<p><strong>ಬೆಂಗಳೂರು:</strong> `ಕೃಷಿ ಕ್ಷೇತ್ರ ಎದುರಿಸುತ್ತಿರುವ ಬಿಕ್ಕಟ್ಟಿನಿಂದಾಗಿ ರೈತರು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ಗುಳೆ ಹೋಗಿ ವೃದ್ಧರು ಮಾತ್ರ ಉಳಿದಿದ್ದಾರೆ. ಸಮಾಜ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸಂಕಷ್ಟಗಳನ್ನು ದೂರ ಮಾಡುವಂತಹ ಸಾಹಿತ್ಯಗಳು ಮಾಧ್ಯಮಗಳಲ್ಲಿ ಪ್ರಕಟವಾಗಬೇಕು~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಹೇಳಿದರು.<br /> <br /> ಅಭಿನವ, ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಷ್ಠಾನ ಹಾಗೂ ಅವಧಿಯ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರ `ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್~ ಕೃತಿಯ ಕನ್ನಡ ಅನುವಾದ `ಬರ ಅಂದ್ರೆ ಎಲ್ಲರಿಗೂ ಇಷ್ಟ~ ಕೃತಿಯನ್ನು ಭಾನುವಾರ ಬಿಡುಗಡೆ ಮಾಡಿ ಮಾತನಾಡಿದರು. <br /> <br /> `ಗ್ರಾಮೀಣ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಎಚ್ಚರಿಕೆ ಗಂಟೆ ಬಾರಿಸಿರುವ ಪಿ. ಸಾಯಿನಾಥ್ ಅವರ ಮಾದರಿಯನ್ನು ಪತ್ರಕರ್ತರು ಅನುಸರಿಸಿ ಪತ್ರಿಕೋದ್ಯಮ ಕ್ಷೇತ್ರವನ್ನು ಉಳಿಸಬೇಕು. ಜನರು ಕತ್ತಲಿನಲ್ಲಿದ್ದು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಅವರನ್ನು ಬೆಳಕಿನತ್ತ ಕರೆದೊಯ್ಯುವ ಬರವಣಿಗೆಯ ಅಗತ್ಯ ಇದೆ~ ಎಂದು ಅವರು ಪ್ರತಿಪಾದಿಸಿದರು.<br /> <br /> ಹಿರಿಯ ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್, ಪಾರ್ವತಿ ಮೆನನ್, ಪೆಂಗ್ವಿನ್ ಇಂಡಿಯಾದ ಚಿಕಿ ಸರ್ಕಾರ್, ಅಭಿನವ ಪ್ರಕಾಶನದ ನ.ರವಿಕುಮಾರ್, ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೌಂಟರ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕೃಷಿ ಕ್ಷೇತ್ರ ಎದುರಿಸುತ್ತಿರುವ ಬಿಕ್ಕಟ್ಟಿನಿಂದಾಗಿ ರೈತರು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ಗುಳೆ ಹೋಗಿ ವೃದ್ಧರು ಮಾತ್ರ ಉಳಿದಿದ್ದಾರೆ. ಸಮಾಜ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸಂಕಷ್ಟಗಳನ್ನು ದೂರ ಮಾಡುವಂತಹ ಸಾಹಿತ್ಯಗಳು ಮಾಧ್ಯಮಗಳಲ್ಲಿ ಪ್ರಕಟವಾಗಬೇಕು~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಹೇಳಿದರು.<br /> <br /> ಅಭಿನವ, ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಷ್ಠಾನ ಹಾಗೂ ಅವಧಿಯ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರ `ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್~ ಕೃತಿಯ ಕನ್ನಡ ಅನುವಾದ `ಬರ ಅಂದ್ರೆ ಎಲ್ಲರಿಗೂ ಇಷ್ಟ~ ಕೃತಿಯನ್ನು ಭಾನುವಾರ ಬಿಡುಗಡೆ ಮಾಡಿ ಮಾತನಾಡಿದರು. <br /> <br /> `ಗ್ರಾಮೀಣ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಎಚ್ಚರಿಕೆ ಗಂಟೆ ಬಾರಿಸಿರುವ ಪಿ. ಸಾಯಿನಾಥ್ ಅವರ ಮಾದರಿಯನ್ನು ಪತ್ರಕರ್ತರು ಅನುಸರಿಸಿ ಪತ್ರಿಕೋದ್ಯಮ ಕ್ಷೇತ್ರವನ್ನು ಉಳಿಸಬೇಕು. ಜನರು ಕತ್ತಲಿನಲ್ಲಿದ್ದು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಅವರನ್ನು ಬೆಳಕಿನತ್ತ ಕರೆದೊಯ್ಯುವ ಬರವಣಿಗೆಯ ಅಗತ್ಯ ಇದೆ~ ಎಂದು ಅವರು ಪ್ರತಿಪಾದಿಸಿದರು.<br /> <br /> ಹಿರಿಯ ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್, ಪಾರ್ವತಿ ಮೆನನ್, ಪೆಂಗ್ವಿನ್ ಇಂಡಿಯಾದ ಚಿಕಿ ಸರ್ಕಾರ್, ಅಭಿನವ ಪ್ರಕಾಶನದ ನ.ರವಿಕುಮಾರ್, ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೌಂಟರ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>