<p><strong>ಶಿವಮೊಗ್ಗ: </strong>ಕುವೆಂಪು ವಿಶ್ವವಿದ್ಯಾಲಯದ ಉತ್ತರ ಪತ್ರಿಕೆ ನಕಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಎನ್ಎಸ್ಯುಐ ಸಂಘಟನೆ ಸೋಮವಾರ ಕರೆ ನೀಡಿದ್ದ ನಗರದ ಕಾಲೇಜುಗಳ ಬಂದ್ ಸಂಪೂರ್ಣ ಯಶಸ್ವಿಯಾಯಿತು.<br /> <br /> ಬಹುತೇಕ ಕಾಲೇಜುಗಳು ಮೊದಲೇ ರಜೆ ಘೋಷಿಸಿದ್ದವು. ಇನ್ನೂ ಕೆಲವು ಎಂದಿನಂತೆ ತರಗತಿ ನಡೆಸುತ್ತಿದ್ದು, ವಿಷಯ ತಿಳಿದ ಸಂಘಟನೆ ಕಾರ್ಯಕರ್ತರು, ಕಾಲೇಜುಗಳಿಗೆ ತೆರಳಿ, ಬಾಗಿಲು ಮುಚ್ಚಿಸಿದ ಪ್ರಸಂಗವೂ ನಡೆಯಿತು. ಪ್ರತಿಭಟನೆಯಲ್ಲಿ 10 ಪದವಿ ಕಾಲೇಜು, 18 ಪಿಯು ಹಾಗೂ 3 ಡಿಪ್ಲೊಮಾ ಕಾಲೇಜುಗಳು ಬಂದ್ನಲ್ಲಿ ಪಾಲ್ಗೊಂಡಿದ್ದವು. <br /> <br /> ನಂತರ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.<br /> <br /> ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಬದಲಾವಣೆ ಮಾಡುವುದು, ವಿವಿಧ ಪದವಿಗಳ ನಕಲಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಸೃಷ್ಟಿಸಿಕೊಟ್ಟಿರುವುದು ನಿಜಕ್ಕೂ ಆತಂಕಕಾರಿಯಾದ ಸಂಗತಿ. ಇದರಲ್ಲಿ ಕುವೆಂಪು ವಿವಿಯ ಸಿಬ್ಬಂದಿಗಳೇ ಭಾಗಿಯಾಗಿದ್ದಾರೆ. ಇದು ವಿವಿಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸ್ ತನಿಖೆಯಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣವನ್ನು ಕೂಡಲೇ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. <br /> <br /> ಈ ಹಗರಣಕ್ಕೆ ಸಂಬಂಧಿಸಿದಂತೆ ಉಪಕುಲಪತಿ ಪ್ರೊ.ಎಸ್.ಎ. ಬಾರಿ ಅವರು ಸತ್ಯ ಶೋಧನಾ ಸಮಿತಿ ರಚಿಸಿದ್ದಾರೆ. ಇದಕ್ಕೆ ಆರೋಪವೊಂದರಲ್ಲಿ ಸಿಲುಕಿದ ಪ್ರೊ.ಸದಾನಂದ ಅವರನ್ನು ನೇಮಿಸಲಾಗಿದೆ ಎಂದು ದೂರಿದರು.<br /> <br /> ಕುವೆಂಪು ವಿಶ್ವವಿದ್ಯಾಲಯದ ಪ್ರಕರಣ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಶಿವಮೊಗ್ಗ- ಚಿಕ್ಕಮಗಳೂರು ಎನ್ಎಸ್ಯುಐ ಅಧ್ಯಕ್ಷ ಸಿ.ಜಿ. ಮಧುಸೂಧನ್, ಮಾಜಿ ಅಧ್ಯಕ್ಷ ದೇವೇಂದ್ರಪ್ಪ, ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಚೇತನ್, ಪದಾಧಿಕಾರಿಗಳಾದ ಮಧುಕುಮಾರ್, ಶ್ರೀಜಿತ್ ವಹಿಸಿದ್ದರು.