<p>ಲಖನೌ (ಪಿಟಿಐ): ಕಳಂಕಿತ ಬಿಎಸ್ಪಿ ಸಚಿವ ಬಾಬು ಸಿಂಗ್ ಕುಶಾವ ಅವರನ್ನು ಬಿಜೆಪಿಗೆ ಸೇರಿಸಿಕೊಂಡದ್ದು ತಮ್ಮ ಅಧಿಕಾರಾವಧಿಯಲ್ಲಿನ ಕಪ್ಪುಚುಕ್ಕೆಯಾಗಿದ್ದು, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ತಾವು ರಾಜೀನಾಮೆ ನೀಡಲು ಇದೇ ಕಾರಣ ಎಂದು ಸೂರ್ಯ ಪ್ರತಾಪ್ ಶಾಹಿ ಸ್ಪಷ್ಟಪಡಿಸಿದ್ದಾರೆ.<br /> <br /> ಪಕ್ಷದ ನೂತನ ರಾಜ್ಯ ಅಧ್ಯಕ್ಷ ಲಕ್ಷ್ಮಿಕಾಂತ್ ಬಾಜಪೇಯಿ ಅವರ ಸ್ವಾಗತ ಸಮಾರಂಭದಲ್ಲಿ ಸೋಮವಾರ ರಾಜೀನಾಮೆ ಕುರಿತು ಮೌನ ಮುರಿದ ಶಾಹಿ, ಕುಶಾವ ಸೇರ್ಪಡೆ ಪಕ್ಷದ ವರಿಷ್ಠರ ನಿರ್ಧಾರವಾಗಿತ್ತಲ್ಲದೆ ಅದರಲ್ಲಿ ತಮ್ಮ ಪಾತ್ರವೇನೂ ಇರಲಿಲ್ಲ ಎಂದು ಹೇಳಿದರು. <br /> <br /> ಪತ್ರಿಕಾಗೋಷ್ಠಿ ನಡೆಯುವ ಕೇವಲ ಎರಡು ಗಂಟೆಗಳ ಮೊದಲು ಕುಶಾವ ಸೇರ್ಪಡೆ ಕುರಿತು ತಮಗೆ ಮಾಹಿತಿ ನೀಡಲಾಯಿತು. ಆದರೆ ಚುನಾವಣೆ ಸಮೀಪಿಸುತ್ತಿದ್ದುದರಿಂದ ಪಕ್ಷದ ವರ್ಚಸ್ಸಿಗೆ ಕುಂದುಂಟು ಮಾಡದಿರುವ ಸಲುವಾಗಿ ತಾವು ಚಕಾರ ಎತ್ತಲಿಲ್ಲ ಎಂದರು.<br /> <br /> ನನ್ನ ಅಧಿಕಾರಾವಧಿಯಲ್ಲಿ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದೇನೆ. ಸತ್ಯವನ್ನು ಹೊರಗೆಡಹಲು ಇದು ತಕ್ಕ ಸಮಯ ಎಂದೆಣಿಸಿ ಎಲ್ಲವನ್ನೂ ಬಹಿರಂಗಪಡಿಸುತ್ತಿದ್ದೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಖನೌ (ಪಿಟಿಐ): ಕಳಂಕಿತ ಬಿಎಸ್ಪಿ ಸಚಿವ ಬಾಬು ಸಿಂಗ್ ಕುಶಾವ ಅವರನ್ನು ಬಿಜೆಪಿಗೆ ಸೇರಿಸಿಕೊಂಡದ್ದು ತಮ್ಮ ಅಧಿಕಾರಾವಧಿಯಲ್ಲಿನ ಕಪ್ಪುಚುಕ್ಕೆಯಾಗಿದ್ದು, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ತಾವು ರಾಜೀನಾಮೆ ನೀಡಲು ಇದೇ ಕಾರಣ ಎಂದು ಸೂರ್ಯ ಪ್ರತಾಪ್ ಶಾಹಿ ಸ್ಪಷ್ಟಪಡಿಸಿದ್ದಾರೆ.<br /> <br /> ಪಕ್ಷದ ನೂತನ ರಾಜ್ಯ ಅಧ್ಯಕ್ಷ ಲಕ್ಷ್ಮಿಕಾಂತ್ ಬಾಜಪೇಯಿ ಅವರ ಸ್ವಾಗತ ಸಮಾರಂಭದಲ್ಲಿ ಸೋಮವಾರ ರಾಜೀನಾಮೆ ಕುರಿತು ಮೌನ ಮುರಿದ ಶಾಹಿ, ಕುಶಾವ ಸೇರ್ಪಡೆ ಪಕ್ಷದ ವರಿಷ್ಠರ ನಿರ್ಧಾರವಾಗಿತ್ತಲ್ಲದೆ ಅದರಲ್ಲಿ ತಮ್ಮ ಪಾತ್ರವೇನೂ ಇರಲಿಲ್ಲ ಎಂದು ಹೇಳಿದರು. <br /> <br /> ಪತ್ರಿಕಾಗೋಷ್ಠಿ ನಡೆಯುವ ಕೇವಲ ಎರಡು ಗಂಟೆಗಳ ಮೊದಲು ಕುಶಾವ ಸೇರ್ಪಡೆ ಕುರಿತು ತಮಗೆ ಮಾಹಿತಿ ನೀಡಲಾಯಿತು. ಆದರೆ ಚುನಾವಣೆ ಸಮೀಪಿಸುತ್ತಿದ್ದುದರಿಂದ ಪಕ್ಷದ ವರ್ಚಸ್ಸಿಗೆ ಕುಂದುಂಟು ಮಾಡದಿರುವ ಸಲುವಾಗಿ ತಾವು ಚಕಾರ ಎತ್ತಲಿಲ್ಲ ಎಂದರು.<br /> <br /> ನನ್ನ ಅಧಿಕಾರಾವಧಿಯಲ್ಲಿ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದೇನೆ. ಸತ್ಯವನ್ನು ಹೊರಗೆಡಹಲು ಇದು ತಕ್ಕ ಸಮಯ ಎಂದೆಣಿಸಿ ಎಲ್ಲವನ್ನೂ ಬಹಿರಂಗಪಡಿಸುತ್ತಿದ್ದೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>