<p><strong>ಹಿರಿಯೂರು: </strong>ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ದೇಶದ ಆಹಾರ ಸಮಸ್ಯೆ ನೀಗಿಸುವತ್ತ ವಿಜ್ಞಾನಿಗಳು ಗಮನಹರಿಸಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಪಿ. ರಮೇಶ್ ಕರೆ ನೀಡಿದರು.<br /> <br /> ನಗರದ ವಾಣಿ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ `ಮಹಾವಿದ್ಯಾಲಯ ಮತ್ತು ವಸತಿ ನಿಲಯಗಳ ವಾರ್ಷಿಕೋತ್ಸವ~ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಚಿತ್ರದುರ್ಗ ಜಿಲ್ಲೆಯಲ್ಲಿ ನೀರಾವರಿ ಆಶ್ರಿತ ಕೃಷಿ ಕಡಿಮೆ. ಬಹುತೇಕ ರೈತರು ಮಳೆಯನ್ನಾಧರಿಸಿ ವ್ಯವಸಾಯ ಚಟುವಟಿಕೆ ನಡೆಸುತ್ತಿದ್ದಾರೆ. ಕಡಿಮೆ ಮಳೆ ಬೀಳುವ ಪ್ರದೇಶಕ್ಕೆ ಹೊಂದುವ ಹೊಸ ತಳಿಗಳ ಆವಿಷ್ಕಾರ ಆಗಬೇಕಿದೆ. ಈ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳು ಪ್ರಯತ್ನ ನಡೆಸಬೇಕು ಎಂದ ತಿಳಿಸಿದರು.<br /> ವಿದ್ಯಾರ್ಥಿಗಳಿಗೆ ಪದವಿಗಿಂತ ಹೆಚ್ಚಾಗಿ ಸಂಶೋಧನೆಯತ್ತ ಆಸಕ್ತಿ ತೋರುವಂತೆ ಪ್ರೇರೇಪಿಸಬೇಕು ಎಂದು ಉಪನ್ಯಾಸಕರಿಗೆ ಸಲಹೆ ನೀಡಿದರು.<br /> <br /> ತೋಟಗಾರಿಕೆ ಕ್ಷೇತ್ರದಲ್ಲಿ ಸತತ ಪ್ರಯೋಗ ನಡೆಸುವ ಪ್ರಗತಿಪರ ರೈತರಿರುವ ಹಿರಿಯೂರಿಗೆ ತೋಟಗಾರಿಕೆ ಕಾಲೇಜು ಮಂಜೂರಾಗಿರುವುದು ಈ ಭಾಗದ ರೈತರ ಮತ್ತು ವಿದ್ಯಾರ್ಥಿಗಳ ಪುಣ್ಯ. ಸಂಶೋಧನಾ ಕ್ಷೇತ್ರದಲ್ಲಿ ಈ ಕಾಲೇಜು ರಾಷ್ಟ್ರಮಟ್ಟದಲ್ಲಿ ಹೆಸರು ಪಡೆಯುವಂತಾಗಬೇಕು ಎಂದು ಆಶಿಸಿದರು.<br /> <br /> ವಿಜ್ಞಾನ ಮಹಾವಿದ್ಯಾಲಯದ ಕುಲಸಚಿವ ಡಾ.ಎ.ಬಿ. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿಪತ್ರ ಪಡೆಯಲು ಮುಂದಾಗದೆ, ಶಿಸ್ತು, ಶ್ರದ್ಧೆ, ಪ್ರಾಮಾಣಿಕತೆಯ ಮೂಲಕ ಕಾಲೇಜಿನ ಘನತೆ ಎತ್ತಿ ಹಿಡಿಯುವಂತಹ ಸಾಧನೆ ತೋರಬೇಕು ಎಂದು ತಿಳಿಸಿದರು.<br /> <br /> ವ್ಯವಸ್ಥಾಪನಾ ಮಂಡಳಿ ಸದಸ್ಯ ಕೆ.ಎನ್. ಓಂಕಾರಪ್ಪ ಮಾತನಾಡಿದರು. ಮಹಾವಿದ್ಯಾಲಯದ ಡೀನ್ ಡಾ.ಪಿ. ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಡಿ. ತಿಮ್ಮಣ್ಣ, ಕೆ.