<p><strong>ನವದೆಹಲಿ:</strong> ಉದ್ದೀಪನಾ ಮದ್ದು ಸೇವಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕುಸ್ತಿಪಟು ನರಸಿಂಗ್ ಯಾದವ್ ಅವರಿಗೆ ನಾಡಾ (ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ) ಸೋಮವಾರ ಕ್ಲೀನ್ಚಿಟ್ ನೀಡಿದೆ.</p>.<p>ಇದೀಗ ನರಸಿಂಗ್ ಯಾದವ್ ಆರೋಪ ಮುಕ್ತನಾಗಿದ್ದು, ರಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಬಹುದಾಗಿದೆ ಎಂದು ನಾಡಾ ಹೇಳಿದೆ.</p>.<p>2015ರಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನ ಪುರುಷರ 74 ಕೆ.ಜಿ. ವಿಭಾಗದಲ್ಲಿ ಕಂಚು ಗೆದ್ದು ಯಾದವ್ ರಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದುಕೊಂಡಿದ್ದರು. ಈ ನಡುವೆ ನರಸಿಂಗ್ ಅವರು ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.<br /> <br /> ನರಸಿಂಗ್ ಅವರ ಮೂತ್ರದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಯ ವೇಳೆ ಅದರಲ್ಲಿ ನಿಷೇಧಿತ ಉದ್ದೀಪನಾ ಮದ್ದಿನ ಅಂಶ ಇರುವುದು ಪತ್ತೆಯಾಗಿದೆ ಎಂದು ನಾಡಾ ಮಹಾ ನಿರ್ದೇಶಕ ನವೀನ್ ಅಗರವಾಲ್ ಹೇಳಿದ್ದು, ಈ ಹಿನ್ನಲೆಯಲ್ಲಿ ಯಾದವ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.<br /> <br /> ಇದೀಗ ವಿಚಾರಣೆ ಪೂರ್ಣಗೊಂಡಿದ್ದು, ನರಸಿಂಗ್ ಮೂತ್ರದ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಉದ್ದೀಪನಾ ಮದ್ದು ಸೇವನೆ ಬಗ್ಗೆ ಪಾಸಿಟಿವ್ ಫಲಿತಾಂಶ ಕಂಡು ಬಂದಿಲ್ಲ ಎಂದು ಅಗರವಾಲ್ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ದೀಪನಾ ಮದ್ದು ಸೇವಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕುಸ್ತಿಪಟು ನರಸಿಂಗ್ ಯಾದವ್ ಅವರಿಗೆ ನಾಡಾ (ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ) ಸೋಮವಾರ ಕ್ಲೀನ್ಚಿಟ್ ನೀಡಿದೆ.</p>.<p>ಇದೀಗ ನರಸಿಂಗ್ ಯಾದವ್ ಆರೋಪ ಮುಕ್ತನಾಗಿದ್ದು, ರಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಬಹುದಾಗಿದೆ ಎಂದು ನಾಡಾ ಹೇಳಿದೆ.</p>.<p>2015ರಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನ ಪುರುಷರ 74 ಕೆ.ಜಿ. ವಿಭಾಗದಲ್ಲಿ ಕಂಚು ಗೆದ್ದು ಯಾದವ್ ರಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದುಕೊಂಡಿದ್ದರು. ಈ ನಡುವೆ ನರಸಿಂಗ್ ಅವರು ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.<br /> <br /> ನರಸಿಂಗ್ ಅವರ ಮೂತ್ರದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಯ ವೇಳೆ ಅದರಲ್ಲಿ ನಿಷೇಧಿತ ಉದ್ದೀಪನಾ ಮದ್ದಿನ ಅಂಶ ಇರುವುದು ಪತ್ತೆಯಾಗಿದೆ ಎಂದು ನಾಡಾ ಮಹಾ ನಿರ್ದೇಶಕ ನವೀನ್ ಅಗರವಾಲ್ ಹೇಳಿದ್ದು, ಈ ಹಿನ್ನಲೆಯಲ್ಲಿ ಯಾದವ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.<br /> <br /> ಇದೀಗ ವಿಚಾರಣೆ ಪೂರ್ಣಗೊಂಡಿದ್ದು, ನರಸಿಂಗ್ ಮೂತ್ರದ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಉದ್ದೀಪನಾ ಮದ್ದು ಸೇವನೆ ಬಗ್ಗೆ ಪಾಸಿಟಿವ್ ಫಲಿತಾಂಶ ಕಂಡು ಬಂದಿಲ್ಲ ಎಂದು ಅಗರವಾಲ್ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>