<br /> </p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕುವೆಂಪು ವಿಶ್ವವಿದ್ಯಾಲಯದ ಉತ್ತರ ಪತ್ರಿಕೆ ನಕಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಎನ್ಎಸ್ಯುಐ ಸಂಘಟನೆ ಸೋಮವಾರ ಕರೆ ನೀಡಿದ್ದ ನಗರದ ಕಾಲೇಜುಗಳ ಬಂದ್ ಸಂಪೂರ್ಣ ಯಶಸ್ವಿಯಾಯಿತು.<br /> <br /> ಬಹುತೇಕ ಕಾಲೇಜುಗಳು ಮೊದಲೇ ರಜೆ ಘೋಷಿಸಿದ್ದವು. ಇನ್ನೂ ಕೆಲವು ಎಂದಿನಂತೆ ತರಗತಿ ನಡೆಸುತ್ತಿದ್ದು, ವಿಷಯ ತಿಳಿದ ಸಂಘಟನೆ ಕಾರ್ಯಕರ್ತರು, ಕಾಲೇಜುಗಳಿಗೆ ತೆರಳಿ, ಬಾಗಿಲು ಮುಚ್ಚಿಸಿದ ಪ್ರಸಂಗವೂ ನಡೆಯಿತು. ಪ್ರತಿಭಟನೆಯಲ್ಲಿ 10 ಪದವಿ ಕಾಲೇಜು, 18 ಪಿಯು ಹಾಗೂ 3 ಡಿಪ್ಲೊಮಾ ಕಾಲೇಜುಗಳು ಬಂದ್ನಲ್ಲಿ ಪಾಲ್ಗೊಂಡಿದ್ದವು. <br /> <br /> ನಂತರ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.<br /> <br /> ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಬದಲಾವಣೆ ಮಾಡುವುದು, ವಿವಿಧ ಪದವಿಗಳ ನಕಲಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಸೃಷ್ಟಿಸಿಕೊಟ್ಟಿರುವುದು ನಿಜಕ್ಕೂ ಆತಂಕಕಾರಿಯಾದ ಸಂಗತಿ. ಇದರಲ್ಲಿ ಕುವೆಂಪು ವಿವಿಯ ಸಿಬ್ಬಂದಿಗಳೇ ಭಾಗಿಯಾಗಿದ್ದಾರೆ. ಇದು ವಿವಿಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸ್ ತನಿಖೆಯಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣವನ್ನು ಕೂಡಲೇ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. <br /> <br /> ಈ ಹಗರಣಕ್ಕೆ ಸಂಬಂಧಿಸಿದಂತೆ ಉಪಕುಲಪತಿ ಪ್ರೊ.ಎಸ್.ಎ. ಬಾರಿ ಅವರು ಸತ್ಯ ಶೋಧನಾ ಸಮಿತಿ ರಚಿಸಿದ್ದಾರೆ. ಇದಕ್ಕೆ ಆರೋಪವೊಂದರಲ್ಲಿ ಸಿಲುಕಿದ ಪ್ರೊ.ಸದಾನಂದ ಅವರನ್ನು ನೇಮಿಸಲಾಗಿದೆ ಎಂದು ದೂರಿದರು.<br /> <br /> ಕುವೆಂಪು ವಿಶ್ವವಿದ್ಯಾಲಯದ ಪ್ರಕರಣ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಶಿವಮೊಗ್ಗ- ಚಿಕ್ಕಮಗಳೂರು ಎನ್ಎಸ್ಯುಐ ಅಧ್ಯಕ್ಷ ಸಿ.ಜಿ. ಮಧುಸೂಧನ್, ಮಾಜಿ ಅಧ್ಯಕ್ಷ ದೇವೇಂದ್ರಪ್ಪ, ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಚೇತನ್, ಪದಾಧಿಕಾರಿಗಳಾದ ಮಧುಕುಮಾರ್, ಶ್ರೀಜಿತ್ ವಹಿಸಿದ್ದರು.<br /> </p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>