<p><strong>ನವದೆಹಲಿ (ಪಿಟಿಐ):</strong> `ಪ್ರತಿಭಟನೆ ಹಿನ್ನೆಲೆಯಲ್ಲಿ ಕೂಡುಂಕುಳಂನಲ್ಲಿ ಅಣುಸ್ಥಾವರದಿಂದ ವಿದ್ಯುತ್ ಉತ್ಪಾದನೆ ಆಗದಿದ್ದರೆ ರಾಜ್ಯದ ಅಭಿವೃದ್ಧಿ ಯೋಜನೆಗಳು ಕುಂಠಿತಗೊಳ್ಳುತ್ತವೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಬುಧವಾರ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಸಂಬಂಧ ಜಯಲಲಿತಾ ಅವರಿಗೆ ಪತ್ರ ಬರೆದಿರುವ ಸಿಂಗ್, ಯೋಜನೆ ಕೈಬಿಡುವಂತೆ ಆಗ್ರಹಿಸಿ ಕಳೆದ ವಾರ ತಮ್ಮನ್ನು ಭೇಟಿಯಾದ ಸರ್ವ ಪಕ್ಷ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.</p>.<p>ಕೂಡುಂಕುಳಂ ಅಣುಸ್ಥಾವರದ ಘಟಕ 1 ಹಾಗೂ 2ರಿಂದ ಉತ್ಪಾದನೆಯಾಗುವ 2000 ಮೆಗಾ ವಾಟ್ ವಿದ್ಯುತ್ನಲ್ಲಿ ತಮಿಳುನಾಡಿಗೆ 925 ಮೆಗಾ ವಾಟ್ ವಿದ್ಯುತ್ ನೀಡಲಾಗುತ್ತದೆ. ಒಂದು ವೇಳೆ ವಿದ್ಯುತ್ ಉತ್ಪಾದನೆಯು ಏಕಾಏಕಿ ನಿಂತಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಕೈಗಾರಿಕಾ ಯೋಜನೆಗಳಿಗೆ ತೊಡಕುಂಟಾಗುತ್ತದೆ ಎಂದಿದ್ದಾರೆ.</p>.<p>ಭಾರತ- ರಷ್ಯ ಯೋಜನೆಯಾದ ಕೂಡುಂಕುಳಂ ಅಣು ವಿದ್ಯುತ್ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಪತ್ರ ಬರೆದಿದ್ದಾರೆ.</p>.<p><strong>ತಿರುನಲ್ವೇಲಿ ವರದಿ:</strong> ಕೂಡುಂಕುಳಂ ಯೋಜನೆ ವಿರೋಧಿಸಿ ನೂರಾರು ಚಳವಳಿಗಾರರು ಉದ್ದೇಶಿತ ಘಟಕ ಸ್ಥಾಪನೆ ಸ್ಥಳಕ್ಕೆ ಸಮೀಪದ ಪ್ರದೇಶದಿಂದ ಇಡಿಂತಕರೈ ಎಂಬ ಗ್ರಾಮದವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> `ಪ್ರತಿಭಟನೆ ಹಿನ್ನೆಲೆಯಲ್ಲಿ ಕೂಡುಂಕುಳಂನಲ್ಲಿ ಅಣುಸ್ಥಾವರದಿಂದ ವಿದ್ಯುತ್ ಉತ್ಪಾದನೆ ಆಗದಿದ್ದರೆ ರಾಜ್ಯದ ಅಭಿವೃದ್ಧಿ ಯೋಜನೆಗಳು ಕುಂಠಿತಗೊಳ್ಳುತ್ತವೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಬುಧವಾರ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಸಂಬಂಧ ಜಯಲಲಿತಾ ಅವರಿಗೆ ಪತ್ರ ಬರೆದಿರುವ ಸಿಂಗ್, ಯೋಜನೆ ಕೈಬಿಡುವಂತೆ ಆಗ್ರಹಿಸಿ ಕಳೆದ ವಾರ ತಮ್ಮನ್ನು ಭೇಟಿಯಾದ ಸರ್ವ ಪಕ್ಷ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.</p>.<p>ಕೂಡುಂಕುಳಂ ಅಣುಸ್ಥಾವರದ ಘಟಕ 1 ಹಾಗೂ 2ರಿಂದ ಉತ್ಪಾದನೆಯಾಗುವ 2000 ಮೆಗಾ ವಾಟ್ ವಿದ್ಯುತ್ನಲ್ಲಿ ತಮಿಳುನಾಡಿಗೆ 925 ಮೆಗಾ ವಾಟ್ ವಿದ್ಯುತ್ ನೀಡಲಾಗುತ್ತದೆ. ಒಂದು ವೇಳೆ ವಿದ್ಯುತ್ ಉತ್ಪಾದನೆಯು ಏಕಾಏಕಿ ನಿಂತಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಕೈಗಾರಿಕಾ ಯೋಜನೆಗಳಿಗೆ ತೊಡಕುಂಟಾಗುತ್ತದೆ ಎಂದಿದ್ದಾರೆ.</p>.<p>ಭಾರತ- ರಷ್ಯ ಯೋಜನೆಯಾದ ಕೂಡುಂಕುಳಂ ಅಣು ವಿದ್ಯುತ್ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಪತ್ರ ಬರೆದಿದ್ದಾರೆ.</p>.<p><strong>ತಿರುನಲ್ವೇಲಿ ವರದಿ:</strong> ಕೂಡುಂಕುಳಂ ಯೋಜನೆ ವಿರೋಧಿಸಿ ನೂರಾರು ಚಳವಳಿಗಾರರು ಉದ್ದೇಶಿತ ಘಟಕ ಸ್ಥಾಪನೆ ಸ್ಥಳಕ್ಕೆ ಸಮೀಪದ ಪ್ರದೇಶದಿಂದ ಇಡಿಂತಕರೈ ಎಂಬ ಗ್ರಾಮದವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>