾರಧ್ವಾಜ್ ಅವರು ಹಿರಿಯರಿದ್ದಾರೆ. ಯಾವ ಉದ್ದೇಶ ಇಟ್ಟುಕೊಂಡು ಅವರು ಸಚಿವರ ಕಾರ್ಯವೈಖರಿ ಬಗ್ಗೆ ಮಾತನಾಡಿದರೋ ಗೊತ್ತಿಲ್ಲ. ಗೌರವ ಸ್ಥಾನದಲ್ಲಿರುವ ಅವರ ಬಗ್ಗೆ ಹೆಚ್ಚಿಗೆ ಮಾತನಾಡುವುದು ಸರಿಯಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ರಾಜ್ಯದಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯ ಹೊರತು ಪಡಿಸಿದರೆ ಉಳಿದ ಯಾವ ವಿಶ್ವವಿದ್ಯಾಲಯದಲ್ಲಿಯೂ ಕುಲಪತಿ ಹುದ್ದೆ ಖಾಲಿ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಆರ್. ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.<br /> <br /> ಶುಕ್ರವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆಗಾಗಿ ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅಧ್ಯಕ್ಷತೆಯಲ್ಲಿ ‘ಸರ್ಚ್ ಕಮಿಟಿ‘ ನೇಮಕ ಮಾಡಲಾಗಿದೆ. ಈ ಸಮಿತಿ ಯಾರನ್ನು ಆಯ್ಕೆಮಾಡಿ ಸೂಚಿಸುತ್ತದೆಯೋ ಅವರನ್ನು ನೇಮಕ ಮಾಡುತ್ತೇವೆ ಎಂದರು.<br /> <br /> ಇವರನ್ನೇ ಕುಲಪತಿ ಹುದ್ದೆಗೆ ಆಯ್ಕೆ ಮಾಡಿ ಎಂದು ಹೇಳುವ ಅಧಿಕಾರ ನನಗಿಲ್ಲ ಎಂದು ಸಚಿವ ಆರ್.ವಿ. ದೇಶಪಾಂಡೆ ಸ್ಪಷ್ಟಪಡಿಸಿದರು.<br /> ಕುಲಪತಿಗಳ ನೇಮಕಾತಿಗೂ ನಮಗೂ ಯಾವುದೇ ಸಂಬಂಧಇಲ್ಲ. ರಾಜ್ಯಪಾಲ ಎಚ್.ಆರ್. ಭಾರಧ್ವಾಜ್ ಅವರು ಹಿರಿಯರಿದ್ದಾರೆ. ಯಾವ ಉದ್ದೇಶ ಇಟ್ಟುಕೊಂಡು ಅವರು ಸಚಿವರ ಕಾರ್ಯವೈಖರಿ ಬಗ್ಗೆ ಮಾತನಾಡಿದರೋ ಗೊತ್ತಿಲ್ಲ. ಗೌರವ ಸ್ಥಾನದಲ್ಲಿರುವ ಅವರ ಬಗ್ಗೆ ಹೆಚ್ಚಿಗೆ ಮಾತನಾಡುವುದು ಸರಿಯಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>