<p><strong>ಚೆನ್ನೈ(ಪಿಟಿಐ):</strong> ಕೂಡುಂಕುಳಂ ಪರಮಾಣು ಸ್ಥಾವರದ ಮೊದಲ ಘಟಕವು ವಿದ್ಯುತ್ ಉತ್ಪಾದಿಸಲು ಸಿದ್ಧವಾಗಿದ್ದು, ಈ ಘಟಕದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ವಿದ್ಯುತ್ತನ್ನು ರಾಜ್ಯಕ್ಕೆ ನೀಡಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ.</p>.<p>ಇನ್ನು ಕೆಲವೇ ದಿನಗಳಲ್ಲಿ ಕೂಡುಂಕುಳಂ ಸ್ಥಾವರದ ಮೊದಲ ಘಟಕವು ವಿದ್ಯುತ್ ಉತ್ಪಾದನೆಯನ್ನು ಆರಂಭಿಸುತ್ತದೆ ಎಂದು ತಿಳಿದು ಬಂದಿದ್ದು, ಮಾರ್ಚ್ನಲ್ಲಿ ಈ ಬಗ್ಗೆ ಪತ್ರ ಬರೆದು ತಮಿಳುನಾಡಿನ ವಿದ್ಯುತ್ ಅಗತ್ಯದ ಬಗ್ಗೆ ತಮ್ಮ ಗಮನ ಸೆಳೆಯಲಾಗಿದೆ ಎಂದು ಜಯಲಲಿತಾ ಅವರು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.</p>.<p>`ಮೊದಲಿನ ಪತ್ರಕ್ಕೆ ಇದುವರೆಗೆ ಉತ್ತರ ಬಾರದಿರುವುದರಿಂದ ಈ ಪತ್ರ ಬರೆಯಲಾಗಿದ್ದು, ಮೊದಲ ಘಟಕದಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ನಮ್ಮ ರಾಜ್ಯಕ್ಕೇ ನೀಡಬೇಕು ಎಂದು ಮತ್ತೊಮ್ಮೆ ಕೋರುತ್ತಿದ್ದೇನೆ~ ಎಂದು ತಿಳಿಸಿದ್ದಾರೆ.</p>.<p>ನ್ಯಾಯಯುತವಾದ ಬೇಡಿಕೆಯನ್ನು ತಾವು ಈಡೇರಿಸುತ್ತೀರಿ ಎಂಬ ಭರವಸೆ ಇದೆ ಎಂದು ತಿಳಿಸಿರುವ ಜಯಲಲಿತಾ ಅವರು, ವಿದ್ಯುತ್ ವರ್ಗಾವಣೆ ಮಾರ್ಗದ ದಟ್ಟಣೆ ಮತ್ತು ರಾಜ್ಯದ ವಿದ್ಯುತ್ ಬೇಡಿಕೆ ಇವೆರಡನ್ನೂ ಗಮನದಲ್ಲಿ ಇಟ್ಟುಕೊಂಡು ಈ ಕೋರಿಕೆಯನ್ನು ಮನ್ನಿಸಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ.</p>.<p>ಸ್ಥಾವರದ ಮೊದಲ ಘಟಕದಲ್ಲಿ ಉತ್ಪಾದನೆಯಾಗಲಿರುವ ಎಲ್ಲಾ ವಿದ್ಯುತ್ತನ್ನು ತಮಿಳುನಾಡಿಗೇ ನೀಡಬೇಕು ಎಂದು ಆಗ್ರಹಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ(ಪಿಟಿಐ):</strong> ಕೂಡುಂಕುಳಂ ಪರಮಾಣು ಸ್ಥಾವರದ ಮೊದಲ ಘಟಕವು ವಿದ್ಯುತ್ ಉತ್ಪಾದಿಸಲು ಸಿದ್ಧವಾಗಿದ್ದು, ಈ ಘಟಕದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ವಿದ್ಯುತ್ತನ್ನು ರಾಜ್ಯಕ್ಕೆ ನೀಡಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ.</p>.<p>ಇನ್ನು ಕೆಲವೇ ದಿನಗಳಲ್ಲಿ ಕೂಡುಂಕುಳಂ ಸ್ಥಾವರದ ಮೊದಲ ಘಟಕವು ವಿದ್ಯುತ್ ಉತ್ಪಾದನೆಯನ್ನು ಆರಂಭಿಸುತ್ತದೆ ಎಂದು ತಿಳಿದು ಬಂದಿದ್ದು, ಮಾರ್ಚ್ನಲ್ಲಿ ಈ ಬಗ್ಗೆ ಪತ್ರ ಬರೆದು ತಮಿಳುನಾಡಿನ ವಿದ್ಯುತ್ ಅಗತ್ಯದ ಬಗ್ಗೆ ತಮ್ಮ ಗಮನ ಸೆಳೆಯಲಾಗಿದೆ ಎಂದು ಜಯಲಲಿತಾ ಅವರು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.</p>.<p>`ಮೊದಲಿನ ಪತ್ರಕ್ಕೆ ಇದುವರೆಗೆ ಉತ್ತರ ಬಾರದಿರುವುದರಿಂದ ಈ ಪತ್ರ ಬರೆಯಲಾಗಿದ್ದು, ಮೊದಲ ಘಟಕದಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ನಮ್ಮ ರಾಜ್ಯಕ್ಕೇ ನೀಡಬೇಕು ಎಂದು ಮತ್ತೊಮ್ಮೆ ಕೋರುತ್ತಿದ್ದೇನೆ~ ಎಂದು ತಿಳಿಸಿದ್ದಾರೆ.</p>.<p>ನ್ಯಾಯಯುತವಾದ ಬೇಡಿಕೆಯನ್ನು ತಾವು ಈಡೇರಿಸುತ್ತೀರಿ ಎಂಬ ಭರವಸೆ ಇದೆ ಎಂದು ತಿಳಿಸಿರುವ ಜಯಲಲಿತಾ ಅವರು, ವಿದ್ಯುತ್ ವರ್ಗಾವಣೆ ಮಾರ್ಗದ ದಟ್ಟಣೆ ಮತ್ತು ರಾಜ್ಯದ ವಿದ್ಯುತ್ ಬೇಡಿಕೆ ಇವೆರಡನ್ನೂ ಗಮನದಲ್ಲಿ ಇಟ್ಟುಕೊಂಡು ಈ ಕೋರಿಕೆಯನ್ನು ಮನ್ನಿಸಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ.</p>.<p>ಸ್ಥಾವರದ ಮೊದಲ ಘಟಕದಲ್ಲಿ ಉತ್ಪಾದನೆಯಾಗಲಿರುವ ಎಲ್ಲಾ ವಿದ್ಯುತ್ತನ್ನು ತಮಿಳುನಾಡಿಗೇ ನೀಡಬೇಕು ಎಂದು ಆಗ್ರಹಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>