ಬಿ. ವಿದ್ಯಾವತಿ, ತಿಪ್ಪೇಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ದೇಶದ ಆಹಾರ ಸಮಸ್ಯೆ ನೀಗಿಸುವತ್ತ ವಿಜ್ಞಾನಿಗಳು ಗಮನಹರಿಸಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಪಿ. ರಮೇಶ್ ಕರೆ ನೀಡಿದರು.<br /> <br /> ನಗರದ ವಾಣಿ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ `ಮಹಾವಿದ್ಯಾಲಯ ಮತ್ತು ವಸತಿ ನಿಲಯಗಳ ವಾರ್ಷಿಕೋತ್ಸವ~ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಚಿತ್ರದುರ್ಗ ಜಿಲ್ಲೆಯಲ್ಲಿ ನೀರಾವರಿ ಆಶ್ರಿತ ಕೃಷಿ ಕಡಿಮೆ. ಬಹುತೇಕ ರೈತರು ಮಳೆಯನ್ನಾಧರಿಸಿ ವ್ಯವಸಾಯ ಚಟುವಟಿಕೆ ನಡೆಸುತ್ತಿದ್ದಾರೆ. ಕಡಿಮೆ ಮಳೆ ಬೀಳುವ ಪ್ರದೇಶಕ್ಕೆ ಹೊಂದುವ ಹೊಸ ತಳಿಗಳ ಆವಿಷ್ಕಾರ ಆಗಬೇಕಿದೆ. ಈ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳು ಪ್ರಯತ್ನ ನಡೆಸಬೇಕು ಎಂದ ತಿಳಿಸಿದರು.<br /> ವಿದ್ಯಾರ್ಥಿಗಳಿಗೆ ಪದವಿಗಿಂತ ಹೆಚ್ಚಾಗಿ ಸಂಶೋಧನೆಯತ್ತ ಆಸಕ್ತಿ ತೋರುವಂತೆ ಪ್ರೇರೇಪಿಸಬೇಕು ಎಂದು ಉಪನ್ಯಾಸಕರಿಗೆ ಸಲಹೆ ನೀಡಿದರು.<br /> <br /> ತೋಟಗಾರಿಕೆ ಕ್ಷೇತ್ರದಲ್ಲಿ ಸತತ ಪ್ರಯೋಗ ನಡೆಸುವ ಪ್ರಗತಿಪರ ರೈತರಿರುವ ಹಿರಿಯೂರಿಗೆ ತೋಟಗಾರಿಕೆ ಕಾಲೇಜು ಮಂಜೂರಾಗಿರುವುದು ಈ ಭಾಗದ ರೈತರ ಮತ್ತು ವಿದ್ಯಾರ್ಥಿಗಳ ಪುಣ್ಯ. ಸಂಶೋಧನಾ ಕ್ಷೇತ್ರದಲ್ಲಿ ಈ ಕಾಲೇಜು ರಾಷ್ಟ್ರಮಟ್ಟದಲ್ಲಿ ಹೆಸರು ಪಡೆಯುವಂತಾಗಬೇಕು ಎಂದು ಆಶಿಸಿದರು.<br /> <br /> ವಿಜ್ಞಾನ ಮಹಾವಿದ್ಯಾಲಯದ ಕುಲಸಚಿವ ಡಾ.ಎ.ಬಿ. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿಪತ್ರ ಪಡೆಯಲು ಮುಂದಾಗದೆ, ಶಿಸ್ತು, ಶ್ರದ್ಧೆ, ಪ್ರಾಮಾಣಿಕತೆಯ ಮೂಲಕ ಕಾಲೇಜಿನ ಘನತೆ ಎತ್ತಿ ಹಿಡಿಯುವಂತಹ ಸಾಧನೆ ತೋರಬೇಕು ಎಂದು ತಿಳಿಸಿದರು.<br /> <br /> ವ್ಯವಸ್ಥಾಪನಾ ಮಂಡಳಿ ಸದಸ್ಯ ಕೆ.ಎನ್. ಓಂಕಾರಪ್ಪ ಮಾತನಾಡಿದರು. ಮಹಾವಿದ್ಯಾಲಯದ ಡೀನ್ ಡಾ.ಪಿ. ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಡಿ. ತಿಮ್ಮಣ್ಣ, ಕೆ.ಬಿ. ವಿದ್ಯಾವತಿ, ತಿಪ್ಪೇಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>